ಆಂದೋಲನ ಪುರವಣಿ

ಸಿನಿಮಾಲ್‌ : ಇಂದು ತೆರೆಗೆ

ʼತನುಜಾ’, ನಟಭಯಂಕರ’ರ ವಾರ
ಈ ವಾರ ಎರಡು ಚಿತ್ರಗಳು ತೆರೆಗೆ ಬರುತ್ತಿವೆ. ವೈದ್ಯಕೀಯ ಪದವಿ ಪಡೆಯಲು ಪೂರ್ವಪರೀಕ್ಷೆ ?ನೀಟ್’ ಬರೆಯಲು ಪತ್ರಿಕೆ, ಸರ್ಕಾರಗಳ ನೆರವಿನಿಂದ ಸಾಧ್ಯವಾದ ವಿದ್ಯಾರ್ಥಿನಿಯೊಬ್ಬಳ ನಿಜಕಥೆಯನ್ನು ಹೇಳುವ ?ತನುಜಾ’ ಮತ್ತು ಕಿರುತೆರೆಯ ಬಿಗ್‌ಬಾಸ್ ರಿಯಾಲಿಟಿ ಕಾರ್ಯಕ್ರಮದ ಮೂಲಕ ಪರಿಚಯವಾದ ಪ್ರಥಮ್ ಅವರ ʼನಟ ಭುಂಂಕರ’ ಈ ವಾರ ತೆರೆಗೆ ಬರುತ್ತಿರುವ ಎರಡು ಚಿತ್ರಗಳು.

ʼತನುಜಾ’
ಬಿಯಾಂಡ್ ವಿಶನ್ ಸಿನಿಮಾಸ್ ಲಾಂಛನದಲ್ಲಿ ಚಂದ್ರಶೇಖರ ಗೌಡ ಮತ್ತು ಮನೋಜ್ ಬಿಜಿ ನಿರ್ಮಿಸಿರುವ ಚಿತ್ರ ʼತನುಜಾ’ ಹರೀಶ್ ಎಂ.ಡಿ.ಹಳ್ಳಿ ರಚನೆ, ನಿರ್ದೇಶನದ ಈ ಚಿತ್ರದ ಶೀರ್ಷಿಕಾ ಪಾತ್ರಧಾರಿ ಸಪ್ತಾ ಪಾವೂರ್. ಆಗ ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್.ಯಡಿಯೂರಪ್ಪ, ಆರೋಗ್ಯ ಸಚಿವ ಸುಧಾಕರ, ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್ ಅವರು ತಾವೇ ಆಗಿ ಕಾಣಿಸಿಕೊಂಡಿರುವ ಈ ಚಿತ್ರದ ತಾರಾಗಣದಲ್ಲಿ ರಾಜೇಶ್ ನಟರಂಗ, ಚಿತ್ಕಲಾ ಬಿರಾದಾರ್, ಸಂಧ್ಯಾ ಅರಕೆರೆ, ಬೇಬಿ ಶ್ರೀ, ಕೈಲಾಸ್ ರಘುನಂದನ್, ಶಾಲಿನಿ ಷಡಕ್ಷರಿ ಮುಂತಾದವರಿದ್ದಾರೆ. ರವೀಂದ್ರನಾಥ್ ಛಾಯಾಗ್ರಹಣ, ಪ್ರದ್ಯೋತ್ತನ್ ಸಂಗೀತ ಸಂಯೋಜನೆ, ಉಮೇಶ್ ಆರ್ ಬಿ ಸಂಕಲನ ಈ ಚಿತ್ರಕ್ಕಿದೆ.


ʼನಟ ಭಯಂಕರ’
ಸ್ವಾರಸ್ಯ ಸಿನಿ ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ ನಟ ಭಯಂಕರ’. ಇದು ಪ್ರಥಮ್ ಅವರ ಕಲ್ಪನೆತ ಚಿತ್ರ. ರಚನೆ, ನಿರ್ದೇಶನ ಮತ್ತು ಮುಖ್ಯ ಭೂಮಿಕೆ ಅವರದೇ. ಅವರೊಂದಿಗೆ ತಾರಾಗಣದಲ್ಲಿ ಸಾಯಿಕುಮಾರ್, ನೀಹಾರಿಕಾ ಶೆಣೈ, ಸುಶ್ಮಿತಾ ಜೋಶಿ, ಅನುಪಮ ಹೆಗ್ಡೆ, ಶೋಭರಾಜ್, ಕುರಿ ಪ್ರತಾಪ್, ಓಂ ಪ್ರಕಾಶ್ ರಾವ್, ಬಿರಾದಾರ್ ಮುಂತಾದವರಿದ್ದಾರೆ. ಪ್ರದ್ಯೋತ್ತನ್ ಸಂಗೀತ ಸಂಯೋಜನೆ.


ಸೆಟ್ಟೇರಿದ ಹೊಸ ಚಿತ್ರಗಳು ಆದಿತ್ಯ ನಟನೆಯ ʼಟೆರರ್’

ʼಎ’ ಚಿತ್ರ ಖ್ಯಾತಿಯ ಸಿಲ್ಕ್ ಮಂಜು ನಿರ್ಮಿಸುತ್ತಿರುವ ?ಟೆರರ್’ ಚಿತ್ರದ ಮುಹೂರ್ತ ಸಮಾರಂಭ ಬೆಂಗಳೂರಿನಲ್ಲಾಯಿತು. ರಂಜನ್ ಶಿವರಾಮ ಗೌಡ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಆದಿತ್ಯ ಕೇಂದ್ರಪಾತ್ರಧಾರಿ. ಕೆ. ಆರ್. ಜಿ. ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಮೊದಲ ಚಿತ್ರಿಕೆಗೆ ಆರಂಭ ಫಲಕ ತೋರಿಸಿದರೆ, ಐಪಿಎಸ್ ಅಧಿಕಾರಿ ರವಿಕಾಂತೇಗೌಡ ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ದೇಶಕ ಎಸ್. ವಿ .ರಾಜೇಂದ್ರ ಸಿಂಗ್ ಬಾಬು, ಲಹರಿ ವೇಲು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು. ಆದಿತ್ಯ ಗ್ಯಾಂಗ್‌ಸ್ಟರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಈ ಚಿತ್ರಕ್ಕೆ ಹರ್ಷವರ್ಧನ್ ರಾಜ್ ಸಂಗೀತ ಸಂಯೋಜನೆ, ಕಾರ್ತಿಕ್ ಶರ್ಮ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸಂಕಲನ ಇರಲಿದೆ. ಧರ್ಮ, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿದ್ದಾರೆ.


ಕಡೂರಿನಲ್ಲಿ ʼಕವಡೆ’
ʼಕವಡೆ’ ಹೆಸರಿನ ಹೊಸ ಚಿತ್ರ ಸೆಟೇರಿದೆ. ?ಜಾಡಘಟ್ಟ’ ನಿರ್ದೇಶಿಸಿ, ನಟಿಸಿದ್ದ ರಘು ಎಸ್. ಅವರ ಚಿತ್ರವಿದು. ಇಲ್ಲೂ ಅವರು ನಿರ್ದೇಶಿಸಿ, ನಟಿಸುತ್ತಿದ್ದಾರೆ. ಶಶಿಮಣಿ ನಿರ್ಮಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಶ್ರೀಕ್ಷೇತ್ರ ದುರ್ಗಾಸ್ಥಳದಲ್ಲಿ ಆರಂಭವಾಯಿತು. ರಘು ಅವರ ಸಹೋದರ ಬೀರೇಶ್ ಎಂ. ಎಸ್. ಕ್ಯಾಮೆರಾ ಚಾಲನೆ ಮಾಡಿದರು. ತಾಯಿ-ಮಗನ ಬಾಂಧವ್ಯದ ಕಥಾಹಂದರ ಇದೆ ಎನ್ನಲಾಗಿರುವ ಈ ಚಿತ್ರಕ್ಕೆ ರಘು ಆವರದೇ ಕಥೆ, ಚಿತ್ರಕಥೆ ಸಂಭಾಷಣೆ ಇದೆ. ಅಭಿಷೇಕ್ ಜಿ ರಾಯ್‌ ಸಂಗೀತ ನಿರ್ದೇಶನ ಹಾಗೂ ಪ್ರದೀಪ್ ಜೈನ್ ಛಾಯಾಗ್ರಹಣದ ?ಕವಡೆ’ಯಲ್ಲಿ ರಘು ಅವರೊಂದಿಗೆ ಜೀವಿತಾ, ನಿಖಿತಾ, ಕೃಷ್ಣಮೂರ್ತಿ (ಚಿನ್ನು), ಶಿವರಾಜ್ (ಮೇಷ್ಟ್ರು) ತಾರಾಗಣದಲ್ಲಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

8 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago