ಆಂದೋಲನ ಪುರವಣಿ

ಸಿನಿಮಾಲ್‌ : ಹಾಲಿವುಡ್ ನಟ ನಟಿಸಲಿರುವ ಕನ್ನಡ ಚಿತ್ರ ‘ಮೈ ಹೀರೋ’

ಮೊನ್ನೆ ‘ಮೈ ಹೀರೋ’ ಹೆಸರಿನ ಕನ್ನಡ ಚಿತ್ರ ಬೆಂಗಳೂರಿನಲ್ಲಿ ಸೆಟ್ಟೇರಿತು. ಸಿನಿಮಾ ಅಧ್ಯಯನ ಮಾಡಿ ಚಿತ್ರರಂಗಕ್ಕೆ ಬರುತ್ತಿರುವವರ ಸಾಲಿಗೆ ಸೇರಿರುವ ಅವಿನಾಶ್‌ವಿಜಯ್‌ ಕುಮಾರ್‌  ನಿರ್ದೇಶನದ ಚಿತ್ರವಿದು. ಚಿಕ್ಕಂದಿನಿಂದಲೇ ರಂಗಭೂಮಿಯಲ್ಲಿ ಅನುಭವ ಪಡೆದ ಅವಿನಾಶ್‌ವಿಜಯ್‌ಕುಮಾರ್‌, ಮುಂಬೈಯಲ್ಲಿ ಅನುಪಂ ಖೇರ್ ಅವರ ಸಂಸ್ಥೆಯಲ್ಲಿಅಭಿನಯ ತರಬೇತಿ ಪಡೆದು, ಸ್ಯಾನ್ ಫ್ರಾನ್ಸಿಸ್ಕೊ ಫಿಲಂ ಸ್ಕೂಲ್‌ನಲ್ಲಿ ನಿರ್ದೇಶನ ಕಲಿತು ಬಂದವರು. ಇದೀಗ ಅವರದೇ ಎ.ವಿ. ಸ್ಟುಡಿಯೋಸ್ ಮೂಲಕ ನಿರ್ಮಿಸಿ, ಮೊದಲ ಬಾರಿಗೆ ನಿರ್ದೇಶಿಸುತ್ತಿರುವ ಚಿತ್ರ ‘ಮೈ ಹೀರೋ’. ಅವಿನಾಶ್ ಅವರ ‘ಪ್ರಕಾರ’ ಇದು ಬರೀ ಕರ್ನಾಟಕ, ಭಾರತ ಮಾತ್ರವಲ್ಲ. ಇಡೀ ಪ್ರಪಂಚದ ಸಾಮಾಜಿಕ ಸಮಸ್ಯೆಗಳನ್ನು ಕೇಂದ್ರವಾಗಿಟ್ಟುಕೊಂಡು ಹೆಣೆದಿರುವ ಕಥೆ. ಅಮೆರಿಕದಿಂದ ಬಂದ ಅಧಿಕಾರಿಯೊಬ್ಬರು (ಹಾಲಿವುಡ್ ನಟಜಿಲಾಲಿ ರೆಜ್‌ಕಲ್ಲಾಹ್) ಭಾರತಕ್ಕೆ ಬಂದಾಗ ಹುಡುಗ (ಬಾಲನಟ ವೇದಿಕ್ ಕೌಶಿಕ್)ನೊಬ್ಬನ ಪರಿಚಯವಾಗುತ್ತದೆ. ಇವರಿಬ್ಬರ ನಡುವೆ ಹೆಚ್ಚಿನಕಥೆ ಸಾಗುತ್ತದೆ. ಪ್ರಕಾಶ್ ಬೆಳವಾಡಿ ಜಿಲ್ಲಾಧಿಕಾರಿಯಾಗಿ, ದತ್ತಣ್ಣ ಪುರೋಹಿತರ ಪಾತ್ರದಲ್ಲಿಅಭಿನಯಿಸುತ್ತಿದ್ದಾರೆ. ನಿರಂಜನ್ ದೇಶಪಾಂಡೆ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ‘ನಾಳೆ ಚಿಕ್ಕಮಗಳೂರಿನಲ್ಲಿ ಆರಂಭವಾಗುವ ಚಿತ್ರೀಕರಣ, ಮಧ್ಯಪ್ರದೇಶ ಹಾಗೂ ಯುಎಸ್‌ಎ ನಲ್ಲೂ ಮುಂದುವರಿಯಲಿದ್ದು, ಕನ್ನಡ, ಹಿಂದಿ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಈ ಚಿತ್ರ ತಯಾರಾಗಲಿದೆಯಂತೆ. ಗಗನ್ ಬಧಾರಿಯಾ ಸಂಗೀತ ಸಂಯೋಜನೆ, ಕುಮಾರಗೌಡ ಛಾಯಾಗ್ರಹಣ ಇರುವ ಈ ಚಿತ್ರದಲ್ಲಿ ಇಲ್ಲಿನ ತಂತ್ರಜ್ಞರಷ್ಟೇ ಅಲ್ಲದೆ ಹಾಲಿವುಡ್‌ನ ತಂತ್ರಜ್ಞರು ಕೂಡ ಕೆಲಸ ಮಾಡಲಿದ್ದಾರೆ. ಹಾಲಿವುಡ್ ನಟಜಿಲಾಲಿ ರಂಗಭೂಮಿ ಕಲಾವಿದರೂ ಆಗಿದ್ದು. ಹದಿನೈದಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಗೂ ಕೆಲವು ವೆಬ್ ಸೀರಿಸ್‌ಗಳಲ್ಲಿ ನಟಿಸಿದ್ದಾಗಿ ಈ ವೇಳೆ ಹೇಳಿದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

19 mins ago

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

17 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

20 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

22 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

22 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

22 hours ago