ಇತ್ತೀಚೆಗೆ ಸ್ಟುಡಿಯೋಗಳಲ್ಲಿ ಚಿತ್ರೀಕರಣ ಅಪರೂಪವಾಗತೊಡಗಿದೆ. ಸುಸಜ್ಜಿತ ಸ್ಟುಡಿಯೋಗಳೂ ಕಡಿಮೆ ಎನ್ನಿ. ಮನಸ್ಸು ಮಾಡುತ್ತಿದ್ದರೆ, ಬೆಂಗಳೂರಿನಲ್ಲಿರುವ ಕಂಠೀರವ ಸ್ಟುಡಿಯೋವನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಬಹುದಾಗಿತ್ತು. ಕನ್ನಡ ಚಿತ್ರಗಳ ನಿರ್ಮಾಪಕರು ನೆರೆಯ ಆಂಧ್ರಪ್ರದೇಶದಲ್ಲಿರುವ ರಾಮೋಜಿ ಚಿತ್ರನಗರಿಯನ್ನು ಅವಲಂಬಿಸುತ್ತಾರೆ. ಈ ಪ್ರಸ್ತಾಪಕ್ಕೆ ಕಾರಣ ಮೊನ್ನೆ ಬೆಂಗಳೂರಿನ ರಾಮೋಹಳ್ಳಿಯಲ್ಲಿ ಈಗ ಸ್ಟುಡಿಯೋ ಆಗಿರುವ ಜಿ.ವಿ.ಅಯ್ಯರ್ ಅವರ ಮನೆಯಲ್ಲಿನ ಚಿತ್ರೀಕರಣವೊಂದರ ಸುದ್ದಿ. ಈಗ ಸಚಿವರಾಗಿರುವ ನಟ ಬಿ.ಸಿ.ಪಾಟೀಲ್ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಿಸುತ್ತಿರುವ ಚಿತ್ರದ ಚಿತ್ರೀಕರಣದ ಮುಕ್ತಾಯ ಅಲ್ಲಿ ಆಯಿತು. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರಕ್ಕಾಗಿ ಅಲ್ಲಿ ಗರಡಿಮನೆ ಸೆಟ್ ಹಾಕಲಾಗಿತ್ತು. ಪಾಟೀಲ್ ಅವರದು ಪೈಲ್ವಾನನ ಪಾತ್ರವಂತೆ. ಯಶಸ್ ಸೂರ್ಯ, ಸೋನಾಲ್ ಮೊಂತೆರೊ, ರವಿಶಂಕರ್, ಸುಜಯ್ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ತಾರಾಗಣದ ಈ ಚಿತ್ರದಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ದರ್ಶನ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿದ್ದಾರೆ. ಯೋಗರಾಜ ಭಟ್ ಪ್ರಕಾರ, ಗರಡಿ ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.
ಮೇಲುಕೋಟೆ: ಮಾ.೨೩ರಿಂದ ಏ.೩ರವರೆಗೆ ನಡೆಯುವ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿಯ ಪ್ರಖ್ಯಾತ ವೈರಮುಡಿ ಬ್ರಹ್ಮೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು…
ಮೊಬೈಲ್ ಸ್ಟೇಟಸ್ ! ಶಾಲೆಗಳಲ್ಲಿ ಮೊಬೈಲ್ ನಿಷೇಧ..? ಸರ್ಕಾರದ ಮೆಸೇಜ್ಗೆ ಲೈಕ್ ನೀಡಬಹುದು ಪೋಷಕರು ! ಆದರೆ, ಸ್ಟೂಡೆಂಟ್ಗಳು ?…
ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ…
ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕು ವನಸಿರಿಗೆ ಹೆಸರುವಾಸಿ, ಇಲ್ಲಿನ ಉತ್ತಮ ಹವಾಗುಣಕ್ಕೆ ಸನಿಹದಲ್ಲೇ ಇರುವ ಅರಣ್ಯ ಪ್ರದೇಶ ಕೂಡ…
ನವೀನ್ ಡಿಸೋಜ ೩೦ ಡಿಗ್ರಿ ಸೆಲ್ಸಿಯಸ್ ದಾಟುತ್ತಿರುವ ತಾಪಮಾನ; ಅಗತ್ಯ ಮುನ್ನೆಚ್ಚರಿಕೆಗೆ ವೈದ್ಯರ ಸಲಹೆ ಮಡಿಕೇರಿ: ಫೆಬ್ರವರಿ ತಿಂಗಳು ಕೊನೆಗೊಳ್ಳುತ್ತಿರುವಂತೆಯೇ…
ಸಫಾರಿ ಪುನಾರಂಭದ ಸಂಬಂಧ ‘ಆಂದೋಲನ’ ದಿನಪತ್ರಿಕೆಯು ನಡೆಸಿದ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ದೊರೆತಿದೆ. ಇದಕ್ಕೆ ಪೂರಕವಾಗಿ ಪತ್ರಿಕೆ ನಡೆಸಿದ…