ಆಂದೋಲನ ಪುರವಣಿ

ಸಿನಿಮಾಲ್‌ : ಹಾಲಿವುಡ್ ನಟ ನಟಿಸಲಿರುವ ಕನ್ನಡ ಚಿತ್ರ ‘ಮೈ ಹೀರೋ’

ಮೊನ್ನೆ ‘ಮೈ ಹೀರೋ’ ಹೆಸರಿನ ಕನ್ನಡ ಚಿತ್ರ ಬೆಂಗಳೂರಿನಲ್ಲಿ ಸೆಟ್ಟೇರಿತು. ಸಿನಿಮಾ ಅಧ್ಯಯನ ಮಾಡಿ ಚಿತ್ರರಂಗಕ್ಕೆ ಬರುತ್ತಿರುವವರ ಸಾಲಿಗೆ ಸೇರಿರುವ ಅವಿನಾಶ್‌ವಿಜಯ್‌ ಕುಮಾರ್‌  ನಿರ್ದೇಶನದ ಚಿತ್ರವಿದು. ಚಿಕ್ಕಂದಿನಿಂದಲೇ ರಂಗಭೂಮಿಯಲ್ಲಿ ಅನುಭವ ಪಡೆದ ಅವಿನಾಶ್‌ವಿಜಯ್‌ಕುಮಾರ್‌, ಮುಂಬೈಯಲ್ಲಿ ಅನುಪಂ ಖೇರ್ ಅವರ ಸಂಸ್ಥೆಯಲ್ಲಿಅಭಿನಯ ತರಬೇತಿ ಪಡೆದು, ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್‌ನಲ್ಲಿ ನಿರ್ದೇಶನ ಕಲಿತು ಬಂದವರು. ಇದೀಗ ಅವರದೇ ಎ.ವಿ. ಸ್ಟುಡಿಯೋಸ್ ಮೂಲಕ ನಿರ್ಮಿಸಿ, ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಚಿತ್ರ ‘ಮೈ ಹೀರೋ’. ಅವಿನಾಶ್ ಅವರ ‘ಪ್ರಕಾರ’ ಇದು ಬರೀ ಕರ್ನಾಟಕ, ಭಾರತ ಮಾತ್ರವಲ್ಲ. ಇಡೀ ಪ್ರಪಂಚದ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಹೆಣೆದಿರುವ ಕಥೆ. ಅಮೆರಿಕದಿಂದ ಬಂದ ಅಧಿಕಾರಿಯೊಬ್ಬರು (ಹಾಲಿವುಡ್ ನಟಜಿಲಾಲಿ ರೆಜ್‌ಕಲ್ಲಾಹ್) ಭಾರತಕ್ಕೆ ಬಂದಾಗ ಹುಡುಗ (ಬಾಲನಟ ವೇದಿಕ್ ಕೌಶಿಕ್)ನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನಕಥೆ ಸಾಗುತ್ತದೆ. ಪ್ರಕಾಶ್ ಬೆಳವಾಡಿ ಜಿಲ್ಲಾಧಿಕಾರಿಯಾಗಿ, ದತ್ತಣ್ಣ ಪುರೋಹಿತರ ಪಾತ್ರದಲ್ಲಿಅಭಿನಯಿಸುತ್ತಿದ್ದಾರೆ. ನಿರಂಜನ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ನಾಳೆ ಚಿಕ್ಕಮಗಳೂರಿನಲ್ಲಿ ಆರಂಭವಾಗುವ ಚಿತ್ರೀಕರಣ, ಮಧ್ಯಪ್ರದೇಶ ಹಾಗೂ ಯುಎಸ್‌ಎ ನಲ್ಲೂ ಮುಂದುವರಿಯಲಿದ್ದು, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಈ ಚಿತ್ರ ತಯಾರಾಗಲಿದೆಯಂತೆ. ಗಗನ್ ಬಧಾರಿಯಾ ಸಂಗೀತ ಸಂಯೋಜನೆ, ಕುಮಾರಗೌಡ ಛಾಯಾಗ್ರಹಣ ಇರುವ ಈ ಚಿತ್ರದಲ್ಲಿ ಇಲ್ಲಿನ ತಂತ್ರಜ್ಞರಷ್ಟೇ ಅಲ್ಲದೆ ಹಾಲಿವುಡ್‌ನ ತಂತ್ರಜ್ಞರು ಕೂಡ ಕೆಲಸ ಮಾಡಲಿದ್ದಾರೆ. ಹಾಲಿವುಡ್ ನಟಜಿಲಾಲಿ ರಂಗಭೂಮಿ ಕಲಾವಿದರೂ ಆಗಿದ್ದು. ಹದಿನೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ ಕೆಲವು ವೆಬ್ ಸೀರಿಸ್‌ಗಳಲ್ಲಿ ನಟಿಸಿದ್ದಾಗಿ ಈ ವೇಳೆ ಹೇಳಿದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago