ಆಂದೋಲನ ಪುರವಣಿ

ಸಿನಿಮಾಲ್‌ : ಪ್ರಣಾಮ್ ದೇವರಾಜ್ ‘ವೈರಂ’

ಹಿರಿಯ ನಟ ದೇವರಾಜ್ ಅವರ ಎರಡನೇ ಮಗ ಪ್ರಣಾಮ್ ದೇವರಾಜ್ ಕೂಡಾ, ಅಣ್ಣ ಪ್ರಜ್ವಲ್‌ರಂತೆ ಬೆಳ್ಳಿತೆರೆಗೆ ಕಾಲಿಟ್ಟವರು. ‘ಕುಮಾರಿ 21 ಎಫ್’ ಚಿತ್ರದ ನಂತರ ಅವರು ಅಭಿನಯಿಸುತ್ತಿರುವ ಚಿತ್ರ ‘ವೈರಂ’. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಪ್ರಣಾಮ್ ಅವರ ತಂದೆ ದೇವರಾಜ್, ತಾಯಿ ಚಂದ್ರಕಲಾ ದೇವರಾಜ್ ಹಾಗೂ ಅತ್ತಿಗೆ ರಾಗಿಣಿ ಪ್ರಜ್ವಲ್ ಟೀಸರ್ ಬಿಡುಗಡೆ ಸಮಾರಂಭದಲ್ಲಿ ಉಪಸ್ಥಿತರಿದ್ದರು. ‘ಚಿಕ್ಕ ವಯಸಿನಿಂದ ಅಪ್ಪ, ಅಣ್ಣನ ಸಿನಿಮಾಗಳನ್ನು ನೋಡಿಕೊಂಡು ಬೆಳೆದವನು. ನಾಲ್ಕು ವರ್ಷಗಳ ನಂತರ ಈ ಸ್ಟೇಜ್ ಮೇಲೆ ನಿಂತು ಮಾತನಾಡುತ್ತಿದ್ದೇನೆ. ನಿರ್ದೇಶಕ ಸಾಯಿ ಶಿವನ್ ಅವರಲ್ಲಿ ತುಂಬಾ ಕಾನ್ಛಿಡೆನ್ಸ್ ಇದೆ. ನಿರ್ಮಾಪಕರಾಗಿ ಮಲ್ಲಿಕಾರ್ಜುನ ಹಾಗೂ ವೇಮಾರೆಡ್ಡಿ ಅವರು ತುಂಬಾ ಬೆಂಬಲ ನೀಡಿದ್ದಾರೆ’ ಎನ್ನುವ ಪ್ರಣಾಮ್ ಅವರೊಂದಿಗೆ ಮೋನಾಲ್, ಶಂಕರ್ ಅಶ್ವಥ್, ವೀಣಾ ಸುಂದರ್, ಗರುಡಾರಾಮ್ ಪ್ರಮುಖ ಪಾತ್ರಧಾರಿಗಳು. ಗೋಪಿನಾಥ್ ಛಾಯಾಗ್ರಹಣ ಹಾಗೂ ಮಹತಿ ಸ್ವರಸಾಗರ್‌ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.

ನಿಶ್ಚಿತ ಕಂಬೈನ್ಸ್‌ಗೆ ಶಿವರಾಜಕುಮಾರ್ ಚಿತ್ರ
ನಿಶ್ಚಿತ ಕಂಬೈನ್ಸ್ ಲಾಂಛನದಲ್ಲಿ ಮಂಜುಳಾ ಶಿವಾರ್ಜುನ್ ನಿರ್ಮಿಸಲಿರುವ ಹೊಸ ಚಿತ್ರದಲ್ಲಿ ಶಿವರಾಜಕುಮಾರ್ ನಟಿಸಲಿದ್ದಾರೆ. ತಿನ್ ಶಿವಾರ್ಜುನ್ ಸಹನಿರ್ಮಾಣದ ಈ ಚಿತ್ರವನ್ನು ತೇಜಸ್ವಿ ಕೆ.ನಾಗ್‌ನಿರ್ದೇಶಿಸಲಿದ್ದಾರೆ.. ಸೃಜನ ಅವರ ‘ಮಜಾಟಾಕೀಸ್’ ರಿಯಾಲಿಟಿ ಶೋ ಮತ್ತು ‘ಎಲ್ಲಿದ್ದೆ ಇಲ್ಲೀ ತನಕ’ ಚಿತ್ರದ ನಿರ್ದೇಶಕರು ತೇಜಸ್ವಿ. ನಿಶ್ಚಿತ್ ಕಂಬೈನ್ಸ್ ಈ ಹಿಂದೆ ‘ಶಿವಾರ್ಜುನ’ ಚಿತ್ರ ನಿರ್ಮಿಸಿತ್ತು.

andolanait

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

8 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

8 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

9 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

10 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

12 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

14 hours ago