ಮುಂದಿನ ವಾರ ಸುದೀಪ್ ಮುಖ್ಯಭೂಮಿಕೆಯ, ಬಹುನಿರೀಕ್ಷೆಯ ಚಿತ್ರ ‘ವಿಕ್ರಾಂತ್ ರೋಣ’ ಬಿಡುಗಡೆ ಇರುವ ಕಾರಣ ಈ ವಾರ ಎರಡು ಚಿತ್ರಗಳು ಚಿತ್ರಮಂದಿರಗಳಲ್ಲಿ, ಒಂದು ಒಟಿಟಿ ತಾಣದಲ್ಲಿ ಪ್ರದರ್ಶನ ಕಾಣುತ್ತಿವೆ. ಅವು ‘ಶ್ರೀರಂಗ’, ‘ಮಾರಾಯ’ ಮತ್ತು ಒಟಿಟಿಯಲ್ಲಿ ಪ್ರಸಾರವಾಗಲಿರುವ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ?’.
ರುತು ಕ್ರಿಯೇಷನ್ ಸಂಸ್ಥೆಯ ಮೂಲಕ ಸುಮಾ ಸಿ.ಆರ್.ನಿರ್ಮಿಸಿರುವ ಚಿತ್ರ ‘ಶ್ರೀರಂಗ’. ಬಿ.ಎಂ. ದಿಲೀಪ್ ಸಹನಿರ್ಮಾಪಕರಾಗಿರುವ ಈ ಚಿತ್ರದ ರಚನೆ, ನಿರ್ದೇಶನದ ಜೊತೆ ಪ್ರಮುಖ ಪಾತ್ರವನ್ನು ನಿರ್ವಹಿಸಿರುವವರು ವೆಂಕಟ್ ಭಾರದ್ವಾಜ್. ಮುಖ್ಯಭೂಮಿಕೆಯಲ್ಲಿ ಶಿನವ್ ಜೊತೆಗೆ, ರಚನಾ ರಾಯ್, ರೂಪ ರಾಯಪ್ಪ, ವಂದನಾ ಶೆಟ್ಟಿ, ಗುರುರಾಜ್ ಹೊಸಕೋಟೆ, ಯಮುನಾ ಶ್ರೀನಿಧಿ, ಸಾಗರ್ ಜಯರಾಮ್, ಚಿಪ್ಸ್ ಬಾಬು, ಗಿರೀಶ್, ಮಣಿ ಮಾರನ್, ಮಾಸ್ಟರ್ ಚಿರಾಯು ಚಕ್ರವರ್ತಿ, ತ್ರಿಧಾರ ಲಕ್ಷ್ಮಣ್, ಪುಷ್ಕಲ್ ಪ್ರೀತ್, ರಜತ್ ರಿತಿಕ್, ಐಶಾನಿ ಇದ್ದಾರೆ. ಮಿಥುನ್ ಛಾಯಾಗ್ರಹಣ, ಚಂದನ್ ಸಂಕಲನ, ಶಂಕರ್ ರಾಮನ್ ಸಂಭಾಷಣೆ, ಸಮೀರ್ ಕುಲಕರ್ಣಿ ಸಂಗೀತ ಸಂಯೋಜನೆ ಇದೆ.
ಶ್ರೀ ಹೊನ್ನಾದೇವಿ ಗಂಗಾಧೇಶ್ವರ ಪ್ರೊಡಕ್ಷನ್ ಲಾಂಛನದಲ್ಲಿ ಎನ್.ಜಿ.ಸುಜಾತಾ ನಂದನ್ ನಿರ್ಮಿಸಿರುವ ಚಿತ್ರ ‘ಮಾರಾಯ’. ಈ ಚಿತ್ರದ ರಚನೆ, ನಿರ್ದೇಶನ ಉದಯ್ ಪ್ರೇಮ್ ಅವರದು. ವಿನು ಮನಸು ಸಂಗೀತ ಸಂಯೋಜನೆ, ಉದಯಾನಂದ ಬರ್ಕೆ ಛಾಯಾಗ್ರಹಣ, ಶಿವಕುಮಾರ್ ಎ. ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಇರುವ ಈ ಚಿತ್ರದ ತಾರಾಗಣದಲ್ಲಿ ದಿವಾಕರ ಶರ್ಮ, ದಿನೇಶ್ ಕುಮಾರ್, ವಿನಯ ಪ್ರಸಾದ್, ಜೆಕೆ, ಚಿಲ್ಲರ್ ಮಂಜು, ಡಿಂಗ್ರಿ ನಾಗರಾಜ್, ಶ್ರೇಯಾ ಶ್ರೀನಿವಾಸ್, ಬಸು ಮುಂತಾದವರು ಇದ್ದಾರೆ. ರಾಜೇಶ್ ಕೃಷ್ಣನ್ ಚಿತ್ರದ ಶೀರ್ಷಿಕೆ ಗೀತೆ ಹಾಡಿದ್ದಾರೆ.
ಅಮ್ರೇಜ್ ಸೂರ್ಯವಂಶಿ ನಿರ್ಮಿಸಿರುವ ಚಿತ್ರ ‘ನೋಡಿ ಸ್ವಾಮಿ ಇವನು ಇರೋದೇ ಹೀಗೆ?’. ‘ಆಪರೇಷನ್ ಅಲಮೇಲಮ್ಮ’,‘ಕವಲು ದಾರಿ’ ಚಿತ್ರಗಳ ಮೂಲಕ ಹೆಸರಾದ ನಟ ರಿಷಿ ಕೇಂದ್ರ ಪಾತ್ರದಲ್ಲಿರುವ ಈ ಚಿತ್ರವನ್ನು ಇಸ್ಲಾಹುದ್ದೀನ್ ಎನ್.ಎಸ್. ಬರೆದು ನಿರ್ದೇಶಿಸಿದ್ದಾರೆ.
ರಿಶಿ ಅವರೊಂದಿಗೆ ಧನ್ಯ ಬಾಲಕೃಷ್ಣ, ಗ್ರೀಷ್ಮಾ ಶ್ರೀಧರ್, ಅಪೂರ್ವ ಎಸ್ ಭಾರಧ್ವಜ್, ಭವಾನಿ ಪ್ರಕಾಶ್, ನಾಗಭೂಷಣ, ಮಹದೇವ್ ಪ್ರಸಾದ್ ಮುಂತಾದವರಿದ್ದಾರೆ. ವಿಷ್ಣು ಪ್ರಸಾದ್ ಪಿ, ದುಲೀಪ್ ಕುಮಾರ್ ಎಂ.ಎಸ್ ಛಾಯಾಗ್ರಹಣ, ಪ್ರಸನ್ನ ಸಿವರಾಮನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…