ಆಂದೋಲನ ಪುರವಣಿ

ಸಿನಿಮಾಲ್‌ : ಪ್ರಣಾಮ್ ದೇವರಾಜ್ ‘ವೈರಂ’

ಹಿರಿಯ ನಟ ದೇವರಾಜ್ ಅವರ ಎರಡನೇ ಮಗ ಪ್ರಣಾಮ್ ದೇವರಾಜ್ ಕೂಡಾ, ಅಣ್ಣ ಪ್ರಜ್ವಲ್‌ರಂತೆ ಬೆಳ್ಳಿತೆರೆಗೆ ಕಾಲಿಟ್ಟವರು. ‘ಕುಮಾರಿ 21 ಎಫ್’ ಚಿತ್ರದ ನಂತರ ಅವರು ಅಭಿನಯಿಸುತ್ತಿರುವ ಚಿತ್ರ ‘ವೈರಂ’. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಣಾಮ್ ಅವರ ತಂದೆ ದೇವರಾಜ್, ತಾಯಿ ಚಂದ್ರಕಲಾ ದೇವರಾಜ್ ಹಾಗೂ ಅತ್ತಿಗೆ ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ‘ಚಿಕ್ಕ ವಯಸಿನಿಂದ ಅಪ್ಪ, ಅಣ್ಣನ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ನಾಲ್ಕು ವರ್ಷಗಳ ನಂತರ ಈ ಸ್ಟೇಜ್ ಮೇಲೆ ನಿಂತು ಮಾತನಾಡುತ್ತಿದ್ದೇನೆ. ನಿರ್ದೇಶಕ ಸಾಯಿ ಶಿವನ್ ಅವರಲ್ಲಿ ತುಂಬಾ ಕಾನ್ಛಿಡೆನ್ಸ್ ಇದೆ. ನಿರ್ಮಾಪಕರಾಗಿ ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ತುಂಬಾ ಬೆಂಬಲ ನೀಡಿದ್ದಾರೆ’ ಎನ್ನುವ ಪ್ರಣಾಮ್ ಅವರೊಂದಿಗೆ ಮೋನಾಲ್, ಶಂಕರ್ ಅಶ್ವಥ್, ವೀಣಾ ಸುಂದರ್, ಗರುಡಾರಾಮ್ ಪ್ರಮುಖ ಪಾತ್ರಧಾರಿಗಳು. ಗೋಪಿನಾಥ್ ಛಾಯಾಗ್ರಹಣ ಹಾಗೂ ಮಹತಿ ಸ್ವರಸಾಗರ್‌ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ನಿಶ್ಚಿತ ಕಂಬೈನ್ಸ್‌ಗೆ ಶಿವರಾಜಕುಮಾರ್ ಚಿತ್ರ
ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಿಸಲಿರುವ ಹೊಸ ಚಿತ್ರದಲ್ಲಿ ಶಿವರಾಜಕುಮಾರ್ ನಟಿಸಲಿದ್ದಾರೆ. ತಿನ್ ಶಿವಾರ್ಜುನ್ ಸಹನಿರ್ಮಾಣದ ಈ ಚಿತ್ರವನ್ನು ತೇಜಸ್ವಿ ಕೆ.ನಾಗ್‌ನಿರ್ದೇಶಿಸಲಿದ್ದಾರೆ.. ಸೃಜನ ಅವರ ‘ಮಜಾಟಾಕೀಸ್’ ರಿಯಾಲಿಟಿ ಶೋ ಮತ್ತು ‘ಎಲ್ಲಿದ್ದೆ ಇಲ್ಲೀ ತನಕ’ ಚಿತ್ರದ ನಿರ್ದೇಶಕರು ತೇಜಸ್ವಿ. ನಿಶ್ಚಿತ್ ಕಂಬೈನ್ಸ್ ಈ ಹಿಂದೆ ‘ಶಿವಾರ್ಜುನ’ ಚಿತ್ರ ನಿರ್ಮಿಸಿತ್ತು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

14 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

14 hours ago