ಮೊನ್ನೆ ‘ಮೈ ಹೀರೋ’ ಹೆಸರಿನ ಕನ್ನಡ ಚಿತ್ರ ಬೆಂಗಳೂರಿನಲ್ಲಿ ಸೆಟ್ಟೇರಿತು. ಸಿನಿಮಾ ಅಧ್ಯಯನ ಮಾಡಿ ಚಿತ್ರರಂಗಕ್ಕೆ ಬರುತ್ತಿರುವವರ ಸಾಲಿಗೆ ಸೇರಿರುವ ಅವಿನಾಶ್ವಿಜಯ್ ಕುಮಾರ್ ನಿರ್ದೇಶನದ ಚಿತ್ರವಿದು. ಚಿಕ್ಕಂದಿನಿಂದಲೇ ರಂಗಭೂಮಿಯಲ್ಲಿ ಅನುಭವ ಪಡೆದ ಅವಿನಾಶ್ವಿಜಯ್ಕುಮಾರ್, ಮುಂಬೈಯಲ್ಲಿ ಅನುಪಂ ಖೇರ್ ಅವರ ಸಂಸ್ಥೆಯಲ್ಲಿಅಭಿನಯ ತರಬೇತಿ ಪಡೆದು, ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್ನಲ್ಲಿ ನಿರ್ದೇಶನ ಕಲಿತು ಬಂದವರು. ಇದೀಗ ಅವರದೇ ಎ.ವಿ. ಸ್ಟುಡಿಯೋಸ್ ಮೂಲಕ ನಿರ್ಮಿಸಿ, ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಚಿತ್ರ ‘ಮೈ ಹೀರೋ’. ಅವಿನಾಶ್ ಅವರ ‘ಪ್ರಕಾರ’ ಇದು ಬರೀ ಕರ್ನಾಟಕ, ಭಾರತ ಮಾತ್ರವಲ್ಲ. ಇಡೀ ಪ್ರಪಂಚದ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಹೆಣೆದಿರುವ ಕಥೆ. ಅಮೆರಿಕದಿಂದ ಬಂದ ಅಧಿಕಾರಿಯೊಬ್ಬರು (ಹಾಲಿವುಡ್ ನಟಜಿಲಾಲಿ ರೆಜ್ಕಲ್ಲಾಹ್) ಭಾರತಕ್ಕೆ ಬಂದಾಗ ಹುಡುಗ (ಬಾಲನಟ ವೇದಿಕ್ ಕೌಶಿಕ್)ನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನಕಥೆ ಸಾಗುತ್ತದೆ. ಪ್ರಕಾಶ್ ಬೆಳವಾಡಿ ಜಿಲ್ಲಾಧಿಕಾರಿಯಾಗಿ, ದತ್ತಣ್ಣ ಪುರೋಹಿತರ ಪಾತ್ರದಲ್ಲಿಅಭಿನಯಿಸುತ್ತಿದ್ದಾರೆ. ನಿರಂಜನ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ನಾಳೆ ಚಿಕ್ಕಮಗಳೂರಿನಲ್ಲಿ ಆರಂಭವಾಗುವ ಚಿತ್ರೀಕರಣ, ಮಧ್ಯಪ್ರದೇಶ ಹಾಗೂ ಯುಎಸ್ಎ ನಲ್ಲೂ ಮುಂದುವರಿಯಲಿದ್ದು, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಈ ಚಿತ್ರ ತಯಾರಾಗಲಿದೆಯಂತೆ. ಗಗನ್ ಬಧಾರಿಯಾ ಸಂಗೀತ ಸಂಯೋಜನೆ, ಕುಮಾರಗೌಡ ಛಾಯಾಗ್ರಹಣ ಇರುವ ಈ ಚಿತ್ರದಲ್ಲಿ ಇಲ್ಲಿನ ತಂತ್ರಜ್ಞರಷ್ಟೇ ಅಲ್ಲದೆ ಹಾಲಿವುಡ್ನ ತಂತ್ರಜ್ಞರು ಕೂಡ ಕೆಲಸ ಮಾಡಲಿದ್ದಾರೆ. ಹಾಲಿವುಡ್ ನಟಜಿಲಾಲಿ ರಂಗಭೂಮಿ ಕಲಾವಿದರೂ ಆಗಿದ್ದು. ಹದಿನೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ ಕೆಲವು ವೆಬ್ ಸೀರಿಸ್ಗಳಲ್ಲಿ ನಟಿಸಿದ್ದಾಗಿ ಈ ವೇಳೆ ಹೇಳಿದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಆರು ಹಸುಗಳು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ…
ನವೀನ್ ಡಿಸೋಜ: ಕೊಡಗು ಜಿಲ್ಲಾ ವರದಿಗಾರರು ಸಿದ್ದಾಪುರ: ತಿತಿಮತಿ ವಲಯದ ಚೆನ್ನಂಗಿ ಶಾಖೆಯ ವ್ಯಾಪ್ತಿಗೆ ಒಳಪಡುವ ಕೊಡಗು ಶ್ರೀರಂಗಪಟ್ಟಣ ಗ್ರಾಮದ…
ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ…
ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…
ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…
ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…