ಆಂದೋಲನ ಪುರವಣಿ

ಸಿನಿಮಾಲ್‌ : ಸಿನಿಕುಟುಂಬದ ತಾರೆಯರ ರಂಗಪ್ರವೇಶ

ಧನ್ಯಾ, ರಾಧನ್, ಅಮೃತಾ ನಂತರ ಕೀರ್ತಿ

ಸಿನಿಕುಟುಂಬಗಳಿಂದ ಚಿತ್ರರಂಗಕ್ಕೆ ನಟರಾಗಿ ಬಂದಿರುವ ಸಾಕಷ್ಟು ಮಂದಿ ಯುವಕರಿದ್ದಾರೆ. ಚಿತ್ರರಂಗದ ಮೊದಲ ಕುಟುಂಬಗಳ ಮೂರನೇ ತಲೆಮಾರಿನವರೂ ಇದ್ದಾರೆ. ಆದರೆ ಯುವತಿಯರು ಬಣ್ಣಹಚ್ಚಿದ್ದು ಕಡಿಮೆ. ಬಾಲನಟಿಯರಾಗಿ ಬಂದವರಿದ್ದಾರೆ. ಇತ್ತೀಚೆಗೆ ಅವರೂ ಬರತೊಡಗಿದ್ದಾರೆ.
ಡಾ.ರಾಜಕುಮಾರ್ ಅವರ ಮೊಮ್ಮಗಳು, ಪೂರ್ಣಿಮಾ-ರಾಮಕುಮಾರ್ ಮಗಳು ಧನ್ಯಾ ರಾಮಕುಮಾರ್ ?ನಿನ್ನ ಸನಿಹಕೆ’ ಚಿತ್ರದ ಮೂಲಕ ಬೆಳ್ಳಿತೆರೆಗೆ ನಾಯಕಿಯಾಗಿ ಬಂದರು. ಆ ಚಿತ್ರ ತೆರೆಕಂಡಿದೆ. ?ಬೆಳ್ಳಿಕಾಲುಂಗುರ’ ಚಿತ್ರದಲ್ಲೂ ಅವರದು ಮುಖ್ಯ ಭೂಮಿಕೆ. ಹಿಂದೆ ಅದೇ ಹೆಸರಿನ ಚಿತ್ರ ನಿರ್ಮಿಸಿದ್ದ ನಿರ್ಮಾಪಕ.ರಾ.ಗೋವಿಂದು ಅವರದೇ ಚಿತ್ರವಿದು. ಇನ್ನೂ ಕೆಲವು ಚಿತ್ರಗಳಲ್ಲಿ ಅವರು ಅಭಿನಯಿಸುವ ಕುರಿತಂತೆ ಮಾತುಕತೆಗಳಾಗುತ್ತಿವೆ ಎನ್ನಲಾಗಿದೆ.
ಕನ್ನಡ ಚಿತ್ರರಂಗದಲ್ಲಿ ನಾಯಕಿಯರಿಗೆ ತಾರಾವರ್ಚಸ್ಸು ತಂದುಕೊಟ್ಟ ತಾರೆ ಮಾಲಾಶ್ರೀ. ಮಾಲಾಶ್ರೀ ಮತ್ತು ನಿರ್ಮಾಪಕ ರಾಮು ದಂಪತಿಯ ಮಗಳು ಅನನ್ಯ ಇದೀಗ ಚಿತ್ರರಂಗ ಪ್ರವೇಶಿಸಿದ್ದಾರೆ. ರಾಧನಾ ರಾಮ್ ಎನ್ನುವ ತೆರೆನಾಮದೊಂದಿಗೆ ಬಂದಿರುವ ಅವರ ಮೊದಲ ಚಿತ್ರ ಈಗಾಗಲೇ ಚಿತ್ರೀಕರಣ ಆರಂಭಿಸಿದೆ. ದರ್ಶನ್ ಅಭಿನಯದ 56ನೇ ಚಿತ್ರದಲ್ಲಿ ಅವರ ಜೋಡಿಯಾಗಿ ರಾಧನಾ ನಟಿಸುತ್ತಿದ್ದಾರೆ. ರಾಕ್‌ಲೈನ್ ವೆಂಕಟೇಶ್ ಅವರಿಗಾಗಿ ತರುಣ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಕನ್ನಡ ನಟ ?ನೆನಪಿರಲಿ’ ಖ್ಯಾತಿಯ ನಟ ಪ್ರೇಮ್ ಮಗಳು ಅಮೃತಾ ಪ್ರೇಮ್ ಬಣ್ಣಹಚ್ಚಿದ್ದಾರೆ. ಅವರು ಅಭಿನಯಿಸಲಿರುವ ಮೊದಲ ಚಿತ್ರ ?ಟಗರು ಪಲ್ಯ’. ನಟ ಡಾಲಿ ಧನಂಜಯ ನಿರ್ಮಿಸುತ್ತಿರುವ ಈ ಚಿತ್ರವನ್ನು ಉಮೇಶ್ ಕೆ.ಕೃಪಾ ನಿರ್ದೇಶಿಸುತ್ತಿದ್ದು ಅವರಿಗೂ ಇದು ಮೊದಲ ಚಿತ್ರ.
ಇದೀಗ ಮತ್ತೊಂದು ಕಲಾಕುಟುಂಬದ ಕುಡಿ ಬೆಳ್ಳಿತೆರೆಗೆ ಕಾಲಿಟ್ಟ ಸುದ್ದಿ. ಗುಬ್ಬಿ ಕಂಪೆನಿಯಲ್ಲಿದ್ದ ಕೃಷ್ಣ ಅವರ ಮೊಮ್ಮಗಳು ಕೀರ್ತಿ ಕೃಷ್ಣ ಈ ನಟಿ. ಕೃಷ್ಣ ಅವರ ಮಕ್ಕಳಾದ ಶ್ರುತಿ ಮತ್ತು ಶರಣ್ ಈಗಾಗಲೇ ಕನ್ನಡ ಚಿತ್ರರಂಗದಲ್ಲಿ ಹೆಸರಾದವರು. ಅವರ ಮತ್ತೊಬ್ಬ ಮಗಳು ಉಷಾ, ಚಿತ್ರರಂಗದಿಂದ ದೂರವಿದ್ದರು. ಆದರೆ ಆಕೆಯ ಮಗಳು ಕೀರ್ತಿ ಈಗ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಹಿಂದೆ ರಾಮ್‌ಕುಮಾರ್ -ಶ್ರುತಿ ಅಭಿಯದ ?ಶ್ರೀನಾಗಶಕ್ತಿ’ಯಲ್ಲಿ ಬಾಲನಟಿಾಂಗಿ ಕಾಣಿಸಿಕೊಂಡಿದ್ದ ಕೀರ್ತಿ ಇದೀಗ ಓದು ಮುಗಿಸಿ ಬಂದಿದ್ದಾರೆ. ಅವರು ಅಭಿನಯಿಸಲಿರುವ ಚಿತ್ರ ?ಧರಣಿ’. ?ಅನಂತು ವರ್ಸಸ್ ನುಸ್ರತ್’ ನಿರ್ದೇಶಿಸಿದ ಸುಧೀರ್ ಶಾನುಭೋಗ್ ಅವರ ಚಿತ್ರ ?ಧರಣಿ’. ಮನೋಜ್ ಜೋಡಿಯಾಗಿ ಕೀರ್ತಿ ನಟಿಸಲಿದ್ದಾರೆ. ಯಂಗ್ ಥಿಂಕರ್ಸ್ ಫಿಲಂಸ್ ಲಾಂಛನದಲ್ಲಿ ಜಿ.ಕೆ.ಉಮೇಶ್ ಕೆ. ಗಣೇಶ್ ಐತಾಳ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಶಶಾಂಕ್ ಶೇಷಗಿರಿ ಸಂಗೀತ ಸಂಯೋಜನೆ, ಅರುಣ್ ಸುರೇಶ್ ಛಾಯಾಗ್ರಹಣ, ಅರುಣೋದಯ ಕಥೆ , ಶ್ರೀನಿಧಿ ಡಿ. ಎಸ್. ಸಂಭಾಷಣೆ ಈ ಚಿತ್ರದ ಮೊದಲ ನೋಟ ಹೊರಬಂದಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago