ಮನರಂಜನೋದ್ಯಮದಲ್ಲಿ 3,000 ಕೋಟಿ ರೂ. ಹೂಡಲಿರುವ
ಹೊಂಬಾಳೆ ಸಂಸ್ಥೆಯ ‘ಕಾಂತಾರ’ ಆಸ್ಕರ್ ಅಂಗಳದಲ್ಲಿ
ಹೊಂಬಾಳೆ ಸಂಸ್ಥೆ ನಿರ್ಮಿಸಿರುವ ‘ಕಾಂತಾರ’ ಚಿತ್ರ ಅಕಾಡೆಮಿ ಪ್ರಶಸ್ತಿಗಳ ಸ್ಪರ್ಧೆಗೆ ಅರ್ಹತೆ ಪಡೆದಿರುವ ದೇಶವಿದೇಶಗಳ 301 ಚಿತ್ರಗಳಲ್ಲಿ ಒಂದು. ಇದಕ್ಕಾಗಿ ಸಂಸ್ಥೆ ಹರ್ಷ ವ್ಯಕ್ತಪಡಿಸಿದೆ. ಇದೀಗ ಕಳೆದ ವರ್ಷದ ದಾಖಲೆಗೆ ಹೊಸ ಸೇರ್ಪಡೆ. ಕಳೆದ ವರ್ಷ ಕನ್ನಡ ಚಿತ್ರಗಳ ಮಾರುಕಟ್ಟೆ ಸಾಧ್ಯತೆಯನ್ನು ತೋರಿಸಿಕೊಟ್ಟಿತು. ಅದು ನಿರ್ಮಿಸಿದ ‘ಕೆಜಿಎಫ್ ಚಾಪ್ಟರ್ 2’ ಮತ್ತು ‘ಕಾಂತಾರ’ ಚಿತ್ರಗಳು ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ದಾಖಲೆ ಬರೆಯಿತು. ಕನ್ನಡದಲ್ಲಿ ನಿರ್ಮಿಸಿ, ಇತರ ಭಾಷೆಗಳಿಗೆ ಡಬ್ ಮಾಡುವುದಷ್ಟೇ ಅಲ್ಲದೆ, ಇತರ ಭಾಷೆಗಳಲ್ಲೂ ಹೊಂಬಾಳೆ ಚಿತ್ರಗಳನ್ನು ನಿರ್ಮಿಸುತ್ತಿದೆ. ‘ಮುಂದಿನ 5 ವರ್ಷಗಳಲ್ಲಿ ಮನರಂಜನಾ ಕ್ಷೇತ್ರದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಿದ್ದೇವೆ’ ಎಂದು ಹೊಂಬಾಳೆಯ ವಿಜಯ್ ಕಿರಗಂದೂರು ತಮ್ಮ ನಿರ್ಮಾಣ ಸಂಸ್ಥೆಯ ಜಾಲತಾಣದಲ್ಲಿ ಹೊಸ ವರ್ಷದ ಶುಭಾಶಯ ಕೋರುತ್ತಾ ಪ್ರಕಟಿಸಿದ್ದಾರೆ.
‘ಹೊಂಬಾಳೆ ಫಿಲಮ್ಸ್ ಸಂಸ್ಥೆ ಇಂದು ದೇಶದ ಪ್ರತಿಷ್ಠಿತ ಚಿತ್ರ ನಿರ್ಮಾಣ ಎಂಬ ಹೆಗ್ಗಳಿಕೆ ಪಡೆದಿರುವುದು ಚಿತ್ರ ಪ್ರೇಮಿಗಳ ಬೆಂಬಲದಿಂದ’ ಎಂದಿರುವ ಅವರು, ‘ನಾಡಿನ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿ, ಮತ್ತು ಸಂಪ್ರದಾಯಗಳನ್ನು ವಿಶ್ವಕ್ಕೆ ಪರಿಚಯಿಸುವ ಇನ್ನಷ್ಟು ಉತ್ತಮ ಗುಣಮಟ್ಟದ ಚಲನಚಿತ್ರಗಳನ್ನುನಿರ್ಮಿಸಿ ನಾಡಿಗೆ ಸಮರ್ಪಿಸುವ ಸಂಕಲ್ಪ ಮಾಡಿದ್ದೇವೆ. ಇಂದು ಮನರಂಜನಾ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು ನಮ್ಮ ದೇಶದಲ್ಲಿ ವೈವಿದ್ಯಮಯ ಗುಣಮಟ್ಟದ ಚಿತ್ರ ನಿರ್ಮಾಣಕ್ಕೆ ವಿಫುಲ ಅವಕಾಶವಿದೆ. ದೇಶದ ಯುವಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಹೆಚ್ಚು ಪ್ರೋತ್ಸಾಹಿಸುವ ಸಲುವಾಗಿ ಮನರಂಜನಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಮಾಡಲು ನಾವು ಉದ್ದೇಶಿಸಿದ್ದೇವೆ. ನಾಡಿನ ಜನತೆ ಹೊಂಬಾಳೆ ಫಿಲಮ್ಸ್ ಮೇಲೆ ಇಟ್ಟಿರುವ ನಂಬಿಕೆ, ಭರವಸೆಗಳನ್ನು ಹುಸಿಯಾಗದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದು, ಇನ್ನಷ್ಟು ಹೊಸತನದ ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಸಂಕಲ್ಪ ಮಾಡಿದ್ದೇವೆ’ ಎಂದಿದ್ದಾರೆ.
ಚಿತ್ರ ನಿರ್ಮಾಣ ಮಾತ್ರವಲ್ಲದೆ, ಮನರಂಜನೋದ್ಯಮ ಕ್ಷೇತ್ರಕ್ಕೆ ಬೇರೆ ರೀತಿಯಲ್ಲಿ ಈ ಹೂಡಿಕೆ ಆಗಲಿದೆೆಯೇ ಎನ್ನುವುದರ ಕುರಿತಂತೆ ಅಲ್ಲೇನೂ ಹೇಳಿಲ್ಲ. ಅವರು ನಿರ್ಮಾಪಕರ ಸಂಘದ ಕಟ್ಟಡಕ್ಕೆ ಉದಾರ ದೇಣಿಗೆ ನೀಡಿರುವುದನ್ನು ಸಂಘವು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಕೃತಜ್ಞತೆ ಹೇಳಿ ಪ್ರಕಟಿಸಿದೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…