ಆಂದೋಲನ ಪುರವಣಿ

ಸಿನಿಮಾಲ್‌ : ಸಿನಿಕುಟುಂಬದ ತಾರೆಯರ ರಂಗಪ್ರವೇಶ

ಧನ್ಯಾ, ರಾಧನ್, ಅಮೃತಾ ನಂತರ ಕೀರ್ತಿ

ಸಿನಿಕುಟುಂಬಗಳಿಂದ ಚಿತ್ರರಂಗಕ್ಕೆ ನಟರಾಗಿ ಬಂದಿರುವ ಸಾಕಷ್ಟು ಮಂದಿ ಯುವಕರಿದ್ದಾರೆ. ಚಿತ್ರರಂಗದ ಮೊದಲ ಕುಟುಂಬಗಳ ಮೂರನೇ ತಲೆಮಾರಿನವರೂ ಇದ್ದಾರೆ. ಆದರೆ ಯುವತಿಯರು ಬಣ್ಣಹಚ್ಚಿದ್ದು ಕಡಿಮೆ. ಬಾಲನಟಿಯರಾಗಿ ಬಂದವರಿದ್ದಾರೆ. ಇತ್ತೀಚೆಗೆ ಅವರೂ ಬರತೊಡಗಿದ್ದಾರೆ.
ಡಾ.ರಾಜಕುಮಾರ್ ಅವರ ಮೊಮ್ಮಗಳು, ಪೂರ್ಣಿಮಾ-ರಾಮಕುಮಾರ್ ಮಗಳು ಧನ್ಯಾ ರಾಮಕುಮಾರ್ ?ನಿನ್ನ ಸನಿಹಕೆ’ ಚಿತ್ರದ ಮೂಲಕ ಬೆಳ್ಳಿತೆರೆಗೆ ನಾಯಕಿಯಾಗಿ ಬಂದರು. ಆ ಚಿತ್ರ ತೆರೆಕಂಡಿದೆ. ?ಬೆಳ್ಳಿಕಾಲುಂಗುರ’ ಚಿತ್ರದಲ್ಲೂ ಅವರದು ಮುಖ್ಯ ಭೂಮಿಕೆ. ಹಿಂದೆ ಅದೇ ಹೆಸರಿನ ಚಿತ್ರ ನಿರ್ಮಿಸಿದ್ದ ನಿರ್ಮಾಪಕ.ರಾ.ಗೋವಿಂದು ಅವರದೇ ಚಿತ್ರವಿದು. ಇನ್ನೂ ಕೆಲವು ಚಿತ್ರಗಳಲ್ಲಿ ಅವರು ಅಭಿನಯಿಸುವ ಕುರಿತಂತೆ ಮಾತುಕತೆಗಳಾಗುತ್ತಿವೆ ಎನ್ನಲಾಗಿದೆ.
ಕನ್ನಡ ಚಿತ್ರರಂಗದಲ್ಲಿ ನಾಯಕಿಯರಿಗೆ ತಾರಾವರ್ಚಸ್ಸು ತಂದುಕೊಟ್ಟ ತಾರೆ ಮಾಲಾಶ್ರೀ. ಮಾಲಾಶ್ರೀ ಮತ್ತು ನಿರ್ಮಾಪಕ ರಾಮು ದಂಪತಿಯ ಮಗಳು ಅನನ್ಯ ಇದೀಗ ಚಿತ್ರರಂಗ ಪ್ರವೇಶಿಸಿದ್ದಾರೆ. ರಾಧನಾ ರಾಮ್ ಎನ್ನುವ ತೆರೆನಾಮದೊಂದಿಗೆ ಬಂದಿರುವ ಅವರ ಮೊದಲ ಚಿತ್ರ ಈಗಾಗಲೇ ಚಿತ್ರೀಕರಣ ಆರಂಭಿಸಿದೆ. ದರ್ಶನ್ ಅಭಿನಯದ 56ನೇ ಚಿತ್ರದಲ್ಲಿ ಅವರ ಜೋಡಿಯಾಗಿ ರಾಧನಾ ನಟಿಸುತ್ತಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಅವರಿಗಾಗಿ ತರುಣ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಕನ್ನಡ ನಟ ?ನೆನಪಿರಲಿ’ ಖ್ಯಾತಿಯ ನಟ ಪ್ರೇಮ್ ಮಗಳು ಅಮೃತಾ ಪ್ರೇಮ್ ಬಣ್ಣಹಚ್ಚಿದ್ದಾರೆ. ಅವರು ಅಭಿನಯಿಸಲಿರುವ ಮೊದಲ ಚಿತ್ರ ?ಟಗರು ಪಲ್ಯ’. ನಟ ಡಾಲಿ ಧನಂಜಯ ನಿರ್ಮಿಸುತ್ತಿರುವ ಈ ಚಿತ್ರವನ್ನು ಉಮೇಶ್ ಕೆ.ಕೃಪಾ ನಿರ್ದೇಶಿಸುತ್ತಿದ್ದು ಅವರಿಗೂ ಇದು ಮೊದಲ ಚಿತ್ರ.
ಇದೀಗ ಮತ್ತೊಂದು ಕಲಾಕುಟುಂಬದ ಕುಡಿ ಬೆಳ್ಳಿತೆರೆಗೆ ಕಾಲಿಟ್ಟ ಸುದ್ದಿ. ಗುಬ್ಬಿ ಕಂಪೆನಿಯಲ್ಲಿದ್ದ ಕೃಷ್ಣ ಅವರ ಮೊಮ್ಮಗಳು ಕೀರ್ತಿ ಕೃಷ್ಣ ಈ ನಟಿ. ಕೃಷ್ಣ ಅವರ ಮಕ್ಕಳಾದ ಶ್ರುತಿ ಮತ್ತು ಶರಣ್ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಹೆಸರಾದವರು. ಅವರ ಮತ್ತೊಬ್ಬ ಮಗಳು ಉಷಾ, ಚಿತ್ರರಂಗದಿಂದ ದೂರವಿದ್ದರು. ಆದರೆ ಆಕೆಯ ಮಗಳು ಕೀರ್ತಿ ಈಗ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಹಿಂದೆ ರಾಮ್‌ಕುಮಾರ್ -ಶ್ರುತಿ ಅಭಿಯದ ?ಶ್ರೀನಾಗಶಕ್ತಿ’ಯಲ್ಲಿ ಬಾಲನಟಿಾಂಗಿ ಕಾಣಿಸಿಕೊಂಡಿದ್ದ ಕೀರ್ತಿ ಇದೀಗ ಓದು ಮುಗಿಸಿ ಬಂದಿದ್ದಾರೆ. ಅವರು ಅಭಿನಯಿಸಲಿರುವ ಚಿತ್ರ ?ಧರಣಿ’. ?ಅನಂತು ವರ್ಸಸ್ ನುಸ್ರತ್’ ನಿರ್ದೇಶಿಸಿದ ಸುಧೀರ್ ಶಾನುಭೋಗ್ ಅವರ ಚಿತ್ರ ?ಧರಣಿ’. ಮನೋಜ್ ಜೋಡಿಯಾಗಿ ಕೀರ್ತಿ ನಟಿಸಲಿದ್ದಾರೆ. ಯಂಗ್ ಥಿಂಕರ್ಸ್ ಫಿಲಂಸ್ ಲಾಂಛನದಲ್ಲಿ ಜಿ.ಕೆ.ಉಮೇಶ್ ಕೆ. ಗಣೇಶ್ ಐತಾಳ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಛಾಯಾಗ್ರಹಣ, ಅರುಣೋದಯ ಕಥೆ , ಶ್ರೀನಿಧಿ ಡಿ. ಎಸ್. ಸಂಭಾಷಣೆ ಈ ಚಿತ್ರದ ಮೊದಲ ನೋಟ ಹೊರಬಂದಿದೆ.

andolanait

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

2 hours ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

3 hours ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

3 hours ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

3 hours ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

3 hours ago