ಆಂದೋಲನ ಪುರವಣಿ

ಸಿನಿಮಾಲ್‌ : ಹಾಲಿವುಡ್ ನಟ ನಟಿಸಲಿರುವ ಕನ್ನಡ ಚಿತ್ರ ‘ಮೈ ಹೀರೋ’

ಮೊನ್ನೆ ‘ಮೈ ಹೀರೋ’ ಹೆಸರಿನ ಕನ್ನಡ ಚಿತ್ರ ಬೆಂಗಳೂರಿನಲ್ಲಿ ಸೆಟ್ಟೇರಿತು. ಸಿನಿಮಾ ಅಧ್ಯಯನ ಮಾಡಿ ಚಿತ್ರರಂಗಕ್ಕೆ ಬರುತ್ತಿರುವವರ ಸಾಲಿಗೆ ಸೇರಿರುವ ಅವಿನಾಶ್‌ವಿಜಯ್‌ ಕುಮಾರ್‌  ನಿರ್ದೇಶನದ ಚಿತ್ರವಿದು. ಚಿಕ್ಕಂದಿನಿಂದಲೇ ರಂಗಭೂಮಿಯಲ್ಲಿ ಅನುಭವ ಪಡೆದ ಅವಿನಾಶ್‌ವಿಜಯ್‌ಕುಮಾರ್‌, ಮುಂಬೈಯಲ್ಲಿ ಅನುಪಂ ಖೇರ್ ಅವರ ಸಂಸ್ಥೆಯಲ್ಲಿಅಭಿನಯ ತರಬೇತಿ ಪಡೆದು, ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್‌ನಲ್ಲಿ ನಿರ್ದೇಶನ ಕಲಿತು ಬಂದವರು. ಇದೀಗ ಅವರದೇ ಎ.ವಿ. ಸ್ಟುಡಿಯೋಸ್ ಮೂಲಕ ನಿರ್ಮಿಸಿ, ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಚಿತ್ರ ‘ಮೈ ಹೀರೋ’. ಅವಿನಾಶ್ ಅವರ ‘ಪ್ರಕಾರ’ ಇದು ಬರೀ ಕರ್ನಾಟಕ, ಭಾರತ ಮಾತ್ರವಲ್ಲ. ಇಡೀ ಪ್ರಪಂಚದ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಹೆಣೆದಿರುವ ಕಥೆ. ಅಮೆರಿಕದಿಂದ ಬಂದ ಅಧಿಕಾರಿಯೊಬ್ಬರು (ಹಾಲಿವುಡ್ ನಟಜಿಲಾಲಿ ರೆಜ್‌ಕಲ್ಲಾಹ್) ಭಾರತಕ್ಕೆ ಬಂದಾಗ ಹುಡುಗ (ಬಾಲನಟ ವೇದಿಕ್ ಕೌಶಿಕ್)ನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನಕಥೆ ಸಾಗುತ್ತದೆ. ಪ್ರಕಾಶ್ ಬೆಳವಾಡಿ ಜಿಲ್ಲಾಧಿಕಾರಿಯಾಗಿ, ದತ್ತಣ್ಣ ಪುರೋಹಿತರ ಪಾತ್ರದಲ್ಲಿಅಭಿನಯಿಸುತ್ತಿದ್ದಾರೆ. ನಿರಂಜನ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ನಾಳೆ ಚಿಕ್ಕಮಗಳೂರಿನಲ್ಲಿ ಆರಂಭವಾಗುವ ಚಿತ್ರೀಕರಣ, ಮಧ್ಯಪ್ರದೇಶ ಹಾಗೂ ಯುಎಸ್‌ಎ ನಲ್ಲೂ ಮುಂದುವರಿಯಲಿದ್ದು, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಈ ಚಿತ್ರ ತಯಾರಾಗಲಿದೆಯಂತೆ. ಗಗನ್ ಬಧಾರಿಯಾ ಸಂಗೀತ ಸಂಯೋಜನೆ, ಕುಮಾರಗೌಡ ಛಾಯಾಗ್ರಹಣ ಇರುವ ಈ ಚಿತ್ರದಲ್ಲಿ ಇಲ್ಲಿನ ತಂತ್ರಜ್ಞರಷ್ಟೇ ಅಲ್ಲದೆ ಹಾಲಿವುಡ್‌ನ ತಂತ್ರಜ್ಞರು ಕೂಡ ಕೆಲಸ ಮಾಡಲಿದ್ದಾರೆ. ಹಾಲಿವುಡ್ ನಟಜಿಲಾಲಿ ರಂಗಭೂಮಿ ಕಲಾವಿದರೂ ಆಗಿದ್ದು. ಹದಿನೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ ಕೆಲವು ವೆಬ್ ಸೀರಿಸ್‌ಗಳಲ್ಲಿ ನಟಿಸಿದ್ದಾಗಿ ಈ ವೇಳೆ ಹೇಳಿದರು.

andolanait

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

44 mins ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

47 mins ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

56 mins ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

1 hour ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

1 hour ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

1 hour ago