ಆಂದೋಲನ ಪುರವಣಿ

ಸಿನಿಮಾಲ್‌ : ಅಂದೇ ಬರಲಿದೆ ಮಂಸೋರೆ ಚಿತ್ರ 19.20.21

ಕಳೆದ ವರ್ಷ ಮಾರ್ಚ್ 3ನೇ ತಾರೀಕಿನಂದು ಬೆಂಗಳೂರು ಅಂತಾಷ್ಟ್ರೀಯ ಚಿತ್ರೋತ್ಸವದ 13ನೇ ಆವೃತ್ತಿ ಉದ್ಘಾಟನೆ ಆಗಿತ್ತು. ಕಾಕತಾಳೀಯವಾಗಿ ಅಂದು ಕನ್ನಡದ ಮೊದಲ ಚಿತ್ರ ‘ಸತಿ ಸುಲೋಚನಾ’ ತೆರೆ ಕಂಡ ದಿನ. ಮುಂದಿನ ದಿನಗಳಲ್ಲಿಉದ್ಘಾಟನೆಉನ್ನು ಮಾರ್ಚ್ 3ರಂದೇ ಮಾಡುವುದಾಗಿ ಚಿತ್ರೋತ್ಸವ ಉದ್ಘಾಟಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದೇ ಅಲ್ಲದೆ ಅದನ್ನು ‘ವಿಶ್ವ ಕನ್ನಡ ಸಿನಿಮಾ ದಿನ’ ಎಂದು ಕರೆಯುವುದಾಗಿಯೂ ಹೇಳಿದರು.
ಈ ಬಾರಿ ಚಿತ್ರೋತ್ಸವ ಮೂರರಿಂದ ಇಪ್ಪತ್ಮೂರಕ್ಕೆ ಹೋಗಿದೆ. ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಉನ್ನು ಸಚಿವ ಆರ್.ಅಶೋಕ್ ಅವರ ಹೆಗಲಿಗೆ ವರ್ಗಾಯಿಸಿದ್ದಾರೆ. ಅಶೋಕ್ ಅವರಂತೂ ಕನ್ನಡದ ಚಿತ್ರಗಳಿಗೆ ಆದ್ಯತೆ ಸಿಗಬೇಕು, ಹಳೆಯ ಕನ್ನಡ ಕ್ಲಾಸಿಕ್‌ಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶಿಸಬೇಕು ಎಂದು ಸಲಹೆ ಮಾಡಿದ್ದಾರಂತೆ. ಅದ ಕಾರ್ಯಗತವಾಗುವ ಸೂಚನೆ ಇದೆ. ಕನ್ನಡ ಜನಪ್ರಿಯ ಚಿತ್ರಗಳ ಪನೋರಮಾ ವಿಭಾಗವೊಂದು ಈ ಬಾರಿ ಸೇರಿಕೊಂಡಿದೆ. ಅದರ ಜೊತೆಗೆ ಕನ್ನಡ ಮತ್ತು ಅಂತಾರಾಷ್ಟ್ರೀಯ ಕ್ಲಾಸಿಕ್‌ಗಳ ಮರುಯಾನವೂಇದೆ. ಕಳೆದ ವರ್ಷಕ್ಕಿಂತ ಇಪ್ಪತ್ತು ದಿನ ತಡವಾದರೂ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿಕನ್ನಡ ಚಿತ್ರಗಳ ವಿಜೃಂಭಣೆ ಇರಲಿದೆ!
ಕನ್ನಡ ಸಿನಿಮಾ ದಿನ, ಮಾರ್ಚ್ 3ರಂದು ತೆರೆಗೆ ಬರಲಿರುವ ಚಿತ್ರ ‘ಕಡಲ ತೀರದ ಭಾರ್ಗವ’. ಕಡಲ ತೀರದ ಭಾರ್ಗವ ಎಂದಾಕ್ಷಣ ನಿಮಗೆ ಶಿವರಾಮ ಕಾರಂತರನೆನಪಾಗಬಹುದು. ಅವರು ಕನ್ನಡ ಚಿತ್ರಗಳು ಮಾತನಾಡುವ ಮೊದಲೇ ಮೂಕಿಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ ಸಾಹಸಿ. ‘ಡೊಮಿಂಗೋ’ ಮತ್ತು ‘ಭೂತರಾಜ್ಯ’ ಅವರು ನಿರ್ದೇಶಿಸಿದ್ದ ಮೂಕಿ ಚಿತ್ರಗಳು.
‘ಇದು ಅವರ ಜೀವನ ಕಥೆೆಯನೂ ಅಲ್ಲ. ಇದು ಕಡಲ ತೀರದಲ್ಲಿ ವಾಸಿಸುವ ಭಾರ್ಗವ ಹೆಸರಿನ ಯುವಕನ ಕಥೆ’ ಎನ್ನುತ್ತಾರೆ ಚಿತ್ರದ ನಿರ್ದೇಶಕರಾದ ಪನ್ನಗ ಸೋಮಶೇಖರ್.
ಈ ಚಿತ್ರದ ಮೊದಲ ಟಿಕೆಟಿನ ಹರಾಜಿನಲ್ಲಿ ಬಂದ ಹಣವನ್ನು ಬಡ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ನೀಡಲು ಚಿತ್ರದ ನಿರ್ಮಾಪಕರಾದ ಪಟೇಲ್ ವರುಣ್‌ರಾಜು ಹಾಗೂ ಭರತ್‌ಗೌಡ ನಿರ್ಧರಿಸಿದ್ದಾರೆ. ಅಂದು ನಡೆದ ಹರಾಜಿನಲ್ಲಿ ಈ ಟಿಕೆಟನ್ನು ಕೊಂಡವರು ಅಂದು ಬಂದಿದ್ದ ಮೋಹನ್ ರಾಜು. ಅವರು 2 ಲಕ್ಷ ರೂ. ನೀಡಿ ಈ ಚಿತ್ರದ ಮೊದಲ ಟಿಕೆಟ್ ಪಡೆದುಕೊಂಡರು. ಅವರು ಟಿಕೆಟನ್ನು ಈ ಬೆಲೆಗೆ ಕೊಂಡುಕೊಂಡದ್ದೇ ಅಲ್ಲದೆ, ‘ಕ’ಕಾರದಲ್ಲಿ ಆರಂಭವಾದ ಹೆಸರುಳ್ಳ ‘ಕೆ.ಜಿ.ಎಫ್’, ‘ಕಾಂತಾರ’ ಚಿತ್ರಗಳುಗೆದ್ದಂತೆ ‘ಕಡಲ ತೀರದ ಭಾರ್ಗವ’ ಕೂಡ ಪ್ರಚಂಡ ಯಶಸ್ಸು ಕಾಣಲಿ ಎಂದು ಹಾರೈಸಿದರು. ನಿರ್ಮಾಪಕರಲ್ಲಿ  ಪಟೇಲ್ ವರದರಾಜು ಚಿತ್ರದಲ್ಲಿ ಭಾರ್ಗವ ಪಾತ್ರವನ್ನು ನಿರ್ವಹಿಸಿದ್ದಾರೆ.
ಮಂಸೋರೆ ನಿರ್ದೇಶನದ ‘19.20.21 ಚಿತ್ರ ಕೂಡ ಮಾರ್ಚ್ 3ರಂದೇ ತೆರೆಗೆ ಬರಲಿದೆ. ಇದು ಕೂಡ ಕರಾವಳಿಯ ಕಥಾನಕ ಎನ್ನುವುದು ವಿಶೇಷ. ಮಂಸೋರೆ ಪ್ರಕಾರ ನೈಜಘಟನೆ ಆಧರಿಸಿದ ಸಿನಿಮಾವಿದು. ಕರಾವಳಿಯಲ್ಲಿ ಎರಡು ದಶಕಗಳ ಕಾಲ ಒಂದು ಸಮುದಾಯ ಅನುಭವಿಸಿದ ನೋವು, ಆ ನೋವಿನ ವಿರುದ್ಧ ನಡೆಸಿದ ಹೋರಾಟ ಈ ಸಿನಿಮಾ ಮಾಡಲು ಸ್ಪೂರ್ತಿ.

andolanait

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

13 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

14 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

16 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

17 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

18 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

18 hours ago