ಮೊನ್ನೆ ‘ಮೈ ಹೀರೋ’ ಹೆಸರಿನ ಕನ್ನಡ ಚಿತ್ರ ಬೆಂಗಳೂರಿನಲ್ಲಿ ಸೆಟ್ಟೇರಿತು. ಸಿನಿಮಾ ಅಧ್ಯಯನ ಮಾಡಿ ಚಿತ್ರರಂಗಕ್ಕೆ ಬರುತ್ತಿರುವವರ ಸಾಲಿಗೆ ಸೇರಿರುವ ಅವಿನಾಶ್ವಿಜಯ್ ಕುಮಾರ್ ನಿರ್ದೇಶನದ ಚಿತ್ರವಿದು. ಚಿಕ್ಕಂದಿನಿಂದಲೇ ರಂಗಭೂಮಿಯಲ್ಲಿ ಅನುಭವ ಪಡೆದ ಅವಿನಾಶ್ವಿಜಯ್ಕುಮಾರ್, ಮುಂಬೈಯಲ್ಲಿ ಅನುಪಂ ಖೇರ್ ಅವರ ಸಂಸ್ಥೆಯಲ್ಲಿಅಭಿನಯ ತರಬೇತಿ ಪಡೆದು, ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್ನಲ್ಲಿ ನಿರ್ದೇಶನ ಕಲಿತು ಬಂದವರು. ಇದೀಗ ಅವರದೇ ಎ.ವಿ. ಸ್ಟುಡಿಯೋಸ್ ಮೂಲಕ ನಿರ್ಮಿಸಿ, ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಚಿತ್ರ ‘ಮೈ ಹೀರೋ’. ಅವಿನಾಶ್ ಅವರ ‘ಪ್ರಕಾರ’ ಇದು ಬರೀ ಕರ್ನಾಟಕ, ಭಾರತ ಮಾತ್ರವಲ್ಲ. ಇಡೀ ಪ್ರಪಂಚದ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಹೆಣೆದಿರುವ ಕಥೆ. ಅಮೆರಿಕದಿಂದ ಬಂದ ಅಧಿಕಾರಿಯೊಬ್ಬರು (ಹಾಲಿವುಡ್ ನಟಜಿಲಾಲಿ ರೆಜ್ಕಲ್ಲಾಹ್) ಭಾರತಕ್ಕೆ ಬಂದಾಗ ಹುಡುಗ (ಬಾಲನಟ ವೇದಿಕ್ ಕೌಶಿಕ್)ನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನಕಥೆ ಸಾಗುತ್ತದೆ. ಪ್ರಕಾಶ್ ಬೆಳವಾಡಿ ಜಿಲ್ಲಾಧಿಕಾರಿಯಾಗಿ, ದತ್ತಣ್ಣ ಪುರೋಹಿತರ ಪಾತ್ರದಲ್ಲಿಅಭಿನಯಿಸುತ್ತಿದ್ದಾರೆ. ನಿರಂಜನ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ನಾಳೆ ಚಿಕ್ಕಮಗಳೂರಿನಲ್ಲಿ ಆರಂಭವಾಗುವ ಚಿತ್ರೀಕರಣ, ಮಧ್ಯಪ್ರದೇಶ ಹಾಗೂ ಯುಎಸ್ಎ ನಲ್ಲೂ ಮುಂದುವರಿಯಲಿದ್ದು, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಈ ಚಿತ್ರ ತಯಾರಾಗಲಿದೆಯಂತೆ. ಗಗನ್ ಬಧಾರಿಯಾ ಸಂಗೀತ ಸಂಯೋಜನೆ, ಕುಮಾರಗೌಡ ಛಾಯಾಗ್ರಹಣ ಇರುವ ಈ ಚಿತ್ರದಲ್ಲಿ ಇಲ್ಲಿನ ತಂತ್ರಜ್ಞರಷ್ಟೇ ಅಲ್ಲದೆ ಹಾಲಿವುಡ್ನ ತಂತ್ರಜ್ಞರು ಕೂಡ ಕೆಲಸ ಮಾಡಲಿದ್ದಾರೆ. ಹಾಲಿವುಡ್ ನಟಜಿಲಾಲಿ ರಂಗಭೂಮಿ ಕಲಾವಿದರೂ ಆಗಿದ್ದು. ಹದಿನೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ ಕೆಲವು ವೆಬ್ ಸೀರಿಸ್ಗಳಲ್ಲಿ ನಟಿಸಿದ್ದಾಗಿ ಈ ವೇಳೆ ಹೇಳಿದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…