ಆಂದೋಲನ ಪುರವಣಿ

ಸಿನಿಮಾಲ್‌ : ಪ್ರಣಾಮ್ ದೇವರಾಜ್ ‘ವೈರಂ’

ಹಿರಿಯ ನಟ ದೇವರಾಜ್ ಅವರ ಎರಡನೇ ಮಗ ಪ್ರಣಾಮ್ ದೇವರಾಜ್ ಕೂಡಾ, ಅಣ್ಣ ಪ್ರಜ್ವಲ್‌ರಂತೆ ಬೆಳ್ಳಿತೆರೆಗೆ ಕಾಲಿಟ್ಟವರು. ‘ಕುಮಾರಿ 21 ಎಫ್’ ಚಿತ್ರದ ನಂತರ ಅವರು ಅಭಿನಯಿಸುತ್ತಿರುವ ಚಿತ್ರ ‘ವೈರಂ’. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಣಾಮ್ ಅವರ ತಂದೆ ದೇವರಾಜ್, ತಾಯಿ ಚಂದ್ರಕಲಾ ದೇವರಾಜ್ ಹಾಗೂ ಅತ್ತಿಗೆ ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ‘ಚಿಕ್ಕ ವಯಸಿನಿಂದ ಅಪ್ಪ, ಅಣ್ಣನ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ನಾಲ್ಕು ವರ್ಷಗಳ ನಂತರ ಈ ಸ್ಟೇಜ್ ಮೇಲೆ ನಿಂತು ಮಾತನಾಡುತ್ತಿದ್ದೇನೆ. ನಿರ್ದೇಶಕ ಸಾಯಿ ಶಿವನ್ ಅವರಲ್ಲಿ ತುಂಬಾ ಕಾನ್ಛಿಡೆನ್ಸ್ ಇದೆ. ನಿರ್ಮಾಪಕರಾಗಿ ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ತುಂಬಾ ಬೆಂಬಲ ನೀಡಿದ್ದಾರೆ’ ಎನ್ನುವ ಪ್ರಣಾಮ್ ಅವರೊಂದಿಗೆ ಮೋನಾಲ್, ಶಂಕರ್ ಅಶ್ವಥ್, ವೀಣಾ ಸುಂದರ್, ಗರುಡಾರಾಮ್ ಪ್ರಮುಖ ಪಾತ್ರಧಾರಿಗಳು. ಗೋಪಿನಾಥ್ ಛಾಯಾಗ್ರಹಣ ಹಾಗೂ ಮಹತಿ ಸ್ವರಸಾಗರ್‌ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ನಿಶ್ಚಿತ ಕಂಬೈನ್ಸ್‌ಗೆ ಶಿವರಾಜಕುಮಾರ್ ಚಿತ್ರ
ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಿಸಲಿರುವ ಹೊಸ ಚಿತ್ರದಲ್ಲಿ ಶಿವರಾಜಕುಮಾರ್ ನಟಿಸಲಿದ್ದಾರೆ. ತಿನ್ ಶಿವಾರ್ಜುನ್ ಸಹನಿರ್ಮಾಣದ ಈ ಚಿತ್ರವನ್ನು ತೇಜಸ್ವಿ ಕೆ.ನಾಗ್‌ನಿರ್ದೇಶಿಸಲಿದ್ದಾರೆ.. ಸೃಜನ ಅವರ ‘ಮಜಾಟಾಕೀಸ್’ ರಿಯಾಲಿಟಿ ಶೋ ಮತ್ತು ‘ಎಲ್ಲಿದ್ದೆ ಇಲ್ಲೀ ತನಕ’ ಚಿತ್ರದ ನಿರ್ದೇಶಕರು ತೇಜಸ್ವಿ. ನಿಶ್ಚಿತ್ ಕಂಬೈನ್ಸ್ ಈ ಹಿಂದೆ ‘ಶಿವಾರ್ಜುನ’ ಚಿತ್ರ ನಿರ್ಮಿಸಿತ್ತು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago