ಕೆಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದ ತಾರೆ ರಮ್ಯಾ ಮರಳಿದ್ದಾರೆ. ಈ ಬಾರಿ ನಿರ್ಮಾಣದತ್ತ ಅವರ ಆಸಕ್ತಿ. ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ಅವರು ನಿರ್ಮಿಸುತ್ತಿರುವ ಮೊದಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ಚಿತ್ರದ ಚಿತ್ರೀಕರಣ ಮುಗಿದು, ಚಿತ್ರೀಕರಣೋತ್ತರ ಕೆಲಸಗಳು ಈಗ ನಡೆಯುತ್ತಿವೆ. ಇದು ಒಂದು ಪ್ರಬುದ್ಧ ಪ್ರೇಮಕಥೆ, ಒಂದು ಭಾವುಕ ಪ್ರಯಾಣ ಎನ್ನಲಾಗಿದ್ದು, ರಾಜ್ ಬಿ. ಶೆಟ್ಟಿ ಈ ಚಿತ್ರವನ್ನು ನಿರ್ದೇಶಿಸುತ್ತಿರುವದಷ್ಟೇ ಅಲ್ಲದೆ, ಮುಖ್ಯಪಾತ್ರಧಾರಿಯೂ ಕೂಡಾ. ಸಿರಿ ರವಿಕುಮಾರ್ ಅವರ ಜೋಡಿಯಾಗಿ ನಟಿಸಿದ್ದಾರೆ. ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆ.ಪಿ.ತುಮ್ಮಿನಾಡ್, ಗೋಪಾಲ ಕೃಷ್ಣ ದೇಶಪಾಂಡೆ ತಾರಾಗಣದಲ್ಲಿನ ಇತರರು. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಮತ್ತು ಸಂಕಲನ, ಮಿಥುನ್ ಮುಕುಂದನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ತಮ್ಮ ನಿರ್ಮಾಣದ ಮೊದಲ ಚಿತ್ರದಲ್ಲಿ ರವ್ಯಾಅವರೇ ನಟಿಸುವುದಾಗಿ ಮೊದಲು ಹೇಳಿದ್ದರೂ, ಕೊನೆಯ ಹಂತದಲ್ಲಿ ಸಿರಿ ರವಿಕುಮಾರ್ ಅವರನ್ನು ಆರಿಸಿದ್ದಾರೆ. ರಮ್ಯಾ ಮತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಡಾಲಿ ಧನಂಜಯ್ ಜೋಡಿ. ಚಿತ್ರದ ಹೆಸರು ‘ಉತ್ತರಕಾಂಡ’
ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…
ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…
ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…
ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್ಗಳನ್ನು ಚಾಲನೆ ಮಾಡುವ ಬಗ್ಗೆ…
ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…
ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ. ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…