‘ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದ್ದೆ. ಈಗ ‘ಹೊಟ್ಟೆಪಾಡು’ ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ ಪತ್ನಿ ರಾಧ ಈ ಚಿತ್ರದ ನಿರ್ಮಾಪಕಿ. ನಾನೇ ಸಂಗೀತ ನಿರ್ದೇಶನ ಹಾಗೂ ನಿರ್ದೇಶನ ಮಾಡಿದ್ದೇನೆ. ‘ಹೊಟ್ಟೆಪಾಡು’ ವಿಭಿನ್ನ ಕಥೆ ಹೊಂದಿರುವ ಸಾಹಸಮಯ ಹಾಗೂ ಸಾಂಸಾರಿಕಚಿತ್ರ. ಸದ್ಯದಲ್ಲೇ ಚಿತ್ರಬಿಡುಗಡೆಯಾಗುತ್ತಿದೆ. – ಇದು ಮೊನ್ನೆ ಸಿರಿ ಮ್ಯೂಸಿಕ್ ಮೂಲಕ ಆಡಿಯೋ ಬಿಡುಗಡೆಯಾದ ‘ಹೊಟ್ಟೆಪಾಡು’ಚಿತ್ರದ ಸಂಗೀತ ಸಂಯೋಜಕ, ನಿರ್ದೇಶಕ, ಮುಖ್ಯ ಪಾತ್ರಧಾರಿ ವಸಂತ್ ಅವರ ಮಾತುಗಳು. ವಂದನ ಎಂಟರ್ಪ್ರೈಸಸ್ ಲಾಂಛನದಲ್ಲಿ ಚಿತ್ರ ತಯಾರಾಗಿದೆ. ಹಿರಿಯ ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಬಾಲಾಜಿಸಿಂಗ್, ಅಡಕಮಾರನಹಳ್ಳಿ ರಾಜಕಾರಣಿಗಳಾದ ರಾಜಣ್ಣ ಹಾಗೂ ಸಿರಿ ಮ್ಯೂಸಿಕ್ ಸುರೇಶ್ಚಿಕ್ಕಣ್ಣ ಈ ಹಾಡುಗಳ ಬಿಡುಗಡೆಗೆ ಅತಿಥಿಗಳಾಗಿದ್ದರು. ತನ್ಮಯ ಎಸ್ ಆನಂದಕುಮಾರ್ ಚಿತ್ರಕಥೆ, ಸಂಭಾಷಣೆ, ನೃತ್ಯ ಹಾಗೂ ಸಹಕಾರ ನಿರ್ದೇಶನ ಇರುವ ಈ ಚಿತ್ರಕ್ಕೆ ರವಿ ಬೆಳಗುಂದಿ ಛಾಯಾಗ್ರಹಣ ಹಾಗೂ ಅಮಿತ್ ಜವಳಪುರ ಸಂಕಲನವಿದೆ. ವಸಂತ್ ಅವರೊಂದಿಗೆ, ಜಾಹ್ನವಿ ವಿಶ್ವನಾಥ್, ವಿನಯ ಪ್ರಸಾದ್, ಶೋಭರಾಜ್, ಅಪೂರ್ವ, ಶೈಲೇಶ್ ತಾರಾಬಳಗದಲ್ಲಿದ್ದಾರೆ
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…