ಆಂದೋಲನ ಪುರವಣಿ

ಸಿನಿಮಾಲ್‌ : ತಾರೆ ರಮ್ಯಾ ಚಿತ್ರ-ಸ್ವಾತಿ ಮುತ್ತಿನ ಮಳೆ ಹನಿಯೇ

ಕೆಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರವಿದ್ದ ತಾರೆ ರಮ್ಯಾ ಮರಳಿದ್ದಾರೆ. ಈ ಬಾರಿ ನಿರ್ಮಾಣದತ್ತ ಅವರ ಆಸಕ್ತಿ. ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ಅವರು ನಿರ್ಮಿಸುತ್ತಿರುವ ಮೊದಲ ಚಿತ್ರ ‘ಸ್ವಾತಿ ಮುತ್ತಿನ ಮಳೆ ಹನಿಯೇ’. ಚಿತ್ರದ ಚಿತ್ರೀಕರಣ ಮುಗಿದು, ಚಿತ್ರೀಕರಣೋತ್ತರ ಕೆಲಸಗಳು ಈಗ ನಡೆಯುತ್ತಿವೆ. ಇದು ಒಂದು ಪ್ರಬುದ್ಧ ಪ್ರೇಮಕಥೆ, ಒಂದು ಭಾವುಕ ಪ್ರಯಾಣ ಎನ್ನಲಾಗಿದ್ದು, ರಾಜ್ ಬಿ. ಶೆಟ್ಟಿ ಈ ಚಿತ್ರವನ್ನು ನಿರ್ದೇಶಿಸುತ್ತಿರುವದಷ್ಟೇ ಅಲ್ಲದೆ, ಮುಖ್ಯಪಾತ್ರಧಾರಿಯೂ ಕೂಡಾ. ಸಿರಿ ರವಿಕುಮಾರ್‌ ಅವರ ಜೋಡಿಯಾಗಿ ನಟಿಸಿದ್ದಾರೆ. ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹಾ ಶರ್ಮಾ, ಜೆ.ಪಿ.ತುಮ್ಮಿನಾಡ್, ಗೋಪಾಲ ಕೃಷ್ಣ ದೇಶಪಾಂಡೆ ತಾರಾಗಣದಲ್ಲಿನ ಇತರರು. ಪ್ರವೀಣ್ ಶ್ರೀಯಾನ್ ಛಾಯಾಗ್ರಹಣ ಮತ್ತು ಸಂಕಲನ, ಮಿಥುನ್ ಮುಕುಂದನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ತಮ್ಮ ನಿರ್ಮಾಣದ ಮೊದಲ ಚಿತ್ರದಲ್ಲಿ ರವ್ಯಾಅವರೇ ನಟಿಸುವುದಾಗಿ ಮೊದಲು ಹೇಳಿದ್ದರೂ, ಕೊನೆಯ ಹಂತದಲ್ಲಿ ಸಿರಿ ರವಿಕುಮಾರ್ ಅವರನ್ನು ಆರಿಸಿದ್ದಾರೆ. ರಮ್ಯಾ ಮತೊಂದು ಚಿತ್ರದಲ್ಲಿ ನಟಿಸುತ್ತಿದ್ದಾರೆ. ಅದರಲ್ಲಿ ಡಾಲಿ ಧನಂಜಯ್‌ ಜೋಡಿ. ಚಿತ್ರದ ಹೆಸರು ‘ಉತ್ತರಕಾಂಡ’

andolanait

Recent Posts

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

3 hours ago

ಓದುಗರ ಪತ್ರ: ಮ್ಯಾನ್‌ಹೋಲ್ ಸರಿಪಡಿಸಿ

ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್‌ನಿಂದ ಹೊಲಸು ನೀರು…

7 hours ago

ಓದುಗರ ಪತ್ರ: ಎಚ್೧ಎನ್೧ ಮುನ್ನೆಚ್ಚರಿಕೆ ಇರಲಿ

ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…

7 hours ago

ಓದುಗರ ಪತ್ರ: ಭಲೆ ದರ್ಶನ್…ಭಲೆ ಭಲೆ…

ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…

7 hours ago

ಪೊಲೀಸ್ ಆಪ್‌ಗೆ ಖಾಸಗಿ ಸಿಸಿಟಿವಿ ಸೇರ್ಪಡೆ

ಎಚ್.ಎಸ್.ದಿನೇಶ್‌ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…

7 hours ago

ಫ್ಲೈಓವರ್ ಕಾಮಗಾರಿ ಕುಂಟುತ್ತಿದೆಯೇಕೆ?

ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…

10 hours ago