ಆಂದೋಲನ ಪುರವಣಿ

ಸಿನಿಮಾಲ್‌ : ಹೊಟ್ಟೆಪಾಡು’ ಚಿತ್ರಕ್ಕೆ ಪತಿ ನಾಯಕ, ನಿರ್ದೇಶಕ, ಪತ್ನಿ ನಿರ್ಮಾಪಕಿ

‘ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದ್ದೆ. ಈಗ ‘ಹೊಟ್ಟೆಪಾಡು’ ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ ಪತ್ನಿ ರಾಧ ಈ ಚಿತ್ರದ ನಿರ್ಮಾಪಕಿ. ನಾನೇ ಸಂಗೀತ ನಿರ್ದೇಶನ ಹಾಗೂ ನಿರ್ದೇಶನ ಮಾಡಿದ್ದೇನೆ. ‘ಹೊಟ್ಟೆಪಾಡು’ ವಿಭಿನ್ನ ಕಥೆ ಹೊಂದಿರುವ ಸಾಹಸಮಯ ಹಾಗೂ ಸಾಂಸಾರಿಕಚಿತ್ರ. ಸದ್ಯದಲ್ಲೇ ಚಿತ್ರಬಿಡುಗಡೆಯಾಗುತ್ತಿದೆ. – ಇದು ಮೊನ್ನೆ ಸಿರಿ ಮ್ಯೂಸಿಕ್ ಮೂಲಕ ಆಡಿಯೋ ಬಿಡುಗಡೆಯಾದ ‘ಹೊಟ್ಟೆಪಾಡು’ಚಿತ್ರದ ಸಂಗೀತ ಸಂಯೋಜಕ, ನಿರ್ದೇಶಕ, ಮುಖ್ಯ ಪಾತ್ರಧಾರಿ ವಸಂತ್ ಅವರ ಮಾತುಗಳು. ವಂದನ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಚಿತ್ರ ತಯಾರಾಗಿದೆ. ಹಿರಿಯ ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಬಾಲಾಜಿಸಿಂಗ್, ಅಡಕಮಾರನಹಳ್ಳಿ ರಾಜಕಾರಣಿಗಳಾದ ರಾಜಣ್ಣ ಹಾಗೂ ಸಿರಿ ಮ್ಯೂಸಿಕ್ ಸುರೇಶ್‌ಚಿಕ್ಕಣ್ಣ ಈ ಹಾಡುಗಳ ಬಿಡುಗಡೆಗೆ ಅತಿಥಿಗಳಾಗಿದ್ದರು. ತನ್ಮಯ ಎಸ್ ಆನಂದಕುಮಾರ್ ಚಿತ್ರಕಥೆ, ಸಂಭಾಷಣೆ, ನೃತ್ಯ ಹಾಗೂ ಸಹಕಾರ ನಿರ್ದೇಶನ ಇರುವ ಈ ಚಿತ್ರಕ್ಕೆ ರವಿ ಬೆಳಗುಂದಿ ಛಾಯಾಗ್ರಹಣ ಹಾಗೂ ಅಮಿತ್ ಜವಳಪುರ ಸಂಕಲನವಿದೆ. ವಸಂತ್ ಅವರೊಂದಿಗೆ, ಜಾಹ್ನವಿ ವಿಶ್ವನಾಥ್, ವಿನಯ ಪ್ರಸಾದ್, ಶೋಭರಾಜ್, ಅಪೂರ್ವ, ಶೈಲೇಶ್ ತಾರಾಬಳಗದಲ್ಲಿದ್ದಾರೆ

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago