ಮೊನ್ನೆ ‘ಮೈ ಹೀರೋ’ ಹೆಸರಿನ ಕನ್ನಡ ಚಿತ್ರ ಬೆಂಗಳೂರಿನಲ್ಲಿ ಸೆಟ್ಟೇರಿತು. ಸಿನಿಮಾ ಅಧ್ಯಯನ ಮಾಡಿ ಚಿತ್ರರಂಗಕ್ಕೆ ಬರುತ್ತಿರುವವರ ಸಾಲಿಗೆ ಸೇರಿರುವ ಅವಿನಾಶ್ವಿಜಯ್ ಕುಮಾರ್ ನಿರ್ದೇಶನದ ಚಿತ್ರವಿದು. ಚಿಕ್ಕಂದಿನಿಂದಲೇ ರಂಗಭೂಮಿಯಲ್ಲಿ ಅನುಭವ ಪಡೆದ ಅವಿನಾಶ್ವಿಜಯ್ಕುಮಾರ್, ಮುಂಬೈಯಲ್ಲಿ ಅನುಪಂ ಖೇರ್ ಅವರ ಸಂಸ್ಥೆಯಲ್ಲಿಅಭಿನಯ ತರಬೇತಿ ಪಡೆದು, ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್ನಲ್ಲಿ ನಿರ್ದೇಶನ ಕಲಿತು ಬಂದವರು. ಇದೀಗ ಅವರದೇ ಎ.ವಿ. ಸ್ಟುಡಿಯೋಸ್ ಮೂಲಕ ನಿರ್ಮಿಸಿ, ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಚಿತ್ರ ‘ಮೈ ಹೀರೋ’. ಅವಿನಾಶ್ ಅವರ ‘ಪ್ರಕಾರ’ ಇದು ಬರೀ ಕರ್ನಾಟಕ, ಭಾರತ ಮಾತ್ರವಲ್ಲ. ಇಡೀ ಪ್ರಪಂಚದ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಹೆಣೆದಿರುವ ಕಥೆ. ಅಮೆರಿಕದಿಂದ ಬಂದ ಅಧಿಕಾರಿಯೊಬ್ಬರು (ಹಾಲಿವುಡ್ ನಟಜಿಲಾಲಿ ರೆಜ್ಕಲ್ಲಾಹ್) ಭಾರತಕ್ಕೆ ಬಂದಾಗ ಹುಡುಗ (ಬಾಲನಟ ವೇದಿಕ್ ಕೌಶಿಕ್)ನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನಕಥೆ ಸಾಗುತ್ತದೆ. ಪ್ರಕಾಶ್ ಬೆಳವಾಡಿ ಜಿಲ್ಲಾಧಿಕಾರಿಯಾಗಿ, ದತ್ತಣ್ಣ ಪುರೋಹಿತರ ಪಾತ್ರದಲ್ಲಿಅಭಿನಯಿಸುತ್ತಿದ್ದಾರೆ. ನಿರಂಜನ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ನಾಳೆ ಚಿಕ್ಕಮಗಳೂರಿನಲ್ಲಿ ಆರಂಭವಾಗುವ ಚಿತ್ರೀಕರಣ, ಮಧ್ಯಪ್ರದೇಶ ಹಾಗೂ ಯುಎಸ್ಎ ನಲ್ಲೂ ಮುಂದುವರಿಯಲಿದ್ದು, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಈ ಚಿತ್ರ ತಯಾರಾಗಲಿದೆಯಂತೆ. ಗಗನ್ ಬಧಾರಿಯಾ ಸಂಗೀತ ಸಂಯೋಜನೆ, ಕುಮಾರಗೌಡ ಛಾಯಾಗ್ರಹಣ ಇರುವ ಈ ಚಿತ್ರದಲ್ಲಿ ಇಲ್ಲಿನ ತಂತ್ರಜ್ಞರಷ್ಟೇ ಅಲ್ಲದೆ ಹಾಲಿವುಡ್ನ ತಂತ್ರಜ್ಞರು ಕೂಡ ಕೆಲಸ ಮಾಡಲಿದ್ದಾರೆ. ಹಾಲಿವುಡ್ ನಟಜಿಲಾಲಿ ರಂಗಭೂಮಿ ಕಲಾವಿದರೂ ಆಗಿದ್ದು. ಹದಿನೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ ಕೆಲವು ವೆಬ್ ಸೀರಿಸ್ಗಳಲ್ಲಿ ನಟಿಸಿದ್ದಾಗಿ ಈ ವೇಳೆ ಹೇಳಿದರು.
ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ ಭಾರತದ ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…