ಆಂದೋಲನ ಪುರವಣಿ

ಸಿನಿಮಾಲ್‌ : ಸಿನಿಕುಟುಂಬದ ತಾರೆಯರ ರಂಗಪ್ರವೇಶ

ಧನ್ಯಾ, ರಾಧನ್, ಅಮೃತಾ ನಂತರ ಕೀರ್ತಿ

ಸಿನಿಕುಟುಂಬಗಳಿಂದ ಚಿತ್ರರಂಗಕ್ಕೆ ನಟರಾಗಿ ಬಂದಿರುವ ಸಾಕಷ್ಟು ಮಂದಿ ಯುವಕರಿದ್ದಾರೆ. ಚಿತ್ರರಂಗದ ಮೊದಲ ಕುಟುಂಬಗಳ ಮೂರನೇ ತಲೆಮಾರಿನವರೂ ಇದ್ದಾರೆ. ಆದರೆ ಯುವತಿಯರು ಬಣ್ಣಹಚ್ಚಿದ್ದು ಕಡಿಮೆ. ಬಾಲನಟಿಯರಾಗಿ ಬಂದವರಿದ್ದಾರೆ. ಇತ್ತೀಚೆಗೆ ಅವರೂ ಬರತೊಡಗಿದ್ದಾರೆ.
ಡಾ.ರಾಜಕುಮಾರ್ ಅವರ ಮೊಮ್ಮಗಳು, ಪೂರ್ಣಿಮಾ-ರಾಮಕುಮಾರ್ ಮಗಳು ಧನ್ಯಾ ರಾಮಕುಮಾರ್ ?ನಿನ್ನ ಸನಿಹಕೆ’ ಚಿತ್ರದ ಮೂಲಕ ಬೆಳ್ಳಿತೆರೆಗೆ ನಾಯಕಿಯಾಗಿ ಬಂದರು. ಆ ಚಿತ್ರ ತೆರೆಕಂಡಿದೆ. ?ಬೆಳ್ಳಿಕಾಲುಂಗುರ’ ಚಿತ್ರದಲ್ಲೂ ಅವರದು ಮುಖ್ಯ ಭೂಮಿಕೆ. ಹಿಂದೆ ಅದೇ ಹೆಸರಿನ ಚಿತ್ರ ನಿರ್ಮಿಸಿದ್ದ ನಿರ್ಮಾಪಕ.ರಾ.ಗೋವಿಂದು ಅವರದೇ ಚಿತ್ರವಿದು. ಇನ್ನೂ ಕೆಲವು ಚಿತ್ರಗಳಲ್ಲಿ ಅವರು ಅಭಿನಯಿಸುವ ಕುರಿತಂತೆ ಮಾತುಕತೆಗಳಾಗುತ್ತಿವೆ ಎನ್ನಲಾಗಿದೆ.
ಕನ್ನಡ ಚಿತ್ರರಂಗದಲ್ಲಿ ನಾಯಕಿಯರಿಗೆ ತಾರಾವರ್ಚಸ್ಸು ತಂದುಕೊಟ್ಟ ತಾರೆ ಮಾಲಾಶ್ರೀ. ಮಾಲಾಶ್ರೀ ಮತ್ತು ನಿರ್ಮಾಪಕ ರಾಮು ದಂಪತಿಯ ಮಗಳು ಅನನ್ಯ ಇದೀಗ ಚಿತ್ರರಂಗ ಪ್ರವೇಶಿಸಿದ್ದಾರೆ. ರಾಧನಾ ರಾಮ್ ಎನ್ನುವ ತೆರೆನಾಮದೊಂದಿಗೆ ಬಂದಿರುವ ಅವರ ಮೊದಲ ಚಿತ್ರ ಈಗಾಗಲೇ ಚಿತ್ರೀಕರಣ ಆರಂಭಿಸಿದೆ. ದರ್ಶನ್ ಅಭಿನಯದ 56ನೇ ಚಿತ್ರದಲ್ಲಿ ಅವರ ಜೋಡಿಯಾಗಿ ರಾಧನಾ ನಟಿಸುತ್ತಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಅವರಿಗಾಗಿ ತರುಣ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಕನ್ನಡ ನಟ ?ನೆನಪಿರಲಿ’ ಖ್ಯಾತಿಯ ನಟ ಪ್ರೇಮ್ ಮಗಳು ಅಮೃತಾ ಪ್ರೇಮ್ ಬಣ್ಣಹಚ್ಚಿದ್ದಾರೆ. ಅವರು ಅಭಿನಯಿಸಲಿರುವ ಮೊದಲ ಚಿತ್ರ ?ಟಗರು ಪಲ್ಯ’. ನಟ ಡಾಲಿ ಧನಂಜಯ ನಿರ್ಮಿಸುತ್ತಿರುವ ಈ ಚಿತ್ರವನ್ನು ಉಮೇಶ್ ಕೆ.ಕೃಪಾ ನಿರ್ದೇಶಿಸುತ್ತಿದ್ದು ಅವರಿಗೂ ಇದು ಮೊದಲ ಚಿತ್ರ.
ಇದೀಗ ಮತ್ತೊಂದು ಕಲಾಕುಟುಂಬದ ಕುಡಿ ಬೆಳ್ಳಿತೆರೆಗೆ ಕಾಲಿಟ್ಟ ಸುದ್ದಿ. ಗುಬ್ಬಿ ಕಂಪೆನಿಯಲ್ಲಿದ್ದ ಕೃಷ್ಣ ಅವರ ಮೊಮ್ಮಗಳು ಕೀರ್ತಿ ಕೃಷ್ಣ ಈ ನಟಿ. ಕೃಷ್ಣ ಅವರ ಮಕ್ಕಳಾದ ಶ್ರುತಿ ಮತ್ತು ಶರಣ್ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಹೆಸರಾದವರು. ಅವರ ಮತ್ತೊಬ್ಬ ಮಗಳು ಉಷಾ, ಚಿತ್ರರಂಗದಿಂದ ದೂರವಿದ್ದರು. ಆದರೆ ಆಕೆಯ ಮಗಳು ಕೀರ್ತಿ ಈಗ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಹಿಂದೆ ರಾಮ್‌ಕುಮಾರ್ -ಶ್ರುತಿ ಅಭಿಯದ ?ಶ್ರೀನಾಗಶಕ್ತಿ’ಯಲ್ಲಿ ಬಾಲನಟಿಾಂಗಿ ಕಾಣಿಸಿಕೊಂಡಿದ್ದ ಕೀರ್ತಿ ಇದೀಗ ಓದು ಮುಗಿಸಿ ಬಂದಿದ್ದಾರೆ. ಅವರು ಅಭಿನಯಿಸಲಿರುವ ಚಿತ್ರ ?ಧರಣಿ’. ?ಅನಂತು ವರ್ಸಸ್ ನುಸ್ರತ್’ ನಿರ್ದೇಶಿಸಿದ ಸುಧೀರ್ ಶಾನುಭೋಗ್ ಅವರ ಚಿತ್ರ ?ಧರಣಿ’. ಮನೋಜ್ ಜೋಡಿಯಾಗಿ ಕೀರ್ತಿ ನಟಿಸಲಿದ್ದಾರೆ. ಯಂಗ್ ಥಿಂಕರ್ಸ್ ಫಿಲಂಸ್ ಲಾಂಛನದಲ್ಲಿ ಜಿ.ಕೆ.ಉಮೇಶ್ ಕೆ. ಗಣೇಶ್ ಐತಾಳ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಛಾಯಾಗ್ರಹಣ, ಅರುಣೋದಯ ಕಥೆ , ಶ್ರೀನಿಧಿ ಡಿ. ಎಸ್. ಸಂಭಾಷಣೆ ಈ ಚಿತ್ರದ ಮೊದಲ ನೋಟ ಹೊರಬಂದಿದೆ.

andolanait

Recent Posts

ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಉದಯ್‌ ಭಾನು ಬಂಧನ

ನವದೆಹಲಿ: ಭಾರತೀಯ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಉದಯ್‌ ಬಾನು ಚಿಬ್‌ ಅವರನ್ನು ದೆಹಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ.…

1 min ago

ಹನೂರು| ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ…

6 mins ago

ಎಲ್ಲಾ ಶಾಸಕರಿಗೂ ಮಂತ್ರಿ ಆಗಬೇಕೆಂಬ ಆಸೆ ಇರುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ…

2 hours ago

114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ: ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಕಾಡಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿಗಳ ಉಪಟಳ ಜಾಸ್ತಿಯಾದರೆ 114 ಸೆಕ್ಷನ್‌ ಜಾರಿಗೊಳಿಸಿ ವನ್ಯಜೀವಿ ಸೆರೆ ಕಾರ್ಯಾಚರಣೆ ನಡೆಸಿ ಎಂದು…

2 hours ago

ಸಿಎಂ ಸಿದ್ದರಾಮಯ್ಯ ಭೇಟಿಯಾದ ತೆಲಂಗಾಣ ಡಿಸಿಎಂ: ಮಗನ ಮದುವೆಗೆ ಆಹ್ವಾನ

ಬೆಂಗಳೂರು: ತೆಲಂಗಾಣ ರಾಜ್ಯದ ಡಿಸಿಎಂ ಭಟ್ಟಿ ವಿಕ್ರಮಾರ್ಕ ಮಲ್ಲು ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಡಿಸಿಎಂ…

2 hours ago

ಶಿವಮೊಗ್ಗದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಹತ್ಯೆ ಪ್ರಕರಣ: 15 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ

ಶಿವಮೊಗ್ಗ: ಇಲ್ಲಿನ ಸೂಳೆಬೈಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆತನ ಕುಟುಂಬಕ್ಕೆ 15…

2 hours ago