ಆಂದೋಲನ ಪುರವಣಿ

ಸಿನಿಮಾಲ್‌ : ಇಂದು ತೆರೆಗೆ

ಪರಭಾಷಾ ಚಿತ್ರಗಳ ಅಬ್ಬರದ ನಡುವೆ ಮೂರು ಕನ್ನಡ ಚಿತ್ರಗಳು
ಸಂಕ್ರಾಂತಿಯ ವೇಳೆ ಪರಭಾಷಾ ಚಿತ್ರಗಳದೇ ಕಾರುಬಾರು. ಪ್ರದರ್ಶಕರು, ವಿತರಕರು ಅವುಗಳ ಮೇಲೆ ತೋರಿಸುವ ಅಕ್ಕರೆಯನ್ನು ಕನ್ನಡ ಚಿತ್ರಗಳ ಮೇಲೆ ತೋರಿಸುತ್ತಿಲ್ಲ. ತಮಿಳಿನ ಎರಡು, ತೆಲುಗಿನ ಎರಡು ಅದ್ಧೂರಿ ಚಿತ್ರಗಳು ರಾಜ್ಯದ ಬಹುತೇಕ ಪರದೆಗಳನ್ನು ಇಂದಿನಿಂದ ಆವರಿಸುತ್ತಿದ್ದು (ಮೊನ್ನೆೆಯೇ ತಮಿಳು ಚಿತ್ರಗಳ ಬಿಡುಗಡೆ ಆಗಿದೆ) ಕನ್ನಡ ಚಿತ್ರಗಳ ಎತ್ತಂಗಡಿ ಆಗುತ್ತಿವೆ. ಹೀಗಿದ್ದೂ ಈ ವಾರ ಮೂರುಕನ್ನಡ ಚಿತ್ರಗಳು ಬಿಡುಗಡೆ ಆಗುತ್ತಿವೆ. ಅವುಗಳು ಸಮಾಧಾನ ಸಂಸ್ಥೆಗಾಗಿ ಬಿ.ಎಸ್.ಲಿಂಗದೇವರು ನಿರ್ದೇಶಿಸಿರುವ ‘ವಿರಾಟಪುರವಿರಾಗಿ’, ಮೈಸೂರಿನ ಯುವಕರೇ ಸೇರಿ ನಿರ್ಮಿಸಿರುವ ‘ಆರ್ಕೆಸ್ಟ್ರಾ ಮೈಸೂರು’ ಮತ್ತು ಕಿರುತೆರೆ ರಿಯಾಲಿಟಿ ಕಾರ್ಯಕ್ರಮ ಬಿಗ್‌ಬಾಸ್ ವಿಜೇತ ರೂಪೇಶ್‌ಶೆಟ್ಟಿ ಅಭಿನಯದ‘ಮಂಕುಬಾಯಿ ಫಾಕ್ಸಿರಾಣಿ’ ಈ ಮೂರು ಚಿತ್ರಗಳು.

‘ವಿರಾಟಪುರ ವಿರಾಗಿ’
ಸವಾಧಾನ ಸಂಸ್ಥೆಯ ಮೂಲಕ ತಯಾರಾದ‘ವಿರಾಟಪುರ ವಿರಾಗಿ’ ಚಿತ್ರವನ್ನು ಬಿ.ಎಸ್.ಲಿಂಗದೇವರು ನಿರ್ದೇಶಿಸಿದ್ದಾರೆ. ಆಧುನಿಕ ಬಸವಣ್ಣ ಎಂದೇ ಹೆಸರಾಗಿದ್ದ, 20ನೇ ಶತಮಾನದ ಆರಂಭದಲ್ಲಿಯೇ ಹೊಸ ಮನ್ವಂತರಕ್ಕೆ ಭದ್ರ ಬುನಾದಿ ಹಾಕಿದ ಹಾನಗಲ್ಲ ಶ್ರೀ ಶಿವಕುಮಾರ ಸ್ವಾಮಿಗಳ ಜೀವನ ಚರಿತ್ರೆ ಇದಾಗಿದ್ದು, ಕುಮಾರಸ್ವಾಮಿಗಳ ಪಾತ್ರದಲ್ಲಿ ಸುಚೇಂದ್ರಪ್ರಸಾದ್ ಅವರಿದ್ದು, ಅವರ ಬಾಲ್ಯದ ಪಾತ್ರಗಳಲ್ಲಿ ಮಾಸ್ಟರ್ ಸಮರ್ಥ ಮತ್ತು ಸಮರ್ಥ ಕಾಣಿಸಿಕೊಂಡಿದ್ದಾರೆ. ಕೆಲವು ಮಂದಿ ಸ್ವಾಮೀಜಿಗಳೂ ಈ ಚಿತ್ರದಲ್ಲಿ ನಟಿಸಿರುವುದು ವಿಶೇಷ. ಮಣಿಕಾಂತ್‌ಕದ್ರಿ ಸಂಗೀತ ಸಂಯೋಜನೆ, ಅಶೋಕ್ ವಿ.ರಾಮನ್‌ಛಾಯಾಗ್ರಹಣ, ಎಸ್.ಗುಣಶೇಖರನ್ ಸಂಕಲನ ಈ ಚಿತ್ರಕ್ಕಿದೆ.

‘ಆರ್ಕೆಸ್ಟ್ರಾ ಮೈಸೂರು’
ಅಶ್ವಿನ್ ಕ್ರಿಯೇಶನ್ಸ್ ಮತ್ತು ದೀಕ್ಷಿತ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾಗಿರುವ ‘ಆರ್ಕೆಸ್ಟ್ರಾ ಮೈಸೂರು’ ವಾದ್ಯವೃಂದ ಸೇರಬೇಕೆಂದು ಹಂಬಲಿಸುವ ಯುವಕನೊಬ್ಬನ ಕಥಾನಕ ಎನ್ನಲಾಗಿದ್ದು, ನಗರದ ಪ್ರತಿಭಾವಂತರೇ ಈ ಚಿತ್ರದಲ್ಲಿದ್ದಾರೆ. ಸುನಿಲ್ ಮೈಸೂರು ನಿರ್ದೇಶನದ ಈ ಚಿತ್ರದ ತಾರಾಗಣದಲ್ಲಿ ಪೂರ್ಣಚಂದ್ರ ಮೈಸೂರು, ರಾಜಲಕ್ಷ್ಮೀ, ದಿಲೀಪ್‌ರಾಜ್, ಮಹೇಶ್‌ಕುಮಾರ್, ರವಿ ಹುಣಸೂರು, ಲಿಂಗರಾಜು, ಮಹದೇವ ಪ್ರಸಾದ್ ಮುಂತಾದವರಿದ್ದಾರೆ. ಜೋಸೆಫ್ ಕೆ.ರಾಜ ಛಾಯಾಗ್ರಹಣ, ಸಂಕಲನದ ಈ ಚಿತ್ರದ ಸಂಗೀತ ಸಂಯೋಜನೆ ನಿರ್ಮಾಪಕರಲ್ಲಿ ಒಬ್ಬರೂ ಆಗಿರುವ ರಘು ದೀಕ್ಷಿತ್.

‘ಮಂಕುಬಾಯಿ ಫಾಕ್ಸಿರಾಣಿ’
ಜೋಶ್ವಾ ಮೀಡಿಯಾ ಸಂಸ್ಥೆಯ ಮೂಲಕ ಜೋಶ್ವಾ ಜೈಶಾನ್ ಕ್ರಾಸ್ತಾ ನಿರ್ಮಿಸಿರುವ ಚಿತ್ರ ‘ಮಂಕುಬಾಯಿಫಾಕ್ಸಿರಾಣಿ’. ಗಗನ್ ಎಂ. ನಿರ್ದೇಶನದ ಈ ಚಿತ್ರ ಯುವಕನೊಬ್ಬ ತನ್ನ ಗೆಳೆಯರಿಗೆ ಇದ್ದ ಹಾಗೆ ತನಗೂ ಒಬ್ಬಾಕೆ ಗೆಳತಿ ಬೇಕು ಎಂದುಕೊಂಡು ಆಕೆಯ ಹುಡುಕಾಟದ ಕಥೆ ಎನ್ನಲಾಗಿದ್ದು, ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ಮುಖ್ಯಭೂಮಕೆಯಲ್ಲಿದ್ದಾರೆ. ಅವರೊಂದಿಗೆ ಗೀತಾ ಭಾರತಿ ಭಟ್, ಪಂಚಮಿ ರಾವ್, ಅರುಣ್‌ಕಜೆ, ಪ್ರಕಾಶ್ ತುಮಿನಾಡ್, ಶೈಲಶ್ರೀ ಮುಲ್ಕಿ ಮುಂತಾದವರಿದ್ದಾರೆ. ವಿನ್ಯಾಸ್ ಮಧ್ಯ ಶಮೀರ್ ಮುಡಿಪು ಸಂಗೀತ ಸಂಯೋಜನೆ, ಶಾಜಹಾನ್ ಛಾಯಾಗ್ರಹಣ, ಸುಶಾಂತ್ ಶೆಟ್ಟಿ ಸಂಕಲನ ಚಿತ್ರಕ್ಕಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago