ಆಂದೋಲನ ಪುರವಣಿ

ಸಿನಿಮಾಲ್‌ : ಇಂದು ತೆರೆಗೆ

ʼತನುಜಾ’, ನಟಭಯಂಕರ’ರ ವಾರ
ಈ ವಾರ ಎರಡು ಚಿತ್ರಗಳು ತೆರೆಗೆ ಬರುತ್ತಿವೆ. ವೈದ್ಯಕೀಯ ಪದವಿ ಪಡೆಯಲು ಪೂರ್ವಪರೀಕ್ಷೆ ?ನೀಟ್’ ಬರೆಯಲು ಪತ್ರಿಕೆ, ಸರ್ಕಾರಗಳ ನೆರವಿನಿಂದ ಸಾಧ್ಯವಾದ ವಿದ್ಯಾರ್ಥಿನಿಯೊಬ್ಬಳ ನಿಜಕಥೆಯನ್ನು ಹೇಳುವ ?ತನುಜಾ’ ಮತ್ತು ಕಿರುತೆರೆಯ ಬಿಗ್‌ಬಾಸ್ ರಿಯಾಲಿಟಿ ಕಾರ್ಯಕ್ರಮದ ಮೂಲಕ ಪರಿಚಯವಾದ ಪ್ರಥಮ್ ಅವರ ʼನಟ ಭುಂಂಕರ’ ಈ ವಾರ ತೆರೆಗೆ ಬರುತ್ತಿರುವ ಎರಡು ಚಿತ್ರಗಳು.

ʼತನುಜಾ’
ಬಿಯಾಂಡ್ ವಿಶನ್ ಸಿನಿಮಾಸ್ ಲಾಂಛನದಲ್ಲಿ ಚಂದ್ರಶೇಖರ ಗೌಡ ಮತ್ತು ಮನೋಜ್ ಬಿಜಿ ನಿರ್ಮಿಸಿರುವ ಚಿತ್ರ ʼತನುಜಾ’ ಹರೀಶ್ ಎಂ.ಡಿ.ಹಳ್ಳಿ ರಚನೆ, ನಿರ್ದೇಶನದ ಈ ಚಿತ್ರದ ಶೀರ್ಷಿಕಾ ಪಾತ್ರಧಾರಿ ಸಪ್ತಾ ಪಾವೂರ್. ಆಗ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ, ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಅವರು ತಾವೇ ಆಗಿ ಕಾಣಿಸಿಕೊಂಡಿರುವ ಈ ಚಿತ್ರದ ತಾರಾಗಣದಲ್ಲಿ ರಾಜೇಶ್ ನಟರಂಗ, ಚಿತ್ಕಲಾ ಬಿರಾದಾರ್, ಸಂಧ್ಯಾ ಅರಕೆರೆ, ಬೇಬಿ ಶ್ರೀ, ಕೈಲಾಸ್ ರಘುನಂದನ್, ಶಾಲಿನಿ ಷಡಕ್ಷರಿ ಮುಂತಾದವರಿದ್ದಾರೆ. ರವೀಂದ್ರನಾಥ್ ಛಾಯಾಗ್ರಹಣ, ಪ್ರದ್ಯೋತ್ತನ್ ಸಂಗೀತ ಸಂಯೋಜನೆ, ಉಮೇಶ್ ಆರ್ ಬಿ ಸಂಕಲನ ಈ ಚಿತ್ರಕ್ಕಿದೆ.


ʼನಟ ಭಯಂಕರ’
ಸ್ವಾರಸ್ಯ ಸಿನಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ ನಟ ಭಯಂಕರ’. ಇದು ಪ್ರಥಮ್ ಅವರ ಕಲ್ಪನೆತ ಚಿತ್ರ. ರಚನೆ, ನಿರ್ದೇಶನ ಮತ್ತು ಮುಖ್ಯ ಭೂಮಿಕೆ ಅವರದೇ. ಅವರೊಂದಿಗೆ ತಾರಾಗಣದಲ್ಲಿ ಸಾಯಿಕುಮಾರ್, ನೀಹಾರಿಕಾ ಶೆಣೈ, ಸುಶ್ಮಿತಾ ಜೋಶಿ, ಅನುಪಮ ಹೆಗ್ಡೆ, ಶೋಭರಾಜ್, ಕುರಿ ಪ್ರತಾಪ್, ಓಂ ಪ್ರಕಾಶ್ ರಾವ್, ಬಿರಾದಾರ್ ಮುಂತಾದವರಿದ್ದಾರೆ. ಪ್ರದ್ಯೋತ್ತನ್ ಸಂಗೀತ ಸಂಯೋಜನೆ.


ಸೆಟ್ಟೇರಿದ ಹೊಸ ಚಿತ್ರಗಳು ಆದಿತ್ಯ ನಟನೆಯ ʼಟೆರರ್’

ʼಎ’ ಚಿತ್ರ ಖ್ಯಾತಿಯ ಸಿಲ್ಕ್ ಮಂಜು ನಿರ್ಮಿಸುತ್ತಿರುವ ?ಟೆರರ್’ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನಲ್ಲಾಯಿತು. ರಂಜನ್ ಶಿವರಾಮ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಆದಿತ್ಯ ಕೇಂದ್ರಪಾತ್ರಧಾರಿ. ಕೆ. ಆರ್. ಜಿ. ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಮೊದಲ ಚಿತ್ರಿಕೆಗೆ ಆರಂಭ ಫಲಕ ತೋರಿಸಿದರೆ, ಐಪಿಎಸ್ ಅಧಿಕಾರಿ ರವಿಕಾಂತೇಗೌಡ ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಎಸ್. ವಿ .ರಾಜೇಂದ್ರ ಸಿಂಗ್ ಬಾಬು, ಲಹರಿ ವೇಲು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು. ಆದಿತ್ಯ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಈ ಚಿತ್ರಕ್ಕೆ ಹರ್ಷವರ್ಧನ್ ರಾಜ್ ಸಂಗೀತ ಸಂಯೋಜನೆ, ಕಾರ್ತಿಕ್ ಶರ್ಮ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸಂಕಲನ ಇರಲಿದೆ. ಧರ್ಮ, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ.


ಕಡೂರಿನಲ್ಲಿ ʼಕವಡೆ’
ʼಕವಡೆ’ ಹೆಸರಿನ ಹೊಸ ಚಿತ್ರ ಸೆಟೇರಿದೆ. ?ಜಾಡಘಟ್ಟ’ ನಿರ್ದೇಶಿಸಿ, ನಟಿಸಿದ್ದ ರಘು ಎಸ್. ಅವರ ಚಿತ್ರವಿದು. ಇಲ್ಲೂ ಅವರು ನಿರ್ದೇಶಿಸಿ, ನಟಿಸುತ್ತಿದ್ದಾರೆ. ಶಶಿಮಣಿ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಶ್ರೀಕ್ಷೇತ್ರ ದುರ್ಗಾಸ್ಥಳದಲ್ಲಿ ಆರಂಭವಾಯಿತು. ರಘು ಅವರ ಸಹೋದರ ಬೀರೇಶ್ ಎಂ. ಎಸ್. ಕ್ಯಾಮೆರಾ ಚಾಲನೆ ಮಾಡಿದರು. ತಾಯಿ-ಮಗನ ಬಾಂಧವ್ಯದ ಕಥಾಹಂದರ ಇದೆ ಎನ್ನಲಾಗಿರುವ ಈ ಚಿತ್ರಕ್ಕೆ ರಘು ಆವರದೇ ಕಥೆ, ಚಿತ್ರಕಥೆ ಸಂಭಾಷಣೆ ಇದೆ. ಅಭಿಷೇಕ್ ಜಿ ರಾಯ್‌ ಸಂಗೀತ ನಿರ್ದೇಶನ ಹಾಗೂ ಪ್ರದೀಪ್ ಜೈನ್ ಛಾಯಾಗ್ರಹಣದ ?ಕವಡೆ’ಯಲ್ಲಿ ರಘು ಅವರೊಂದಿಗೆ ಜೀವಿತಾ, ನಿಖಿತಾ, ಕೃಷ್ಣಮೂರ್ತಿ (ಚಿನ್ನು), ಶಿವರಾಜ್ (ಮೇಷ್ಟ್ರು) ತಾರಾಗಣದಲ್ಲಿದ್ದಾರೆ.

andolanait

Recent Posts

ಓದುಗರ ಪತ್ರ: ಇಸ್ಕಾನ್ ಕೃಷ್ಣ ದೇವಾಲಯದ ಬಳಿಯಿದ್ದ ಕಸ ತೆರವು

ಮೈಸೂರಿನ ಜಯನಗರದಲ್ಲಿರುವ ಇಸ್ಕಾನ್ ದೇವಾಲಯದ ಪಕ್ಕದಲ್ಲಿದ್ದ ಕಸದ ರಾಶಿಯನ್ನು ಮೈಸೂರು ಮಹಾನಗರಪಾಲಿಕೆಯಿಂದ ಮಂಗಳವಾರ ತೆರವುಗೊಳಿಸಲಾಗಿದೆ. ಆಂದೋಲನ ದಿನಪತ್ರಿಕೆಯ ಓದುಗರ ಪತ್ರ…

2 hours ago

ಓದುಗರ ಪತ್ರ: ಪ್ರಮುಖ ವೃತ್ತಗಳಲ್ಲಿ ಭಿಕ್ಷುಕರ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ವೃತ್ತಗಳಾದ ಸಿದ್ದಪ್ಪ ಸ್ಕ್ವೇರ್, ಸಂಸ್ಕೃತ ಪಾಠಶಾಲೆ, ವಿ.ವಿ.ಪುರಂ, ತಾತಯ್ಯ ವೃತ್ತ ಮೊದಲಾದ ಕಡೆಗಳಲ್ಲಿ ಭಿಕ್ಷುಕರು, ಅಂಗವಿಕಲರು ಪ್ರತಿನಿತ್ಯ…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ, ಯುಜಿಡಿ ಪೈಪ್ ಬದಲಿಸಿ

ಮೈಸೂರಿನ ವೀಣೆ ಶಾಮಣ್ಣ ರಸ್ತೆ ಅವ್ಯವಸ್ಥೆಯ ಆಗರವಾಗಿದೆ. ಒಳಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಪ್ರತಿದಿನವೂ ನಿವಾಸಿಗಳು ಹೊಲಸು ನೀರನ್ನು…

2 hours ago

ಓದುಗರ ಪತ್ರ: ಹೊಸ ವರ್ಷದ ಸಂಕಲ್ಪ

ಹೊಸ ವರ್ಷದ ಆಗಮನವೆಂದರೆ ಬಣ್ಣಬಣ್ಣದ ದೀಪಗಳ ಅಲಂಕಾರ, ಸಿಹಿ ವಿತರಣೆ ಅಥವಾ ಮಧ್ಯರಾತ್ರಿಯ ಸಂಭ್ರಮಾಚರಣೆಯಷ್ಟೇ ಅಲ್ಲ. ಅದು ಕಾಲ ಚಕ್ರದ…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಎಚ್‌ಐವಿ ಮಕ್ಕಳಿಗಾಗಿ ಉದ್ಯೋಗ ಬಿಟ್ಟ ದತ್ತಾ-ಸಂಧ್ಯಾ ದಂಪತಿ

ಪಂಜುಗಂಗೊಳ್ಳಿ  ಸಮಾಜದಿಂದ ಪರಿತ್ಯಕ್ತರಾದ ಮಕ್ಕಳ ಬಾಳಲ್ಲಿ ಬೆಳಕು ಮೂಡಿಸಿದ ಆನಂದ ಗ್ರಾಮ ಮಹಾರಾಷ್ಟ್ರದ ಬೀಡ್‌ನ ಜಿಲ್ಲಾ ಆಸ್ಪತ್ರೆಯ ರಕ್ತದ ಬ್ಯಾಂಕಿನಲ್ಲಿ…

2 hours ago

ಕೊಡಗು ಜಿಲ್ಲೆಯತ್ತ ಪ್ರವಾಸಿಗರ ದಂಡು..!

ಪುನೀತ್ ಮಡಿಕೇರಿ ಹೊಸ ವರ್ಷಾಚರಣೆಗೆ ಕೊಡಗಿನತ್ತ ಮುಖ ಮಾಡಿದ ಜನರು; ಜಿಲ್ಲೆಯಲ್ಲಿ ಹೆಚ್ಚಿದ ವಾಹನ ದಟ್ಟಣೆ ಮಡಿಕೇರಿ: ಹೊಸ ವರ್ಷವನ್ನು…

2 hours ago