ಆಂದೋಲನ ಪುರವಣಿ

ಸಿನಿಮಾಲ್‌ : ಅಯ್ಯರ್‌ ಸ್ಟುಡಿಯೋದಲ್ಲಿ ʼಗರಡಿʼ

ಇತ್ತೀಚೆಗೆ ಸ್ಟುಡಿಯೋಗಳಲ್ಲಿ ಚಿತ್ರೀಕರಣ ಅಪರೂಪವಾಗತೊಡಗಿದೆ. ಸುಸಜ್ಜಿತ ಸ್ಟುಡಿಯೋಗಳೂ ಕಡಿಮೆ ಎನ್ನಿ. ಮನಸ್ಸು ಮಾಡುತ್ತಿದ್ದರೆ, ಬೆಂಗಳೂರಿನಲ್ಲಿರುವ ಕಂಠೀರವ ಸ್ಟುಡಿಯೋವನ್ನು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಬಹುದಾಗಿತ್ತು. ಕನ್ನಡ ಚಿತ್ರಗಳ ನಿರ್ಮಾಪಕರು ನೆರೆಯ ಆಂಧ್ರಪ್ರದೇಶದಲ್ಲಿರುವ ರಾಮೋಜಿ ಚಿತ್ರನಗರಿಯನ್ನು ಅವಲಂಬಿಸುತ್ತಾರೆ. ಈ ಪ್ರಸ್ತಾಪಕ್ಕೆ ಕಾರಣ ಮೊನ್ನೆ ಬೆಂಗಳೂರಿನ ರಾಮೋಹಳ್ಳಿಯಲ್ಲಿ ಈಗ ಸ್ಟುಡಿಯೋ ಆಗಿರುವ ಜಿ.ವಿ.ಅಯ್ಯರ್‌ ಅವರ ಮನೆಯಲ್ಲಿನ ಚಿತ್ರೀಕರಣವೊಂದರ ಸುದ್ದಿ. ಈಗ ಸಚಿವರಾಗಿರುವ ನಟ ಬಿ.ಸಿ.ಪಾಟೀಲ್ ಪತ್ನಿ ವನಜಾ ಪಾಟೀಲ್ ಹಾಗೂ ಪುತ್ರಿ ಸೃಷ್ಟಿ ಪಾಟೀಲ್ ನಿರ್ಮಿಸುತ್ತಿರುವ ಚಿತ್ರದ ಚಿತ್ರೀಕರಣದ ಮುಕ್ತಾಯ ಅಲ್ಲಿ ಆಯಿತು. ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರಕ್ಕಾಗಿ ಅಲ್ಲಿ ಗರಡಿಮನೆ ಸೆಟ್ ಹಾಕಲಾಗಿತ್ತು. ಪಾಟೀಲ್ ಅವರದು ಪೈಲ್ವಾನನ ಪಾತ್ರವಂತೆ. ಯಶಸ್ ಸೂರ್ಯ, ಸೋನಾಲ್ ಮೊಂತೆರೊ, ರವಿಶಂಕರ್, ಸುಜಯ್‌ ಬೇಲೂರು, ರಘು, ಧರ್ಮಣ್ಣ, ಚೆಲುವರಾಜ್, ಪೃಥ್ವಿ ತಾರಾಗಣದ ಈ ಚಿತ್ರದಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್ ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟ ದರ್ಶನ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿದ್ದಾರೆ. ಯೋಗರಾಜ ಭಟ್ ಪ್ರಕಾರ, ಗರಡಿ ಹಳೇ ಮೈಸೂರು ಭಾಗದಲ್ಲಿ ನಡೆಯುವ ಕಥೆ. ದೇಸಿ ಕ್ರೀಡೆಗೆ ಒತ್ತು ನೀಡುವ ಸಲುವಾಗಿ ಈ ವಿಭಿನ್ನ ಕಥೆಯನ್ನು ಆಯ್ಕೆ ಮಾಡಿಕೊಂಡಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

9 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago