ಪರಭಾಷಾ ಚಿತ್ರಗಳ ಅಬ್ಬರದ ನಡುವೆ ಮೂರು ಕನ್ನಡ ಚಿತ್ರಗಳು
ಸಂಕ್ರಾಂತಿಯ ವೇಳೆ ಪರಭಾಷಾ ಚಿತ್ರಗಳದೇ ಕಾರುಬಾರು. ಪ್ರದರ್ಶಕರು, ವಿತರಕರು ಅವುಗಳ ಮೇಲೆ ತೋರಿಸುವ ಅಕ್ಕರೆಯನ್ನು ಕನ್ನಡ ಚಿತ್ರಗಳ ಮೇಲೆ ತೋರಿಸುತ್ತಿಲ್ಲ. ತಮಿಳಿನ ಎರಡು, ತೆಲುಗಿನ ಎರಡು ಅದ್ಧೂರಿ ಚಿತ್ರಗಳು ರಾಜ್ಯದ ಬಹುತೇಕ ಪರದೆಗಳನ್ನು ಇಂದಿನಿಂದ ಆವರಿಸುತ್ತಿದ್ದು (ಮೊನ್ನೆೆಯೇ ತಮಿಳು ಚಿತ್ರಗಳ ಬಿಡುಗಡೆ ಆಗಿದೆ) ಕನ್ನಡ ಚಿತ್ರಗಳ ಎತ್ತಂಗಡಿ ಆಗುತ್ತಿವೆ. ಹೀಗಿದ್ದೂ ಈ ವಾರ ಮೂರುಕನ್ನಡ ಚಿತ್ರಗಳು ಬಿಡುಗಡೆ ಆಗುತ್ತಿವೆ. ಅವುಗಳು ಸಮಾಧಾನ ಸಂಸ್ಥೆಗಾಗಿ ಬಿ.ಎಸ್.ಲಿಂಗದೇವರು ನಿರ್ದೇಶಿಸಿರುವ ‘ವಿರಾಟಪುರವಿರಾಗಿ’, ಮೈಸೂರಿನ ಯುವಕರೇ ಸೇರಿ ನಿರ್ಮಿಸಿರುವ ‘ಆರ್ಕೆಸ್ಟ್ರಾ ಮೈಸೂರು’ ಮತ್ತು ಕಿರುತೆರೆ ರಿಯಾಲಿಟಿ ಕಾರ್ಯಕ್ರಮ ಬಿಗ್ಬಾಸ್ ವಿಜೇತ ರೂಪೇಶ್ಶೆಟ್ಟಿ ಅಭಿನಯದ‘ಮಂಕುಬಾಯಿ ಫಾಕ್ಸಿರಾಣಿ’ ಈ ಮೂರು ಚಿತ್ರಗಳು.
‘ವಿರಾಟಪುರ ವಿರಾಗಿ’
ಸವಾಧಾನ ಸಂಸ್ಥೆಯ ಮೂಲಕ ತಯಾರಾದ‘ವಿರಾಟಪುರ ವಿರಾಗಿ’ ಚಿತ್ರವನ್ನು ಬಿ.ಎಸ್.ಲಿಂಗದೇವರು ನಿರ್ದೇಶಿಸಿದ್ದಾರೆ. ಆಧುನಿಕ ಬಸವಣ್ಣ ಎಂದೇ ಹೆಸರಾಗಿದ್ದ, 20ನೇ ಶತಮಾನದ ಆರಂಭದಲ್ಲಿಯೇ ಹೊಸ ಮನ್ವಂತರಕ್ಕೆ ಭದ್ರ ಬುನಾದಿ ಹಾಕಿದ ಹಾನಗಲ್ಲ ಶ್ರೀ ಶಿವಕುಮಾರ ಸ್ವಾಮಿಗಳ ಜೀವನ ಚರಿತ್ರೆ ಇದಾಗಿದ್ದು, ಕುಮಾರಸ್ವಾಮಿಗಳ ಪಾತ್ರದಲ್ಲಿ ಸುಚೇಂದ್ರಪ್ರಸಾದ್ ಅವರಿದ್ದು, ಅವರ ಬಾಲ್ಯದ ಪಾತ್ರಗಳಲ್ಲಿ ಮಾಸ್ಟರ್ ಸಮರ್ಥ ಮತ್ತು ಸಮರ್ಥ ಕಾಣಿಸಿಕೊಂಡಿದ್ದಾರೆ. ಕೆಲವು ಮಂದಿ ಸ್ವಾಮೀಜಿಗಳೂ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಮಣಿಕಾಂತ್ಕದ್ರಿ ಸಂಗೀತ ಸಂಯೋಜನೆ, ಅಶೋಕ್ ವಿ.ರಾಮನ್ಛಾಯಾಗ್ರಹಣ, ಎಸ್.ಗುಣಶೇಖರನ್ ಸಂಕಲನ ಈ ಚಿತ್ರಕ್ಕಿದೆ.
‘ಆರ್ಕೆಸ್ಟ್ರಾ ಮೈಸೂರು’
ಅಶ್ವಿನ್ ಕ್ರಿಯೇಶನ್ಸ್ ಮತ್ತು ದೀಕ್ಷಿತ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗಿರುವ ‘ಆರ್ಕೆಸ್ಟ್ರಾ ಮೈಸೂರು’ ವಾದ್ಯವೃಂದ ಸೇರಬೇಕೆಂದು ಹಂಬಲಿಸುವ ಯುವಕನೊಬ್ಬನ ಕಥಾನಕ ಎನ್ನಲಾಗಿದ್ದು, ನಗರದ ಪ್ರತಿಭಾವಂತರೇ ಈ ಚಿತ್ರದಲ್ಲಿದ್ದಾರೆ. ಸುನಿಲ್ ಮೈಸೂರು ನಿರ್ದೇಶನದ ಈ ಚಿತ್ರದ ತಾರಾಗಣದಲ್ಲಿ ಪೂರ್ಣಚಂದ್ರ ಮೈಸೂರು, ರಾಜಲಕ್ಷ್ಮೀ, ದಿಲೀಪ್ರಾಜ್, ಮಹೇಶ್ಕುಮಾರ್, ರವಿ ಹುಣಸೂರು, ಲಿಂಗರಾಜು, ಮಹದೇವ ಪ್ರಸಾದ್ ಮುಂತಾದವರಿದ್ದಾರೆ. ಜೋಸೆಫ್ ಕೆ.ರಾಜ ಛಾಯಾಗ್ರಹಣ, ಸಂಕಲನದ ಈ ಚಿತ್ರದ ಸಂಗೀತ ಸಂಯೋಜನೆ ನಿರ್ಮಾಪಕರಲ್ಲಿ ಒಬ್ಬರೂ ಆಗಿರುವ ರಘು ದೀಕ್ಷಿತ್.
‘ಮಂಕುಬಾಯಿ ಫಾಕ್ಸಿರಾಣಿ’
ಜೋಶ್ವಾ ಮೀಡಿಯಾ ಸಂಸ್ಥೆಯ ಮೂಲಕ ಜೋಶ್ವಾ ಜೈಶಾನ್ ಕ್ರಾಸ್ತಾ ನಿರ್ಮಿಸಿರುವ ಚಿತ್ರ ‘ಮಂಕುಬಾಯಿಫಾಕ್ಸಿರಾಣಿ’. ಗಗನ್ ಎಂ. ನಿರ್ದೇಶನದ ಈ ಚಿತ್ರ ಯುವಕನೊಬ್ಬ ತನ್ನ ಗೆಳೆಯರಿಗೆ ಇದ್ದ ಹಾಗೆ ತನಗೂ ಒಬ್ಬಾಕೆ ಗೆಳತಿ ಬೇಕು ಎಂದುಕೊಂಡು ಆಕೆಯ ಹುಡುಕಾಟದ ಕಥೆ ಎನ್ನಲಾಗಿದ್ದು, ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಮುಖ್ಯಭೂಮಕೆಯಲ್ಲಿದ್ದಾರೆ. ಅವರೊಂದಿಗೆ ಗೀತಾ ಭಾರತಿ ಭಟ್, ಪಂಚಮಿ ರಾವ್, ಅರುಣ್ಕಜೆ, ಪ್ರಕಾಶ್ ತುಮಿನಾಡ್, ಶೈಲಶ್ರೀ ಮುಲ್ಕಿ ಮುಂತಾದವರಿದ್ದಾರೆ. ವಿನ್ಯಾಸ್ ಮಧ್ಯ ಶಮೀರ್ ಮುಡಿಪು ಸಂಗೀತ ಸಂಯೋಜನೆ, ಶಾಜಹಾನ್ ಛಾಯಾಗ್ರಹಣ, ಸುಶಾಂತ್ ಶೆಟ್ಟಿ ಸಂಕಲನ ಚಿತ್ರಕ್ಕಿದೆ.
ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…
ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…
ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…
ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…
ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…
ಗಿರೀಶ್ ಹುಣಸೂರು ರೆಸಾರ್ಟ್ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …