ಆಂದೋಲನ ಪುರವಣಿ

ಸಿನಿಮಾಲ್‌ : ‘ಕಾಂತಾರ’ ಆಸ್ಕರ್ ಅಂಗಳದಲ್ಲಿ

ಮನರಂಜನೋದ್ಯಮದಲ್ಲಿ 3,000 ಕೋಟಿ ರೂ. ಹೂಡಲಿರುವ
ಹೊಂಬಾಳೆ ಸಂಸ್ಥೆಯ ‘ಕಾಂತಾರ’ ಆಸ್ಕರ್ ಅಂಗಳದಲ್ಲಿ


ಹೊಂಬಾಳೆ ಸಂಸ್ಥೆ ನಿರ್ಮಿಸಿರುವ ‘ಕಾಂತಾರ’ ಚಿತ್ರ ಅಕಾಡೆಮಿ ಪ್ರಶಸ್ತಿಗಳ ಸ್ಪರ್ಧೆಗೆ ಅರ್ಹತೆ ಪಡೆದಿರುವ ದೇಶವಿದೇಶಗಳ 301 ಚಿತ್ರಗಳಲ್ಲಿ ಒಂದು. ಇದಕ್ಕಾಗಿ ಸಂಸ್ಥೆ ಹರ್ಷ ವ್ಯಕ್ತಪಡಿಸಿದೆ. ಇದೀಗ ಕಳೆದ ವರ್ಷದ ದಾಖಲೆಗೆ ಹೊಸ ಸೇರ್ಪಡೆ. ಕಳೆದ ವರ್ಷ ಕನ್ನಡ ಚಿತ್ರಗಳ ಮಾರುಕಟ್ಟೆ ಸಾಧ್ಯತೆಯನ್ನು ತೋರಿಸಿಕೊಟ್ಟಿತು. ಅದು ನಿರ್ಮಿಸಿದ ‘ಕೆಜಿಎಫ್ ಚಾಪ್ಟರ್ 2’ ಮತ್ತು ‘ಕಾಂತಾರ’ ಚಿತ್ರಗಳು ಗಲ್ಲಾಪೆಟ್ಟಿಗೆ ಗಳಿಕೆಯಲ್ಲಿ ದಾಖಲೆ ಬರೆಯಿತು. ಕನ್ನಡದಲ್ಲಿ ನಿರ್ಮಿಸಿ, ಇತರ ಭಾಷೆಗಳಿಗೆ ಡಬ್ ಮಾಡುವುದಷ್ಟೇ ಅಲ್ಲದೆ, ಇತರ ಭಾಷೆಗಳಲ್ಲೂ ಹೊಂಬಾಳೆ ಚಿತ್ರಗಳನ್ನು ನಿರ್ಮಿಸುತ್ತಿದೆ. ‘ಮುಂದಿನ 5 ವರ್ಷಗಳಲ್ಲಿ ಮನರಂಜನಾ ಕ್ಷೇತ್ರದಲ್ಲಿ ಸುಮಾರು ಮೂರು ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡಲು ಉದ್ದೇಶಿಸಿದ್ದೇವೆ’ ಎಂದು ಹೊಂಬಾಳೆಯ ವಿಜಯ್‌ ಕಿರಗಂದೂರು ತಮ್ಮ ನಿರ್ಮಾಣ ಸಂಸ್ಥೆಯ ಜಾಲತಾಣದಲ್ಲಿ ಹೊಸ ವರ್ಷದ ಶುಭಾಶಯ ಕೋರುತ್ತಾ ಪ್ರಕಟಿಸಿದ್ದಾರೆ.
‘ಹೊಂಬಾಳೆ ಫಿಲಮ್ಸ್ ಸಂಸ್ಥೆ ಇಂದು ದೇಶದ ಪ್ರತಿಷ್ಠಿತ ಚಿತ್ರ ನಿರ್ಮಾಣ ಎಂಬ ಹೆಗ್ಗಳಿಕೆ ಪಡೆದಿರುವುದು ಚಿತ್ರ ಪ್ರೇಮಿಗಳ ಬೆಂಬಲದಿಂದ’ ಎಂದಿರುವ ಅವರು, ‘ನಾಡಿನ ಇತಿಹಾಸ, ಪರಂಪರೆ, ಕಲೆ- ಸಂಸ್ಕೃತಿ, ಮತ್ತು ಸಂಪ್ರದಾಯಗಳನ್ನು ವಿಶ್ವಕ್ಕೆ ಪರಿಚಯಿಸುವ ಇನ್ನಷ್ಟು ಉತ್ತಮ ಗುಣಮಟ್ಟದ ಚಲನಚಿತ್ರಗಳನ್ನುನಿರ್ಮಿಸಿ ನಾಡಿಗೆ ಸಮರ್ಪಿಸುವ ಸಂಕಲ್ಪ ಮಾಡಿದ್ದೇವೆ. ಇಂದು ಮನರಂಜನಾ ಕ್ಷೇತ್ರ ಬೃಹದಾಕಾರವಾಗಿ ಬೆಳೆದಿದ್ದು ನಮ್ಮ ದೇಶದಲ್ಲಿ ವೈವಿದ್ಯಮಯ ಗುಣಮಟ್ಟದ ಚಿತ್ರ ನಿರ್ಮಾಣಕ್ಕೆ ವಿಫುಲ ಅವಕಾಶವಿದೆ. ದೇಶದ ಯುವಪೀಳಿಗೆಯನ್ನು ಜಾಗೃತಗೊಳಿಸುವ ಮತ್ತು ಹೆಚ್ಚು ಪ್ರೋತ್ಸಾಹಿಸುವ ಸಲುವಾಗಿ ಮನರಂಜನಾ ಕ್ಷೇತ್ರದಲ್ಲಿ ಪರಿಣಾಮಕಾರಿಯಾಗಿ ಸೇವೆ ಮಾಡಲು ನಾವು ಉದ್ದೇಶಿಸಿದ್ದೇವೆ. ನಾಡಿನ ಜನತೆ ಹೊಂಬಾಳೆ ಫಿಲಮ್ಸ್ ಮೇಲೆ ಇಟ್ಟಿರುವ ನಂಬಿಕೆ, ಭರವಸೆಗಳನ್ನು ಹುಸಿಯಾಗದಂತೆ ನೋಡಿಕೊಳ್ಳಲು ನಾವು ಬದ್ಧರಾಗಿದ್ದು, ಇನ್ನಷ್ಟು ಹೊಸತನದ ವಿಭಿನ್ನ ಚಿತ್ರಗಳನ್ನು ನಿರ್ಮಿಸುವ ಮೂಲಕ ಮನರಂಜನಾ ಕ್ಷೇತ್ರಕ್ಕೆ ಇನ್ನಷ್ಟು ಕೊಡುಗೆ ನೀಡುವ ಸಂಕಲ್ಪ ಮಾಡಿದ್ದೇವೆ’ ಎಂದಿದ್ದಾರೆ.
ಚಿತ್ರ ನಿರ್ಮಾಣ ಮಾತ್ರವಲ್ಲದೆ, ಮನರಂಜನೋದ್ಯಮ ಕ್ಷೇತ್ರಕ್ಕೆ ಬೇರೆ ರೀತಿಯಲ್ಲಿ ಈ ಹೂಡಿಕೆ ಆಗಲಿದೆೆಯೇ ಎನ್ನುವುದರ ಕುರಿತಂತೆ ಅಲ್ಲೇನೂ ಹೇಳಿಲ್ಲ. ಅವರು ನಿರ್ಮಾಪಕರ ಸಂಘದ ಕಟ್ಟಡಕ್ಕೆ ಉದಾರ ದೇಣಿಗೆ ನೀಡಿರುವುದನ್ನು ಸಂಘವು ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ಕೃತಜ್ಞತೆ ಹೇಳಿ ಪ್ರಕಟಿಸಿದೆ.

andolanait

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

29 mins ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

31 mins ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

33 mins ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

36 mins ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

38 mins ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

46 mins ago