ಆಂದೋಲನ ಪುರವಣಿ

ಸಿನಿಮಾಲ್‌ : ಅಪ್ಪು ಇಲ್ಲದ 2ನೇ ಹುಟ್ಟುಹಬ್ಬದ ದಿನ ಬಾನದಾರಿಯಲ್ಲಿ’, ? ಕಬ್ಜ’ ಎರಡು ಚಿತ್ರಗಳ ಬಿಡುಗಡೆ

ಪುನೀತ್ ರಾಜಕುಮಾರ್ ಅವರ ನಿಧನಾನಂತರ ಅವರನ್ನು ನೆನಪಿಸಿಕೊಳ್ಳದ ಕಾರ್ಯಕ್ರಮಗಳಿಲ್ಲ. ಚಲನಚಿತ್ರಗಳಿಲ್ಲ. ಫಿಲಂ ಫೇರ್ ಪ್ರಶಸ್ತಿ (ದಕ್ಷಿಣ) ಅವರಿಗೆ ಅರ್ಪಿಸಲಾಯಿತು. ಈ ತಿಂಗಳ ಕೊನೆಯ ವಾರದಲ್ಲಿ ನಡೆಯುವ ಕರ್ನಾಟಕ ಚಲನಚಿತ್ರ ಕಪ್‌ನ ಕ್ರಿಕೆಟ್ ಪಂದ್ಯಾಟದಲ್ಲಿ ಅವರ ವಿಜೃಂಭಣೆ ಇರುತ್ತದೆ.
ಮಾರ್ಚ್ 17, ಅಪ್ಪು ಅವರ ಜನ್ಮದಿನ. ಅಂದು ಎರಡು ಚಲನಚಿತ್ರಗಳು ತೆರೆಗೆ ಬರುವುದಾಗಿ ಪ್ರಕಟಿಸಿವೆ. ಅವುಗಳೆಂದರೆ ಗಣೇಶ್ ಮುಖ್ಯಭೂಮಿಕೆಯ ?ಭಾನದಾರಿಯಲ್ಲಿ’ ಮತ್ತು ಚಂದ್ರು ನಿರ್ಮಾಣ, ನಿರ್ದೇಶನದ ?ಕಬ್ಜ’.
ಗಣೇಶ್ ಅಭಿನಯದ ಚಿತ್ರದ ಹೆಸರು ಪುನೀತ್ ?ಭಾಗ್ಯವಂತ’ ಚಿತ್ರಕ್ಕಾಗಿ ಹಾಡಿದ ?ಬಾನದಾರಿಯಲ್ಲಿ ಸೂರ್ಯ ಜಾರಿ ಹೋದ, ಚಂದ್ರ ಮೇಲೆ ಬಂದ’ ಹಾಡಿನ ಮೊದಲ ಶಬ್ದ. ಮಾರ್ಚ್ ವೇಳೆಗೆ ಚಿತ್ರ ಸಿದ್ಧವಾಗುವ ಕಾರಣ ನಿರ್ಮಾಪಕರು ಪುನೀತ್ ಜನ್ಮದಿನದಂದು ಅದನ್ನು ತೆರೆಗೆ ತರಲು ನಿರ್ಧರಿಸಿ ಆ ಕುರಿತು ಪ್ರಕಟಿಸಿಯೂ ಇದ್ದರು. ಪ್ರೀತಂ ಗುಬ್ಬಿ ನಿರ್ದೇಶನದ ಈ ಚಿತ್ರದಲ್ಲಿ ಗಣೇಶ್ ಅವರದು ಕ್ರಿಕೆಟ್ ಆಟಗಾರನ ಪಾತ್ರವಾದರೆ, ಅವರ ಜೋಡಿಯಾಗಿ ನಟಿಸಿರುವ ರುಕ್ಮಿಣಿ ವಸಂತ್ ಅವರದು ಮತ್ತೊಬ್ಬ ಕ್ರೀಡಾಪಟುವಿನ ಪಾತ್ರ. ಈ ಚಿತ್ರಕ್ಕೆ ಆಫ್ರಿಕದಲ್ಲಿ ಚಿತ್ರೀಕರಣವಾಗಿರುವುದು ವಿಶೇಷ.
?ಕಬ್ಜ’ ಶ್ರೀಸಿದ್ದೇಶ್ವರ ಎಂಟರ್ ಪ್ರೈಸಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ?ಕೆಜಿಎಫ್ ಚಾಪ್ಟರ್ 2’ರ ನಂತರ ಕನ್ನಡ ಚಿತ್ರರಂಗದತ್ತ ಭಾರತದ ಎಲ್ಲ ಭಾಷೆಗಳ ಚಿತ್ರೋದ್ಯಮಗಳೂ ಗಮನ ಹರಿಸಿದ್ದು, ?ಕಬ್ಜ’ ಚಿತ್ರದ ಕುರಿತಂತೆ, ಮುಂದಿನ ಅತೀ ಹೆಚ್ಚು ನಿರೀಕ್ಷೆಯ ಚಿತ್ರ ಎನ್ನಲಾಗಿದೆ. ಅದೇ ಹಾದಿಯ ಕಥಾನಕ ಇದು ಎನ್ನಲಾಗುತ್ತಿದ್ದು, ಉಪೇಂದ್ರ ಮತ್ತು ಸುದೀಪ್ ಈ ಚಿತ್ರದಲ್ಲಿ ಪ್ರಮುಖ ಪಾತ್ರಧಾರಿಗಳಾಗಿರುವುದು ಈ ನಿರೀಕ್ಷೆಗೆ ಇನ್ನಷ್ಟು ಇಂಬು ಕೊಟ್ಟಂತಿದೆ.
ಪುನೀತ್ ರಾಜಕುಮಾರ್ ಮತ್ತು ತಮ್ಮ ನಡುವಿನ ಸ್ನೇಹ, ಪ್ರೀತಿ, ಅವರ ಸಲಹೆ, ಸೂಚನೆಗಳು ತಮ್ಮ ವೃತ್ತಿಜೀವನದಲ್ಲಿ ಸಾಕಷ್ಟು ಪರಿಣಾಮ ಬೀರಿದ್ದು, ಅವರ ಹುಟ್ಟುಹಬ್ಬದಂದು ಈ ಚಿತ್ರವನ್ನು ತೆರೆಗೆ ತರುವುದಾಗಿ ಚಂದ್ರು ಹೇಳಿದ್ದಾರೆ. ಕನ್ನಡದ ಈ ಚಿತ್ರವನ್ನು ವಿಶ್ವಾದ್ಯಂತ ತೆರೆಗೆ ತರಲಿದ್ದು, ಏಳು ಭಾಷೆಗಳಲ್ಲಿ ಈ ಚಿತ್ರವನ್ನು ನೋಡಬಹುದು ಎಂದಿದ್ದಾರೆ. ನಿರ್ಮಾಪಕ, ನಿರ್ದೇಶಕ ಚಂದ್ರು. ಎಲ್ಲ ಭಾಷೆಗಳಲ್ಲೂ ಚಿತ್ರಕ್ಕೆ ಬೇಡಿಕೆ ಇದ್ದು, ಅಲ್ಲಿನ ಪ್ರತಿಷ್ಠಿತ ಉದ್ಯಮಿಗಳು ಚಿತ್ರವನ್ನು ಬಿಡುಗಡೆ ಮಾಡಲು ಉತ್ಸುಕರಾಗಿದ್ದಾರಂತೆ.

andolanait

Recent Posts

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

1 hour ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

3 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

8 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

8 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

9 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

9 hours ago