ಅಣ್ಣ ಜಗ್ಗೇಶ್ ಅವರ ಸಲಹೆಯಂತೆ ಕಳೆದ ಐದು ವರ್ಷಗಳ ಕಾಲ ನಟನೆಯಿಂದ ದೂರವಿದ್ದ ನಟ ಕೋಮಲ್ಕುಮಾರ್ ಇದೀಗ ಮತ್ತೆ ಬಣ್ಣ ಹಚ್ಚಿದ್ದಾರೆ. ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು ‘ಕಾಲಾಯತಸ್ಮೈ ನಮಃ?. ಈ ಚಿತ್ರವನ್ನು ಕೋಮಲ್ ಅವರ ಪತ್ನಿ ಅನುಸೂಯ ನಿರ್ಮಿಸುತ್ತಿದ್ದು, ಮತಿವಣ್ಣನ್ ನಿರ್ದೇಶಿಸುತ್ತಿದ್ದಾರೆ. ಅದರ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ನಟ ಪ್ರಕಾಶರೈ ಅಭಿನಯದ ಚಿತ್ರೀಕರಣ ಇಲ್ಲಿ ನಡೆಯುತ್ತಿದೆ ಎಂದು ಚಿತ್ರತಂಡ ಹೇಳಿದೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ.ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೋಮಲ್ಕುಮಾರ್, ಪ್ರಕಾಶ್ರೈ ಅವರೊಂದಿಗೆ ಆಸಿಯಾ ಫಿರ್ದೋಸ್, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…