‘ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದ್ದೆ. ಈಗ ‘ಹೊಟ್ಟೆಪಾಡು’ ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ ಪತ್ನಿ ರಾಧ ಈ ಚಿತ್ರದ ನಿರ್ಮಾಪಕಿ. ನಾನೇ ಸಂಗೀತ ನಿರ್ದೇಶನ ಹಾಗೂ ನಿರ್ದೇಶನ ಮಾಡಿದ್ದೇನೆ. ‘ಹೊಟ್ಟೆಪಾಡು’ ವಿಭಿನ್ನ ಕಥೆ ಹೊಂದಿರುವ ಸಾಹಸಮಯ ಹಾಗೂ ಸಾಂಸಾರಿಕಚಿತ್ರ. ಸದ್ಯದಲ್ಲೇ ಚಿತ್ರಬಿಡುಗಡೆಯಾಗುತ್ತಿದೆ. – ಇದು ಮೊನ್ನೆ ಸಿರಿ ಮ್ಯೂಸಿಕ್ ಮೂಲಕ ಆಡಿಯೋ ಬಿಡುಗಡೆಯಾದ ‘ಹೊಟ್ಟೆಪಾಡು’ಚಿತ್ರದ ಸಂಗೀತ ಸಂಯೋಜಕ, ನಿರ್ದೇಶಕ, ಮುಖ್ಯ ಪಾತ್ರಧಾರಿ ವಸಂತ್ ಅವರ ಮಾತುಗಳು. ವಂದನ ಎಂಟರ್ಪ್ರೈಸಸ್ ಲಾಂಛನದಲ್ಲಿ ಚಿತ್ರ ತಯಾರಾಗಿದೆ. ಹಿರಿಯ ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಬಾಲಾಜಿಸಿಂಗ್, ಅಡಕಮಾರನಹಳ್ಳಿ ರಾಜಕಾರಣಿಗಳಾದ ರಾಜಣ್ಣ ಹಾಗೂ ಸಿರಿ ಮ್ಯೂಸಿಕ್ ಸುರೇಶ್ಚಿಕ್ಕಣ್ಣ ಈ ಹಾಡುಗಳ ಬಿಡುಗಡೆಗೆ ಅತಿಥಿಗಳಾಗಿದ್ದರು. ತನ್ಮಯ ಎಸ್ ಆನಂದಕುಮಾರ್ ಚಿತ್ರಕಥೆ, ಸಂಭಾಷಣೆ, ನೃತ್ಯ ಹಾಗೂ ಸಹಕಾರ ನಿರ್ದೇಶನ ಇರುವ ಈ ಚಿತ್ರಕ್ಕೆ ರವಿ ಬೆಳಗುಂದಿ ಛಾಯಾಗ್ರಹಣ ಹಾಗೂ ಅಮಿತ್ ಜವಳಪುರ ಸಂಕಲನವಿದೆ. ವಸಂತ್ ಅವರೊಂದಿಗೆ, ಜಾಹ್ನವಿ ವಿಶ್ವನಾಥ್, ವಿನಯ ಪ್ರಸಾದ್, ಶೋಭರಾಜ್, ಅಪೂರ್ವ, ಶೈಲೇಶ್ ತಾರಾಬಳಗದಲ್ಲಿದ್ದಾರೆ
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…