‘ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ಆಗಿನಿಂದಲೂ ನಾಯಕನಾಗುವ ಆಸೆ. ಆದರೆ ಆಗಿರಲಿಲ್ಲ. ಕೆಲವು ವರ್ಷ ಬೇರೆ ವ್ಯಾಪಾರ ಮಾಡುತ್ತಿದ್ದೆ. ಈಗ ‘ಹೊಟ್ಟೆಪಾಡು’ ಚಿತ್ರ ನಿರ್ಮಾಣ ಮಾಡಿದ್ದೇವೆ. ನನ್ನ ಪತ್ನಿ ರಾಧ ಈ ಚಿತ್ರದ ನಿರ್ಮಾಪಕಿ. ನಾನೇ ಸಂಗೀತ ನಿರ್ದೇಶನ ಹಾಗೂ ನಿರ್ದೇಶನ ಮಾಡಿದ್ದೇನೆ. ‘ಹೊಟ್ಟೆಪಾಡು’ ವಿಭಿನ್ನ ಕಥೆ ಹೊಂದಿರುವ ಸಾಹಸಮಯ ಹಾಗೂ ಸಾಂಸಾರಿಕಚಿತ್ರ. ಸದ್ಯದಲ್ಲೇ ಚಿತ್ರಬಿಡುಗಡೆಯಾಗುತ್ತಿದೆ. – ಇದು ಮೊನ್ನೆ ಸಿರಿ ಮ್ಯೂಸಿಕ್ ಮೂಲಕ ಆಡಿಯೋ ಬಿಡುಗಡೆಯಾದ ‘ಹೊಟ್ಟೆಪಾಡು’ಚಿತ್ರದ ಸಂಗೀತ ಸಂಯೋಜಕ, ನಿರ್ದೇಶಕ, ಮುಖ್ಯ ಪಾತ್ರಧಾರಿ ವಸಂತ್ ಅವರ ಮಾತುಗಳು. ವಂದನ ಎಂಟರ್ಪ್ರೈಸಸ್ ಲಾಂಛನದಲ್ಲಿ ಚಿತ್ರ ತಯಾರಾಗಿದೆ. ಹಿರಿಯ ನಿರ್ದೇಶಕರಾದ ಓಂ ಸಾಯಿಪ್ರಕಾಶ್, ಬಾಲಾಜಿಸಿಂಗ್, ಅಡಕಮಾರನಹಳ್ಳಿ ರಾಜಕಾರಣಿಗಳಾದ ರಾಜಣ್ಣ ಹಾಗೂ ಸಿರಿ ಮ್ಯೂಸಿಕ್ ಸುರೇಶ್ಚಿಕ್ಕಣ್ಣ ಈ ಹಾಡುಗಳ ಬಿಡುಗಡೆಗೆ ಅತಿಥಿಗಳಾಗಿದ್ದರು. ತನ್ಮಯ ಎಸ್ ಆನಂದಕುಮಾರ್ ಚಿತ್ರಕಥೆ, ಸಂಭಾಷಣೆ, ನೃತ್ಯ ಹಾಗೂ ಸಹಕಾರ ನಿರ್ದೇಶನ ಇರುವ ಈ ಚಿತ್ರಕ್ಕೆ ರವಿ ಬೆಳಗುಂದಿ ಛಾಯಾಗ್ರಹಣ ಹಾಗೂ ಅಮಿತ್ ಜವಳಪುರ ಸಂಕಲನವಿದೆ. ವಸಂತ್ ಅವರೊಂದಿಗೆ, ಜಾಹ್ನವಿ ವಿಶ್ವನಾಥ್, ವಿನಯ ಪ್ರಸಾದ್, ಶೋಭರಾಜ್, ಅಪೂರ್ವ, ಶೈಲೇಶ್ ತಾರಾಬಳಗದಲ್ಲಿದ್ದಾರೆ
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…
ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…
ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…
ಎಸ್.ಎಸ್.ಭಟ್ ಸುತ್ತಲಿನ ಕ್ರಷರ್ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…