ಕೆಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದ ತಾರೆ ರಮ್ಯಾ ಮರಳಿದ್ದಾರೆ. ಈ ಬಾರಿ ನಿರ್ಮಾಣದತ್ತ ಅವರ ಆಸಕ್ತಿ. ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ಅವರು ನಿರ್ಮಿಸುತ್ತಿರುವ ಮೊದಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ಚಿತ್ರದ ಚಿತ್ರೀಕರಣ ಮುಗಿದು, ಚಿತ್ರೀಕರಣೋತ್ತರ ಕೆಲಸಗಳು ಈಗ ನಡೆಯುತ್ತಿವೆ. ಇದು ಒಂದು ಪ್ರಬುದ್ಧ ಪ್ರೇಮಕಥೆ, ಒಂದು ಭಾವುಕ ಪ್ರಯಾಣ ಎನ್ನಲಾಗಿದ್ದು, ರಾಜ್ ಬಿ. ಶೆಟ್ಟಿ ಈ ಚಿತ್ರವನ್ನು ನಿರ್ದೇಶಿಸುತ್ತಿರುವದಷ್ಟೇ ಅಲ್ಲದೆ, ಮುಖ್ಯಪಾತ್ರಧಾರಿಯೂ ಕೂಡಾ. ಸಿರಿ ರವಿಕುಮಾರ್ ಅವರ ಜೋಡಿಯಾಗಿ ನಟಿಸಿದ್ದಾರೆ. ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆ.ಪಿ.ತುಮ್ಮಿನಾಡ್, ಗೋಪಾಲ ಕೃಷ್ಣ ದೇಶಪಾಂಡೆ ತಾರಾಗಣದಲ್ಲಿನ ಇತರರು. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಮತ್ತು ಸಂಕಲನ, ಮಿಥುನ್ ಮುಕುಂದನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ತಮ್ಮ ನಿರ್ಮಾಣದ ಮೊದಲ ಚಿತ್ರದಲ್ಲಿ ರವ್ಯಾಅವರೇ ನಟಿಸುವುದಾಗಿ ಮೊದಲು ಹೇಳಿದ್ದರೂ, ಕೊನೆಯ ಹಂತದಲ್ಲಿ ಸಿರಿ ರವಿಕುಮಾರ್ ಅವರನ್ನು ಆರಿಸಿದ್ದಾರೆ. ರಮ್ಯಾ ಮತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಡಾಲಿ ಧನಂಜಯ್ ಜೋಡಿ. ಚಿತ್ರದ ಹೆಸರು ‘ಉತ್ತರಕಾಂಡ’
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…