ಅಣ್ಣ ಜಗ್ಗೇಶ್ ಅವರ ಸಲಹೆಯಂತೆ ಕಳೆದ ಐದು ವರ್ಷಗಳ ಕಾಲ ನಟನೆಯಿಂದ ದೂರವಿದ್ದ ನಟ ಕೋಮಲ್ಕುಮಾರ್ ಇದೀಗ ಮತ್ತೆ ಬಣ್ಣ ಹಚ್ಚಿದ್ದಾರೆ. ಅವರು ಅಭಿನಯಿಸುತ್ತಿರುವ ಹೊಸ ಚಿತ್ರದ ಹೆಸರು ‘ಕಾಲಾಯತಸ್ಮೈ ನಮಃ?. ಈ ಚಿತ್ರವನ್ನು ಕೋಮಲ್ ಅವರ ಪತ್ನಿ ಅನುಸೂಯ ನಿರ್ಮಿಸುತ್ತಿದ್ದು, ಮತಿವಣ್ಣನ್ ನಿರ್ದೇಶಿಸುತ್ತಿದ್ದಾರೆ. ಅದರ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದೆ. ತಂಡಕ್ಕೆ ಹೊಸದಾಗಿ ಸೇರ್ಪಡೆಯಾಗಿರುವ ನಟ ಪ್ರಕಾಶರೈ ಅಭಿನಯದ ಚಿತ್ರೀಕರಣ ಇಲ್ಲಿ ನಡೆಯುತ್ತಿದೆ ಎಂದು ಚಿತ್ರತಂಡ ಹೇಳಿದೆ. ಎಮಿಲ್ ಸಂಗೀತ ನಿರ್ದೇಶನ ಹಾಗೂ ರಾಕೇಶ್ ಸಿ.ತಿಲಕ್ ಛಾಯಾಗ್ರಹಣ ಈ ಚಿತ್ರಕ್ಕಿದೆ. ಕೋಮಲ್ಕುಮಾರ್, ಪ್ರಕಾಶ್ರೈ ಅವರೊಂದಿಗೆ ಆಸಿಯಾ ಫಿರ್ದೋಸ್, ಸುಚೀಂದ್ರ ಪ್ರಸಾದ್, ತಿಲಕ್, ಯತಿರಾಜ್ ಜಗ್ಗೇಶ್ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…