ಆಂದೋಲನ ಪುರವಣಿ

ಸಿನಿಮಾಲ್‌ : ‘ಕಾಂತಾರ’ ಆಸ್ಕರ್ ಅಂಗಳದಲ್ಲಿ

ಮನರಂಜನೋದ್ಯಮದಲ್ಲಿ 3,000 ಕೋಟಿ ರೂ. ಹೂಡಲಿರುವ
ಹೊಂಬಾಳೆ ಸಂಸ್ಥೆಯ ‘ಕಾಂತಾರ’ ಆಸ್ಕರ್ ಅಂಗಳದಲ್ಲಿ


ಹೊಂಬಾಳೆ ಸಂಸ್ಥೆ ನಿರ್ಮಿಸಿರುವ ‘ಕಾಂತಾರ’ ಚಿತ್ರ ಅಕಾಡೆಮಿ ಪ್ರಶಸ್ತಿಗಳ ಸ್ಪರ್ಧೆಗೆ ಅರ್ಹತೆ ಪಡೆದಿರುವ ದೇಶವಿದೇಶಗಳ 301 ಚಿತ್ರಗಳಲ್ಲಿ ಒಂದು. ಇದಕ್ಕಾಗಿ ಸಂಸ್ಥೆ ಹರ್ಷ ವ್ಯಕ್ತಪಡಿಸಿದೆ. ಇದೀಗ ಕಳೆದ ವರ್ಷದ ದಾಖಲೆಗೆ ಹೊಸ ಸೇರ್ಪಡೆ. ಕಳೆದ ವರ್ಷ ಕನ್ನಡ ಚಿತ್ರಗಳ ಮಾರುಕಟ್ಟೆ ಸಾಧ್ಯತೆಯನ್ನು ತೋರಿಸಿಕೊಟ್ಟಿತು. ಅದು ನಿರ್ಮಿಸಿದ ‘ಕೆಜಿಎಫ್ ಚಾಪ್ಟರ್ 2’ ಮತ್ತು ‘ಕಾಂತಾರ’ ಚಿತ್ರಗಳು ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ದಾಖಲೆ ಬರೆಯಿತು. ಕನ್ನಡದಲ್ಲಿ ನಿರ್ಮಿಸಿ, ಇತರ ಭಾಷೆಗಳಿಗೆ ಡಬ್ ಮಾಡುವುದಷ್ಟೇ ಅಲ್ಲದೆ, ಇತರ ಭಾಷೆಗಳಲ್ಲೂ ಹೊಂಬಾಳೆ ಚಿತ್ರಗಳನ್ನು ನಿರ್ಮಿಸುತ್ತಿದೆ. ‘ಮುಂದಿನ 5 ವರ್ಷಗಳಲ್ಲಿ ಮನರಂಜನಾ ಕ್ಷೇತ್ರದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಿದ್ದೇವೆ’ ಎಂದು ಹೊಂಬಾಳೆಯ ವಿಜಯ್‌ ಕಿರಗಂದೂರು ತಮ್ಮ ನಿರ್ಮಾಣ ಸಂಸ್ಥೆಯ ಜಾಲತಾಣದಲ್ಲಿ ಹೊಸ ವರ್ಷದ ಶುಭಾಶಯ ಕೋರುತ್ತಾ ಪ್ರಕಟಿಸಿದ್ದಾರೆ.
‘ಹೊಂಬಾಳೆ ಫಿಲಮ್ಸ್ ಸಂಸ್ಥೆ ಇಂದು ದೇಶದ ಪ್ರತಿಷ್ಠಿತ ಚಿತ್ರ ನಿರ್ಮಾಣ ಎಂಬ ಹೆಗ್ಗಳಿಕೆ ಪಡೆದಿರುವುದು ಚಿತ್ರ ಪ್ರೇಮಿಗಳ ಬೆಂಬಲದಿಂದ’ ಎಂದಿರುವ ಅವರು, ‘ನಾಡಿನ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿ, ಮತ್ತು ಸಂಪ್ರದಾಯಗಳನ್ನು ವಿಶ್ವಕ್ಕೆ ಪರಿಚಯಿಸುವ ಇನ್ನಷ್ಟು ಉತ್ತಮ ಗುಣಮಟ್ಟದ ಚಲನಚಿತ್ರಗಳನ್ನುನಿರ್ಮಿಸಿ ನಾಡಿಗೆ ಸಮರ್ಪಿಸುವ ಸಂಕಲ್ಪ ಮಾಡಿದ್ದೇವೆ. ಇಂದು ಮನರಂಜನಾ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು ನಮ್ಮ ದೇಶದಲ್ಲಿ ವೈವಿದ್ಯಮಯ ಗುಣಮಟ್ಟದ ಚಿತ್ರ ನಿರ್ಮಾಣಕ್ಕೆ ವಿಫುಲ ಅವಕಾಶವಿದೆ. ದೇಶದ ಯುವಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಹೆಚ್ಚು ಪ್ರೋತ್ಸಾಹಿಸುವ ಸಲುವಾಗಿ ಮನರಂಜನಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಮಾಡಲು ನಾವು ಉದ್ದೇಶಿಸಿದ್ದೇವೆ. ನಾಡಿನ ಜನತೆ ಹೊಂಬಾಳೆ ಫಿಲಮ್ಸ್ ಮೇಲೆ ಇಟ್ಟಿರುವ ನಂಬಿಕೆ, ಭರವಸೆಗಳನ್ನು ಹುಸಿಯಾಗದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದು, ಇನ್ನಷ್ಟು ಹೊಸತನದ ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಸಂಕಲ್ಪ ಮಾಡಿದ್ದೇವೆ’ ಎಂದಿದ್ದಾರೆ.
ಚಿತ್ರ ನಿರ್ಮಾಣ ಮಾತ್ರವಲ್ಲದೆ, ಮನರಂಜನೋದ್ಯಮ ಕ್ಷೇತ್ರಕ್ಕೆ ಬೇರೆ ರೀತಿಯಲ್ಲಿ ಈ ಹೂಡಿಕೆ ಆಗಲಿದೆೆಯೇ ಎನ್ನುವುದರ ಕುರಿತಂತೆ ಅಲ್ಲೇನೂ ಹೇಳಿಲ್ಲ. ಅವರು ನಿರ್ಮಾಪಕರ ಸಂಘದ ಕಟ್ಟಡಕ್ಕೆ ಉದಾರ ದೇಣಿಗೆ ನೀಡಿರುವುದನ್ನು ಸಂಘವು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಕೃತಜ್ಞತೆ ಹೇಳಿ ಪ್ರಕಟಿಸಿದೆ.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago