ಪರಭಾಷಾ ಚಿತ್ರಗಳ ಅಬ್ಬರದ ನಡುವೆ ಮೂರು ಕನ್ನಡ ಚಿತ್ರಗಳು
ಸಂಕ್ರಾಂತಿಯ ವೇಳೆ ಪರಭಾಷಾ ಚಿತ್ರಗಳದೇ ಕಾರುಬಾರು. ಪ್ರದರ್ಶಕರು, ವಿತರಕರು ಅವುಗಳ ಮೇಲೆ ತೋರಿಸುವ ಅಕ್ಕರೆಯನ್ನು ಕನ್ನಡ ಚಿತ್ರಗಳ ಮೇಲೆ ತೋರಿಸುತ್ತಿಲ್ಲ. ತಮಿಳಿನ ಎರಡು, ತೆಲುಗಿನ ಎರಡು ಅದ್ಧೂರಿ ಚಿತ್ರಗಳು ರಾಜ್ಯದ ಬಹುತೇಕ ಪರದೆಗಳನ್ನು ಇಂದಿನಿಂದ ಆವರಿಸುತ್ತಿದ್ದು (ಮೊನ್ನೆೆಯೇ ತಮಿಳು ಚಿತ್ರಗಳ ಬಿಡುಗಡೆ ಆಗಿದೆ) ಕನ್ನಡ ಚಿತ್ರಗಳ ಎತ್ತಂಗಡಿ ಆಗುತ್ತಿವೆ. ಹೀಗಿದ್ದೂ ಈ ವಾರ ಮೂರುಕನ್ನಡ ಚಿತ್ರಗಳು ಬಿಡುಗಡೆ ಆಗುತ್ತಿವೆ. ಅವುಗಳು ಸಮಾಧಾನ ಸಂಸ್ಥೆಗಾಗಿ ಬಿ.ಎಸ್.ಲಿಂಗದೇವರು ನಿರ್ದೇಶಿಸಿರುವ ‘ವಿರಾಟಪುರವಿರಾಗಿ’, ಮೈಸೂರಿನ ಯುವಕರೇ ಸೇರಿ ನಿರ್ಮಿಸಿರುವ ‘ಆರ್ಕೆಸ್ಟ್ರಾ ಮೈಸೂರು’ ಮತ್ತು ಕಿರುತೆರೆ ರಿಯಾಲಿಟಿ ಕಾರ್ಯಕ್ರಮ ಬಿಗ್ಬಾಸ್ ವಿಜೇತ ರೂಪೇಶ್ಶೆಟ್ಟಿ ಅಭಿನಯದ‘ಮಂಕುಬಾಯಿ ಫಾಕ್ಸಿರಾಣಿ’ ಈ ಮೂರು ಚಿತ್ರಗಳು.
‘ವಿರಾಟಪುರ ವಿರಾಗಿ’
ಸವಾಧಾನ ಸಂಸ್ಥೆಯ ಮೂಲಕ ತಯಾರಾದ‘ವಿರಾಟಪುರ ವಿರಾಗಿ’ ಚಿತ್ರವನ್ನು ಬಿ.ಎಸ್.ಲಿಂಗದೇವರು ನಿರ್ದೇಶಿಸಿದ್ದಾರೆ. ಆಧುನಿಕ ಬಸವಣ್ಣ ಎಂದೇ ಹೆಸರಾಗಿದ್ದ, 20ನೇ ಶತಮಾನದ ಆರಂಭದಲ್ಲಿಯೇ ಹೊಸ ಮನ್ವಂತರಕ್ಕೆ ಭದ್ರ ಬುನಾದಿ ಹಾಕಿದ ಹಾನಗಲ್ಲ ಶ್ರೀ ಶಿವಕುಮಾರ ಸ್ವಾಮಿಗಳ ಜೀವನ ಚರಿತ್ರೆ ಇದಾಗಿದ್ದು, ಕುಮಾರಸ್ವಾಮಿಗಳ ಪಾತ್ರದಲ್ಲಿ ಸುಚೇಂದ್ರಪ್ರಸಾದ್ ಅವರಿದ್ದು, ಅವರ ಬಾಲ್ಯದ ಪಾತ್ರಗಳಲ್ಲಿ ಮಾಸ್ಟರ್ ಸಮರ್ಥ ಮತ್ತು ಸಮರ್ಥ ಕಾಣಿಸಿಕೊಂಡಿದ್ದಾರೆ. ಕೆಲವು ಮಂದಿ ಸ್ವಾಮೀಜಿಗಳೂ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಮಣಿಕಾಂತ್ಕದ್ರಿ ಸಂಗೀತ ಸಂಯೋಜನೆ, ಅಶೋಕ್ ವಿ.ರಾಮನ್ಛಾಯಾಗ್ರಹಣ, ಎಸ್.ಗುಣಶೇಖರನ್ ಸಂಕಲನ ಈ ಚಿತ್ರಕ್ಕಿದೆ.
‘ಆರ್ಕೆಸ್ಟ್ರಾ ಮೈಸೂರು’
ಅಶ್ವಿನ್ ಕ್ರಿಯೇಶನ್ಸ್ ಮತ್ತು ದೀಕ್ಷಿತ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗಿರುವ ‘ಆರ್ಕೆಸ್ಟ್ರಾ ಮೈಸೂರು’ ವಾದ್ಯವೃಂದ ಸೇರಬೇಕೆಂದು ಹಂಬಲಿಸುವ ಯುವಕನೊಬ್ಬನ ಕಥಾನಕ ಎನ್ನಲಾಗಿದ್ದು, ನಗರದ ಪ್ರತಿಭಾವಂತರೇ ಈ ಚಿತ್ರದಲ್ಲಿದ್ದಾರೆ. ಸುನಿಲ್ ಮೈಸೂರು ನಿರ್ದೇಶನದ ಈ ಚಿತ್ರದ ತಾರಾಗಣದಲ್ಲಿ ಪೂರ್ಣಚಂದ್ರ ಮೈಸೂರು, ರಾಜಲಕ್ಷ್ಮೀ, ದಿಲೀಪ್ರಾಜ್, ಮಹೇಶ್ಕುಮಾರ್, ರವಿ ಹುಣಸೂರು, ಲಿಂಗರಾಜು, ಮಹದೇವ ಪ್ರಸಾದ್ ಮುಂತಾದವರಿದ್ದಾರೆ. ಜೋಸೆಫ್ ಕೆ.ರಾಜ ಛಾಯಾಗ್ರಹಣ, ಸಂಕಲನದ ಈ ಚಿತ್ರದ ಸಂಗೀತ ಸಂಯೋಜನೆ ನಿರ್ಮಾಪಕರಲ್ಲಿ ಒಬ್ಬರೂ ಆಗಿರುವ ರಘು ದೀಕ್ಷಿತ್.
‘ಮಂಕುಬಾಯಿ ಫಾಕ್ಸಿರಾಣಿ’
ಜೋಶ್ವಾ ಮೀಡಿಯಾ ಸಂಸ್ಥೆಯ ಮೂಲಕ ಜೋಶ್ವಾ ಜೈಶಾನ್ ಕ್ರಾಸ್ತಾ ನಿರ್ಮಿಸಿರುವ ಚಿತ್ರ ‘ಮಂಕುಬಾಯಿಫಾಕ್ಸಿರಾಣಿ’. ಗಗನ್ ಎಂ. ನಿರ್ದೇಶನದ ಈ ಚಿತ್ರ ಯುವಕನೊಬ್ಬ ತನ್ನ ಗೆಳೆಯರಿಗೆ ಇದ್ದ ಹಾಗೆ ತನಗೂ ಒಬ್ಬಾಕೆ ಗೆಳತಿ ಬೇಕು ಎಂದುಕೊಂಡು ಆಕೆಯ ಹುಡುಕಾಟದ ಕಥೆ ಎನ್ನಲಾಗಿದ್ದು, ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಮುಖ್ಯಭೂಮಕೆಯಲ್ಲಿದ್ದಾರೆ. ಅವರೊಂದಿಗೆ ಗೀತಾ ಭಾರತಿ ಭಟ್, ಪಂಚಮಿ ರಾವ್, ಅರುಣ್ಕಜೆ, ಪ್ರಕಾಶ್ ತುಮಿನಾಡ್, ಶೈಲಶ್ರೀ ಮುಲ್ಕಿ ಮುಂತಾದವರಿದ್ದಾರೆ. ವಿನ್ಯಾಸ್ ಮಧ್ಯ ಶಮೀರ್ ಮುಡಿಪು ಸಂಗೀತ ಸಂಯೋಜನೆ, ಶಾಜಹಾನ್ ಛಾಯಾಗ್ರಹಣ, ಸುಶಾಂತ್ ಶೆಟ್ಟಿ ಸಂಕಲನ ಚಿತ್ರಕ್ಕಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…