ಆಂದೋಲನ ಪುರವಣಿ

ಸಿನಿಮಾಲ್‌ : ಅಪ್ಪು ಇಲ್ಲದ 2ನೇ ಹುಟ್ಟುಹಬ್ಬದ ದಿನ ಬಾನದಾರಿಯಲ್ಲಿ’, ? ಕಬ್ಜ’ ಎರಡು ಚಿತ್ರಗಳ ಬಿಡುಗಡೆ

ಪುನೀತ್ ರಾಜಕುಮಾರ್ ಅವರ ನಿಧನಾನಂತರ ಅವರನ್ನು ನೆನಪಿಸಿಕೊಳ್ಳದ ಕಾರ್ಯಕ್ರಮಗಳಿಲ್ಲ. ಚಲನಚಿತ್ರಗಳಿಲ್ಲ. ಫಿಲಂ ಫೇರ್ ಪ್ರಶಸ್ತಿ (ದಕ್ಷಿಣ) ಅವರಿಗೆ ಅರ್ಪಿಸಲಾಯಿತು. ಈ ತಿಂಗಳ ಕೊನೆಯ ವಾರದಲ್ಲಿ ನಡೆಯುವ ಕರ್ನಾಟಕ ಚಲನಚಿತ್ರ ಕಪ್‌ನ ಕ್ರಿಕೆಟ್ ಪಂದ್ಯಾಟದಲ್ಲಿ ಅವರ ವಿಜೃಂಭಣೆ ಇರುತ್ತದೆ.
ಮಾರ್ಚ್ 17, ಅಪ್ಪು ಅವರ ಜನ್ಮದಿನ. ಅಂದು ಎರಡು ಚಲನಚಿತ್ರಗಳು ತೆರೆಗೆ ಬರುವುದಾಗಿ ಪ್ರಕಟಿಸಿವೆ. ಅವುಗಳೆಂದರೆ ಗಣೇಶ್ ಮುಖ್ಯಭೂಮಿಕೆಯ ?ಭಾನದಾರಿಯಲ್ಲಿ’ ಮತ್ತು ಚಂದ್ರು ನಿರ್ಮಾಣ, ನಿರ್ದೇಶನದ ?ಕಬ್ಜ’.
ಗಣೇಶ್ ಅಭಿನಯದ ಚಿತ್ರದ ಹೆಸರು ಪುನೀತ್ ?ಭಾಗ್ಯವಂತ’ ಚಿತ್ರಕ್ಕಾಗಿ ಹಾಡಿದ ?ಬಾನದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದ’ ಹಾಡಿನ ಮೊದಲ ಶಬ್ದ. ಮಾರ್ಚ್ ವೇಳೆಗೆ ಚಿತ್ರ ಸಿದ್ಧವಾಗುವ ಕಾರಣ ನಿರ್ಮಾಪಕರು ಪುನೀತ್ ಜನ್ಮದಿನದಂದು ಅದನ್ನು ತೆರೆಗೆ ತರಲು ನಿರ್ಧರಿಸಿ ಆ ಕುರಿತು ಪ್ರಕಟಿಸಿಯೂ ಇದ್ದರು. ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರದಲ್ಲಿ ಗಣೇಶ್ ಅವರದು ಕ್ರಿಕೆಟ್ ಆಟಗಾರನ ಪಾತ್ರವಾದರೆ, ಅವರ ಜೋಡಿಯಾಗಿ ನಟಿಸಿರುವ ರುಕ್ಮಿಣಿ ವಸಂತ್ ಅವರದು ಮತ್ತೊಬ್ಬ ಕ್ರೀಡಾಪಟುವಿನ ಪಾತ್ರ. ಈ ಚಿತ್ರಕ್ಕೆ ಆಫ್ರಿಕದಲ್ಲಿ ಚಿತ್ರೀಕರಣವಾಗಿರುವುದು ವಿಶೇಷ.
?ಕಬ್ಜ’ ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ?ಕೆಜಿಎಫ್ ಚಾಪ್ಟರ್ 2’ರ ನಂತರ ಕನ್ನಡ ಚಿತ್ರರಂಗದತ್ತ ಭಾರತದ ಎಲ್ಲ ಭಾಷೆಗಳ ಚಿತ್ರೋದ್ಯಮಗಳೂ ಗಮನ ಹರಿಸಿದ್ದು, ?ಕಬ್ಜ’ ಚಿತ್ರದ ಕುರಿತಂತೆ, ಮುಂದಿನ ಅತೀ ಹೆಚ್ಚು ನಿರೀಕ್ಷೆಯ ಚಿತ್ರ ಎನ್ನಲಾಗಿದೆ. ಅದೇ ಹಾದಿಯ ಕಥಾನಕ ಇದು ಎನ್ನಲಾಗುತ್ತಿದ್ದು, ಉಪೇಂದ್ರ ಮತ್ತು ಸುದೀಪ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಧಾರಿಗಳಾಗಿರುವುದು ಈ ನಿರೀಕ್ಷೆಗೆ ಇನ್ನಷ್ಟು ಇಂಬು ಕೊಟ್ಟಂತಿದೆ.
ಪುನೀತ್ ರಾಜಕುಮಾರ್ ಮತ್ತು ತಮ್ಮ ನಡುವಿನ ಸ್ನೇಹ, ಪ್ರೀತಿ, ಅವರ ಸಲಹೆ, ಸೂಚನೆಗಳು ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಪರಿಣಾಮ ಬೀರಿದ್ದು, ಅವರ ಹುಟ್ಟುಹಬ್ಬದಂದು ಈ ಚಿತ್ರವನ್ನು ತೆರೆಗೆ ತರುವುದಾಗಿ ಚಂದ್ರು ಹೇಳಿದ್ದಾರೆ. ಕನ್ನಡದ ಈ ಚಿತ್ರವನ್ನು ವಿಶ್ವಾದ್ಯಂತ ತೆರೆಗೆ ತರಲಿದ್ದು, ಏಳು ಭಾಷೆಗಳಲ್ಲಿ ಈ ಚಿತ್ರವನ್ನು ನೋಡಬಹುದು ಎಂದಿದ್ದಾರೆ. ನಿರ್ಮಾಪಕ, ನಿರ್ದೇಶಕ ಚಂದ್ರು. ಎಲ್ಲ ಭಾಷೆಗಳಲ್ಲೂ ಚಿತ್ರಕ್ಕೆ ಬೇಡಿಕೆ ಇದ್ದು, ಅಲ್ಲಿನ ಪ್ರತಿಷ್ಠಿತ ಉದ್ಯಮಿಗಳು ಚಿತ್ರವನ್ನು ಬಿಡುಗಡೆ ಮಾಡಲು ಉತ್ಸುಕರಾಗಿದ್ದಾರಂತೆ.

andolanait

Recent Posts

ಸಿಲಿಂಡರ್ ಸ್ಪೋಟ ಪ್ರಕರಣ : ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ…

4 hours ago

ಮರ್ಯಾದೆಗೇಡು ಹತ್ಯೆ ವಿರೋಧಿಸಿ ಸಹಿ ಸಂಗ್ರಹ

ಮೈಸೂರು : ಹುಬ್ಬಳ್ಳಿಯಲ್ಲಿ ನಡೆದ ಮರ್ಯಾದಗೇಡು ಹತ್ಯೆ ವಿರೋಧಿಸಿ ಮತ್ತು ಮರ್ಯಾದೆಗೇಡು ಹತ್ಯೆ ತಡೆಗೆ ಕಠಿಣ ಕಾಯಿದೆ ರೂಪಿಸಬೇಕು ಎಂದು…

8 hours ago

ಕೆ.ಆರ್.ಆಸ್ಪತ್ರೆ ಶೆಡ್ ನಲ್ಲಿ ಬೆಂಕಿ : ಹಾಸಿಗೆಗಳು ಬೆಂಕಿಗಾಹುತಿ

ಮೈಸೂರು : ಇಲ್ಲಿನ ಕೆ.ಆರ್. ಆಸ್ಪತ್ರೆಯ ಶೆಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆಸ್ಪತ್ರೆಯ ಹಾಸಿಗೆಗಳು ಬೆಂಕಿಗಾಹುತಿಯಾಗಿವೆ. ಆಸ್ಪತ್ರೆಯ ಚೆಲುವಾಂಬ ವಾರ್ಡ್…

8 hours ago

ಹೊಸ ವರ್ಷಾಚರಣೆಗೆ ಮುನ್ನೆಚ್ಚರಿಕೆ : ಸೂಕ್ಷ ಪ್ರದೇಶಗಳ ಬಗ್ಗೆ ಸಮೀಕ್ಷೆ ವರದಿಗೆ ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುರಿತಂತೆ ಪ್ರಶ್ನೆಗಳು ಉದ್ಭವಿಸಿರುವ ಸಂದರ್ಭದಲ್ಲಿ, ಹೊಸ ವರ್ಷಾಚರಣೆಯ ವೇಳೆ ಯಾವುದೇ ಅವಘಡ ನಡೆಯದಂತೆ…

9 hours ago

ಸಿಲಿಂಡರ್‌ ಸ್ಪೋಟ ಪ್ರಕರಣ : ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳು ಮಂಜುಳ ಸಾವು

ಮೈಸೂರು : ಮೈಸೂರಿನ ವಿಶ್ವ ವಿಖ್ಯಾತ ಅರಮನೆ ಸಮೀಪ ಸಂಭವಿಸಿದ್ದ ಹೀಲಿಯಂ ಗ್ಯಾಸ್ ಸಿಲೆಂಡರ್ ಸ್ಫೋಟ ದುರಂತದಲ್ಲಿ ಸಾವಿನ ಸಂಖ್ಯೆ…

10 hours ago

ಇತಿಹಾಸ ಸೃಷ್ಟಿಸಿದ ಬಿಜೆಪಿ : ತಿರುವನಂತಪುರಂನ ಮೇಯರ್ ಆಗಿ ವಿ.ವಿ.ರಾಜೇಶ್ ಆಯ್ಕೆ

ತಿರುವನಂತಪುರಂ : ಬಿಜೆಪಿಯಿಂದ ಮೊದಲ ಬಾರಿಗೆ ತಿರುವನಂತಪುರಂ ನಗರ ಮೇಯರ್ ಆಗಿ ಆಯ್ಕೆಯಾಗುವ ಮೂಲಕ ವಿ.ವಿ.ರಾಜೇಶ್ ಇತಿಹಾಸ ನಿರ್ಮಿಸಿದ್ದಾರೆ. 49…

10 hours ago