‘ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದ್ದೆ. ಈಗ ‘ಹೊಟ್ಟೆಪಾಡು’ ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ ಪತ್ನಿ ರಾಧ ಈ ಚಿತ್ರದ ನಿರ್ಮಾಪಕಿ. ನಾನೇ ಸಂಗೀತ ನಿರ್ದೇಶನ ಹಾಗೂ ನಿರ್ದೇಶನ ಮಾಡಿದ್ದೇನೆ. ‘ಹೊಟ್ಟೆಪಾಡು’ ವಿಭಿನ್ನ ಕಥೆ ಹೊಂದಿರುವ ಸಾಹಸಮಯ ಹಾಗೂ ಸಾಂಸಾರಿಕಚಿತ್ರ. ಸದ್ಯದಲ್ಲೇ ಚಿತ್ರಬಿಡುಗಡೆಯಾಗುತ್ತಿದೆ. – ಇದು ಮೊನ್ನೆ ಸಿರಿ ಮ್ಯೂಸಿಕ್ ಮೂಲಕ ಆಡಿಯೋ ಬಿಡುಗಡೆಯಾದ ‘ಹೊಟ್ಟೆಪಾಡು’ಚಿತ್ರದ ಸಂಗೀತ ಸಂಯೋಜಕ, ನಿರ್ದೇಶಕ, ಮುಖ್ಯ ಪಾತ್ರಧಾರಿ ವಸಂತ್ ಅವರ ಮಾತುಗಳು. ವಂದನ ಎಂಟರ್ಪ್ರೈಸಸ್ ಲಾಂಛನದಲ್ಲಿ ಚಿತ್ರ ತಯಾರಾಗಿದೆ. ಹಿರಿಯ ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಬಾಲಾಜಿಸಿಂಗ್, ಅಡಕಮಾರನಹಳ್ಳಿ ರಾಜಕಾರಣಿಗಳಾದ ರಾಜಣ್ಣ ಹಾಗೂ ಸಿರಿ ಮ್ಯೂಸಿಕ್ ಸುರೇಶ್ಚಿಕ್ಕಣ್ಣ ಈ ಹಾಡುಗಳ ಬಿಡುಗಡೆಗೆ ಅತಿಥಿಗಳಾಗಿದ್ದರು. ತನ್ಮಯ ಎಸ್ ಆನಂದಕುಮಾರ್ ಚಿತ್ರಕಥೆ, ಸಂಭಾಷಣೆ, ನೃತ್ಯ ಹಾಗೂ ಸಹಕಾರ ನಿರ್ದೇಶನ ಇರುವ ಈ ಚಿತ್ರಕ್ಕೆ ರವಿ ಬೆಳಗುಂದಿ ಛಾಯಾಗ್ರಹಣ ಹಾಗೂ ಅಮಿತ್ ಜವಳಪುರ ಸಂಕಲನವಿದೆ. ವಸಂತ್ ಅವರೊಂದಿಗೆ, ಜಾಹ್ನವಿ ವಿಶ್ವನಾಥ್, ವಿನಯ ಪ್ರಸಾದ್, ಶೋಭರಾಜ್, ಅಪೂರ್ವ, ಶೈಲೇಶ್ ತಾರಾಬಳಗದಲ್ಲಿದ್ದಾರೆ
ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಉತ್ತರ ಕೊಡಗಿನ ಗ್ರಾಮೀಣ ಹಾಗೂ ಅರಣ್ಯದ ಅಂಚಿನ ಪ್ರದೇಶ ಗಳಲ್ಲಿ ಇತ್ತೀಚಿನ ದಿನಗಳಲ್ಲಿ ಚಿರತೆಗಳ ಚಲನವಲನ…
ಶೇಷಾದ್ರಿ ಗಂಜೂರು ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದೇಶಗಳು ಮುಂದುವರಿಸಿರುವ ಯುದ್ಧ ಸದ್ಯಕ್ಕೆ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ. ಏತನ್ಮಧ್ಯೆ…
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…