ಆಂದೋಲನ ಪುರವಣಿ

ಸಿನಿಮಾಲ್‌ : ಚಿತ್ರದ ಹೆಸರು ಹೇಳುವ ಪ್ರಚಾರದ ಈ ಪರಿ

ನಟ ಬಾಂದಳದಿಂದ ಜಿಗಿದು ಬಂದ ನಟ ಕಿರಣ ರಾಜ್‌ !

ಎರಡು ಚಿತ್ರಗಳ ಹೆಸರುಗಳನ್ನು ವಿಶಿಷ್ಟ ರೀತಿಯಲ್ಲಿ ಲೋಕಾರ್ಪಣೆ ಮಾಡಿದ ಸುದ್ದಿ ಬಂದಿದೆ. ಎರಡೂ ಚಿತ್ರಗಳ ಮೊದಲ ನೋಟದ ಸಾಂಪ್ರದಾಯಿಕ ಸಮಾರಂಭಗಳಲ್ಲಿ ಅಲ್ಲ, ಬದಲಿಗೆ ತೀರಾ ವಿಭಿನ್ನ ರೀತಿಯಲ್ಲಿ ಆದವು.
ಹಾರುವ ವಿಮಾನದಿಂದ ಜಿಗಿಯುವ ಉತ್ಸಾಹಿಗಳು ಸಾಕಷ್ಟಿದ್ದಾರೆ. ಪ್ಯಾರಾ ಸೈಲಿಂಗ್, ಸ್ಕೈ  ಡೈವಿಂಗ್‌ಗಳು ಮನರಂಜನೆ ಬಯಸುವ ಸಾಹಸಿ ಪ್ರವಾಸಿಗರಿಗೆ ಲಭ್ಯ. ಇದು ತಮ್ಮ ಚಿತ್ರದ ಪ್ರಚಾರಕ್ಕಾಗಿ ಬಾಂದಳದಿಂದ ನಟ ಕಿರಣರಾಜ್ ಜಿಗಿದರು. ಕಿರಣರಾಜ್, ‘ಕನ್ನಡತಿ’ ಸರಣಿಯ ಮೂಲಕ ಮನೆಮಾತಾದವರು. ‘ಬಡ್ಡೀಸ್’ ಚಿತ್ರದಲ್ಲಿ ನಟಿಸಿದ್ದಾರೆ. ಗುರುತೇಜ್ ಶೆಟ್ಟಿ ನಿರ್ದೇಶನದ ಹೊಸಚಿತ್ರದ ಮುಖ್ಯಪಾತ್ರಧಾರಿ ಅವರು. ಚಿತ್ರದ ಹೆಸರನ್ನು ಪ್ರಕಟಿಸಲು ಅವರು ಹೊಸ ಸಾಹಸ ಮಾಡಿದ್ದನ್ನು ಅವರ ಮಾತಿನಲ್ಲೇ ಕೇಳಬೇಕು: ‘ನನಗೆ  ಸಿನಿಮಾ ಎಂದರೆ ಕನಸು. ಹಾಗಾಗಿ ಚಿತ್ರದ ಆರಂಭದಿಂದಲೂ ಸ್ವಲ್ಪ ವಿಶೇಷ ಇರಬೇಕು ಎಂದು ಬಯಸುತ್ತೇನೆ. ಸಾಮಾನ್ಯವಾಗಿ ಗಣ್ಯರ ಸಮ್ಮುಖದಲ್ಲಿ ಶೀರ್ಷಿಕೆ ಅನಾವರಣವಾಗುತ್ತದೆ. ಆದರೆ ನಾನು ಸ್ವಲ್ಪ ಭಿನ್ನವಾಗಿರಲಿ ಎಂದು ಯೋಚಿಸಿ, ಸ್ಕ್ತ್ಯೈವ್ ಡೈವ್ ಮೂಲಕ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದೆ. ಈ ಚಿತ್ರದ ಹೆಸರು ‘ರಾನಿ’. ನನ್ನ ಈ ಸಾಹಸಕ್ಕೆ ಮನೆಯವರಿಂದ, ಸ್ನೇಹಿತರಿಂದ ವಿರೋಧ ವ್ಯಕ್ತವಾಯಿತು. ಆದರೂ ನಾನು ಅಲ್ಲಿನ ಪರಿಣಿತರಿಂದ ತರಬೇತಿ ಪಡೆದು ಈ ಸಾಹಸಕ್ಕೆ ಮುಂದಾದೆ’.
ಅವರು ದುಬೈಯಲ್ಲಿ ತರಬೇತಿ ಪಡೆದ ನಂತರ ಸುಮಾರು ಹದಿಮೂರು ಸಾವಿರ ಅಡಿ ಎತ್ತರದಿಂದ ಜಿಗಿದು (ಸ್ಕೈ ಡೈವ್‌ ಮಾಡಿ) ಶೀರ್ಷಿಕೆ ಅನಾವರಣ ಮಾಡುವಾಗ ಚಿತ್ರ ತಂಡದವರು ಅಲ್ಲಿ ಯಾರೂ ಇರಲಿಲ್ಲ. ನಿರ್ದೇಶಕ ಗುರುತೇಜ ಶೆಟ್ಟಿ ಅವರು, ಇಲ್ಲಿ ದೇವರ ಬಳಿ ಪ್ರಾರ್ಥಿಸುತ್ತಿದ್ದರಂತೆ! ‘ಶೀರ್ಷಿಕೆ ಅನಾವರಣ ಸಾಹಸದ ಪೂರ್ತಿ ವಿಡಿಯೋ ನೋಡಿದ ಮೇಲೆ ನೆಮ್ಮದಿಯ ನಿಟ್ಟುಸಿರು ಬಿಟ್ಟೆ’ ಎನ್ನುತ್ತಾರೆ ಅವರು. ಈ ಚಿತ್ರವನ್ನು ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ್ ಹೆಗಡೆ ನಿರ್ಮಿಸಿದ್ದಾರೆ.
ಪತಿ ಚಿರಂಜೀವಿ ಸರ್ಜಾ ಅಗಲಿಕೆಯ ನಂತರ ತಾರೆ ಮೇಘನ ರಾಜ್ ಸರ್ಜಾ ನಟನೆಗೆ ಮರಳಿರುವ ಚಿತ್ರ ‘ತತ್ಸಮತದ್ಭವ’. ನಿರ್ದೇಶಕ ಪನ್ನಗಭರಣ ಹಾಗೂ ಸ್ಛೂರ್ತಿ ಅನಿಲ್ ನಿರ್ಮಿಸುತ್ತಿರುವ ಈ ಚಿತ್ರವನ್ನು ವಿಶಾಲ್ ಆತ್ರೇಯ ನಿರ್ದೇಶಿಸುತ್ತಿದ್ದು, ಈಗಾಗಲೇ ಚಿತ್ರೀಕರಣ ಮುಗಿದಿದೆ. ಇದರ ಮೊದಲ ನೋಟದ ಲೋಕಾರ್ಪಣೆ, ಚಿತ್ರ ತಂಡದ ಪ್ರಕಾರ, ನೂರಕ್ಕೂ ಹೆಚ್ಚು ನಟನಟಿಯರಿಂದ ತಮ್ಮ ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಏಕಕಾಲಕ್ಕೆ ಆಗಿದೆ. ನಟನಟಿಯರು ಮಾತ್ರವಲ್ಲದೆ, ಮೂವತ್ತಕ್ಕೂ ಹೆಚ್ಚು ದೇಶಗಳಲ್ಲಿ ಕನ್ನಡ ಹಾಗೂ ಇತರ ಸಂಘಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಫಸ್ಟ್‌ಲುಕ್ ಪೋಸ್ಟರ್ ಬಿಡುಗಡೆ ಮಾಡಿದ್ದಾಗಿಯೂ ಚಿತ್ರತಂಡ ಹೇಳಿದೆ. ‘ತತ್ಸಮತದ್ಭವ’ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ಸಂಯೋಜನೆ, ಶ್ರೀನಿವಾಸ್ ರಾಮಯ್ಯ ಛಾಯಾಗ್ರಹಣ, ರವಿ ಆರಾಧ್ಯ ಸಂಕಲನ ಇದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

4 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

4 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

4 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago