ಆಂದೋಲನ ಪುರವಣಿ

ಸಿನಿಮಾಲ್‌ : ʼ13ʼಕ್ಕೆ ಮೂರಲ್ಲ ಆರು ತಿಂಗಳಾಯಿತು

ಅಂತರ್ಮತೀಯ ಪ್ರೆಮಕಥೆಯನ್ನು ಹೇಳುವ ಚಿತ್ರವನ್ನು ಕೆ.ನರೇಂದ್ರಬಾಬು ನಿರ್ದೇಶಿಸಿದ್ದಾರೆ. ಅದರ ಹೆಸರು ‘13’. ಚಿತ್ರ ಮತ್ತು ಅದರ ಚಿತ್ರೀಕರಣದ ಕುರಿತಂತೆ ಅವರು ಹೇಳುವುದು ಹೀಗೆ: ಗಂಡ- ಹೆಂಡತಿ ಅಂದರೆ ಹೀಗಿರಬೇಕು ಎನ್ನುವಂತಿದ್ದ ದಂಪತಿಗಳಿಬ್ಬರೂ ತಮ್ಮದಲ್ಲದ ತಪ್ಪಿಗೆ ಇಡೀ ಜೀವನ ಯಾವ ರೀತಿ ಕಷ್ಟ ಪಡುತ್ತಾರೆ ಎಂಬುದನ್ನು ಹೇಳುವ, ಮನುಷ್ಯ ಸಂಬಂಧಗಳನ್ನು ಬೆಸೆಯುವ ಕಥೆಯಿದು. ಮುಹೂರ್ತದ ಸಂದರ್ಭದಲ್ಲಿ ಮೂರು ತಿಂಗಳಲ್ಲಿ ಮೊದಲ ಪ್ರತಿ ಹೊರತರುತ್ತೇನೆ ಎಂದು ಹೇಳಿದ್ದೆ, ಆದರೆ ಸಾಕಷ್ಟು ಅಡೆತಡೆಗಳುಂಟಾಗಿ ಆರು ತಿಂಗಳಾಯಿತು.

ಒಬ್ಬರಿಗೆ ಹಾರ್ಟ್‌ಅಟ್ಯಾಕ್ ಆಯ್ತೂ, ನನ್ನ ಕಾಲಿಗೂ ಪೆಟ್ಟಾಗಿ ಇನ್ನೂ ಸರಿಯಾಗಿಲ್ಲ, ಕೊಟ್ಟಿಗೆ ಹಾರದಲ್ಲಿ ಮಾಡಬೇಕೆಂದಿದ್ದ ಸೀನನ್ನು ಮಂಡ್ಯ ಹತ್ತಿರದ ಹಳ್ಳಿಯೊಂದರಲ್ಲಿ ಮಾಡಿದ್ದೇನೆ. ನನ್ನ ತಂಡ ಜೊತೆ ನಿಂತಿದ್ದರಿಂದ ಇಲ್ಲಿಯವರೆಗೆ ಬಂದಿದ್ದೇನೆ. ನಾಲ್ವರು ನಿರ್ಮಾಪಕರು ನಾಲ್ಕು ಕಂಬಗಳಂತೆ ನಿಂತಿದ್ದಾರೆ. ರಾಗಣ್ಣ ಅವರನ್ನು ಈ ವರೆಗೆ ನೋಡಿದ್ದಕ್ಕಿಂತ ಬೇರೆಯದೇ ರೀತಿ ನೋಡಬಹುದು. ರಾಘವೇಂದ್ರ ರಾಜ್‌ಕುಮಾರ್, ಶ್ರುತಿ ಜೋಡಿಯ ಈ ಚಿತ್ರದಲ್ಲಿ ಪ್ರಮೋದ್ ಶೆಟ್ಟಿ ಅವರು ಪ್ರಮುಖ ಪಾತ್ರಧಾರಿ. ಯುವಿ ಪ್ರೊಡಕ್ಷನ್ ಲಾಂಛನದಲ್ಲಿ ಈ ಚಿತ್ರವನ್ನು ಸಂಪತ್‌ಕುಮಾರ್, ಮಂಜುನಾಥ್, ಮಂಜುನಾಥಗೌಡ ಸೇರಿ ನಿರ್ಮಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡದೆ ಒಂದು ನೈಜ ಘಟನೆ ಈ ಚಿತ್ರಕ್ಕೆ ಸ್ಛೂರ್ತಿ ಎನ್ನಲಾಗಿದೆ. ಮಂಜುನಾಥ್ ನಾಯ್ಡು ಛಾಯಾಗ್ರಹಣ ಹಾಗೂ ಸೋಹನ್ ಬಾಬು ಅವರ ಸಂಗೀತ ಈ ಚಿತ್ರಕ್ಕಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago