ಆಂದೋಲನ ಪುರವಣಿ

ಸಿನಿಮಾಲ್‌ : ಅಪ್ಪು ಇಲ್ಲದ 2ನೇ ಹುಟ್ಟುಹಬ್ಬದ ದಿನ ಬಾನದಾರಿಯಲ್ಲಿ’, ? ಕಬ್ಜ’ ಎರಡು ಚಿತ್ರಗಳ ಬಿಡುಗಡೆ

ಪುನೀತ್ ರಾಜಕುಮಾರ್ ಅವರ ನಿಧನಾನಂತರ ಅವರನ್ನು ನೆನಪಿಸಿಕೊಳ್ಳದ ಕಾರ್ಯಕ್ರಮಗಳಿಲ್ಲ. ಚಲನಚಿತ್ರಗಳಿಲ್ಲ. ಫಿಲಂ ಫೇರ್ ಪ್ರಶಸ್ತಿ (ದಕ್ಷಿಣ) ಅವರಿಗೆ ಅರ್ಪಿಸಲಾಯಿತು. ಈ ತಿಂಗಳ ಕೊನೆಯ ವಾರದಲ್ಲಿ ನಡೆಯುವ ಕರ್ನಾಟಕ ಚಲನಚಿತ್ರ ಕಪ್‌ನ ಕ್ರಿಕೆಟ್ ಪಂದ್ಯಾಟದಲ್ಲಿ ಅವರ ವಿಜೃಂಭಣೆ ಇರುತ್ತದೆ.
ಮಾರ್ಚ್ 17, ಅಪ್ಪು ಅವರ ಜನ್ಮದಿನ. ಅಂದು ಎರಡು ಚಲನಚಿತ್ರಗಳು ತೆರೆಗೆ ಬರುವುದಾಗಿ ಪ್ರಕಟಿಸಿವೆ. ಅವುಗಳೆಂದರೆ ಗಣೇಶ್ ಮುಖ್ಯಭೂಮಿಕೆಯ ?ಭಾನದಾರಿಯಲ್ಲಿ’ ಮತ್ತು ಚಂದ್ರು ನಿರ್ಮಾಣ, ನಿರ್ದೇಶನದ ?ಕಬ್ಜ’.
ಗಣೇಶ್ ಅಭಿನಯದ ಚಿತ್ರದ ಹೆಸರು ಪುನೀತ್ ?ಭಾಗ್ಯವಂತ’ ಚಿತ್ರಕ್ಕಾಗಿ ಹಾಡಿದ ?ಬಾನದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದ’ ಹಾಡಿನ ಮೊದಲ ಶಬ್ದ. ಮಾರ್ಚ್ ವೇಳೆಗೆ ಚಿತ್ರ ಸಿದ್ಧವಾಗುವ ಕಾರಣ ನಿರ್ಮಾಪಕರು ಪುನೀತ್ ಜನ್ಮದಿನದಂದು ಅದನ್ನು ತೆರೆಗೆ ತರಲು ನಿರ್ಧರಿಸಿ ಆ ಕುರಿತು ಪ್ರಕಟಿಸಿಯೂ ಇದ್ದರು. ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರದಲ್ಲಿ ಗಣೇಶ್ ಅವರದು ಕ್ರಿಕೆಟ್ ಆಟಗಾರನ ಪಾತ್ರವಾದರೆ, ಅವರ ಜೋಡಿಯಾಗಿ ನಟಿಸಿರುವ ರುಕ್ಮಿಣಿ ವಸಂತ್ ಅವರದು ಮತ್ತೊಬ್ಬ ಕ್ರೀಡಾಪಟುವಿನ ಪಾತ್ರ. ಈ ಚಿತ್ರಕ್ಕೆ ಆಫ್ರಿಕದಲ್ಲಿ ಚಿತ್ರೀಕರಣವಾಗಿರುವುದು ವಿಶೇಷ.
?ಕಬ್ಜ’ ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ?ಕೆಜಿಎಫ್ ಚಾಪ್ಟರ್ 2’ರ ನಂತರ ಕನ್ನಡ ಚಿತ್ರರಂಗದತ್ತ ಭಾರತದ ಎಲ್ಲ ಭಾಷೆಗಳ ಚಿತ್ರೋದ್ಯಮಗಳೂ ಗಮನ ಹರಿಸಿದ್ದು, ?ಕಬ್ಜ’ ಚಿತ್ರದ ಕುರಿತಂತೆ, ಮುಂದಿನ ಅತೀ ಹೆಚ್ಚು ನಿರೀಕ್ಷೆಯ ಚಿತ್ರ ಎನ್ನಲಾಗಿದೆ. ಅದೇ ಹಾದಿಯ ಕಥಾನಕ ಇದು ಎನ್ನಲಾಗುತ್ತಿದ್ದು, ಉಪೇಂದ್ರ ಮತ್ತು ಸುದೀಪ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಧಾರಿಗಳಾಗಿರುವುದು ಈ ನಿರೀಕ್ಷೆಗೆ ಇನ್ನಷ್ಟು ಇಂಬು ಕೊಟ್ಟಂತಿದೆ.
ಪುನೀತ್ ರಾಜಕುಮಾರ್ ಮತ್ತು ತಮ್ಮ ನಡುವಿನ ಸ್ನೇಹ, ಪ್ರೀತಿ, ಅವರ ಸಲಹೆ, ಸೂಚನೆಗಳು ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಪರಿಣಾಮ ಬೀರಿದ್ದು, ಅವರ ಹುಟ್ಟುಹಬ್ಬದಂದು ಈ ಚಿತ್ರವನ್ನು ತೆರೆಗೆ ತರುವುದಾಗಿ ಚಂದ್ರು ಹೇಳಿದ್ದಾರೆ. ಕನ್ನಡದ ಈ ಚಿತ್ರವನ್ನು ವಿಶ್ವಾದ್ಯಂತ ತೆರೆಗೆ ತರಲಿದ್ದು, ಏಳು ಭಾಷೆಗಳಲ್ಲಿ ಈ ಚಿತ್ರವನ್ನು ನೋಡಬಹುದು ಎಂದಿದ್ದಾರೆ. ನಿರ್ಮಾಪಕ, ನಿರ್ದೇಶಕ ಚಂದ್ರು. ಎಲ್ಲ ಭಾಷೆಗಳಲ್ಲೂ ಚಿತ್ರಕ್ಕೆ ಬೇಡಿಕೆ ಇದ್ದು, ಅಲ್ಲಿನ ಪ್ರತಿಷ್ಠಿತ ಉದ್ಯಮಿಗಳು ಚಿತ್ರವನ್ನು ಬಿಡುಗಡೆ ಮಾಡಲು ಉತ್ಸುಕರಾಗಿದ್ದಾರಂತೆ.

andolanait

Recent Posts

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

6 mins ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

23 mins ago

ಹೊಸ ಶಾಸಕರನ್ನು ಮಂತ್ರಿ ಮಾಡಿದ್ರೆ ತಪ್ಪೇನು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

41 mins ago

ಎಚ್.ಡಿ.ಕುಮಾರಸ್ವಾಮಿ ಭೇಟಿ ಮಾಡಿದ ವಿಚಾರ: ಸಚಿವ ಪರಮೇಶ್ವರ್‌ ರಿಯಾಕ್ಷನ್‌

ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆಯಷ್ಟೇ ಗೃಹ ಸಚಿವ ಪರಮೇಶ್ವರ್‌ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಮಾತುಕತೆ ನಡೆಸಿದ್ದ…

1 hour ago

ಮಹದೇಶ್ವರ ಬೆಟ್ಟದಲ್ಲಿ ಶೀಘ್ರದಲ್ಲಿ ಕಾಮಗಾರಿ ಪೂರ್ಣ: ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ: ಸಚಿವ ಕೆ ವೆಂಕಟೇಶ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ…

2 hours ago

ಬೆಂಗಳೂರು ಏರ್‌ಪೋರ್ಟ್‌ ಹಾಗೂ ರಾಮನಗರದಲ್ಲಿ 3 ಕೋಟಿಗೂ ಅಧಿಕ ಡ್ರಗ್ಸ್‌ ಜಪ್ತಿ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ರಾಮನಗರದಲ್ಲಿ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಕೋಟ್ಯಾಂತರ ಮೌಲ್ಯದ ಡ್ರಗ್ಸ್‌ ಅನ್ನು ಅಧಿಕಾರಿಗಳು…

2 hours ago