ಆಂದೋಲನ ಪುರವಣಿ

ಸಿನಿಮಾಲ್‌ : ಈ ವಾರ ಎರಡು, ಮತ್ತೊಂದು

ಮುಂದಿನ ವಾರ ಸುದೀಪ್ ಮುಖ್ಯಭೂಮಿಕೆಯ, ಬಹುನಿರೀಕ್ಷೆಯ ಚಿತ್ರ ‘ವಿಕ್ರಾಂತ್ ರೋಣ’ ಬಿಡುಗಡೆ ಇರುವ ಕಾರಣ ಈ ವಾರ ಎರಡು ಚಿತ್ರಗಳು ಚಿತ್ರಮಂದಿರಗಳಲ್ಲಿ, ಒಂದು ಒಟಿಟಿ ತಾಣದಲ್ಲಿ ಪ್ರದರ್ಶನ ಕಾಣುತ್ತಿವೆ. ಅವು ‘ಶ್ರೀರಂಗ’, ‘ಮಾರಾಯ’ ಮತ್ತು ಒಟಿಟಿಯಲ್ಲಿ ಪ್ರಸಾರವಾಗಲಿರುವ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ?’.

‘ಶ್ರೀರಂಗ’

ರುತು ಕ್ರಿಯೇಷನ್ ಸಂಸ್ಥೆಯ ಮೂಲಕ ಸುಮಾ ಸಿ.ಆರ್.ನಿರ್ಮಿಸಿರುವ ಚಿತ್ರ ‘ಶ್ರೀರಂಗ’. ಬಿ.ಎಂ. ದಿಲೀಪ್ ಸಹನಿರ್ಮಾಪಕರಾಗಿರುವ ಈ ಚಿತ್ರದ ರಚನೆ, ನಿರ್ದೇಶನದ ಜೊತೆ ಪ್ರಮುಖ ಪಾತ್ರವನ್ನು ನಿರ್ವಹಿಸಿರುವವರು ವೆಂಕಟ್ ಭಾರದ್ವಾಜ್. ಮುಖ್ಯಭೂಮಿಕೆಯಲ್ಲಿ ಶಿನವ್ ಜೊತೆಗೆ, ರಚನಾ ರಾಯ್, ರೂಪ ರಾಯಪ್ಪ, ವಂದನಾ ಶೆಟ್ಟಿ, ಗುರುರಾಜ್ ಹೊಸಕೋಟೆ, ಯಮುನಾ ಶ್ರೀನಿಧಿ, ಸಾಗರ್ ಜಯರಾಮ್, ಚಿಪ್ಸ್ ಬಾಬು, ಗಿರೀಶ್, ಮಣಿ ಮಾರನ್, ಮಾಸ್ಟರ್ ಚಿರಾಯು ಚಕ್ರವರ್ತಿ, ತ್ರಿಧಾರ ಲಕ್ಷ್ಮಣ್, ಪುಷ್ಕಲ್ ಪ್ರೀತ್, ರಜತ್ ರಿತಿಕ್, ಐಶಾನಿ ಇದ್ದಾರೆ. ಮಿಥುನ್ ಛಾಯಾಗ್ರಹಣ, ಚಂದನ್ ಸಂಕಲನ, ಶಂಕರ್ ರಾಮನ್ ಸಂಭಾಷಣೆ, ಸಮೀರ್ ಕುಲಕರ್ಣಿ ಸಂಗೀತ ಸಂಯೋಜನೆ ಇದೆ.

‘ಮಾರಾಯ’

ಶ್ರೀ ಹೊನ್ನಾದೇವಿ ಗಂಗಾಧೇಶ್ವರ ಪ್ರೊಡಕ್ಷನ್ ಲಾಂಛನದಲ್ಲಿ ಎನ್.ಜಿ.ಸುಜಾತಾ ನಂದನ್ ನಿರ್ಮಿಸಿರುವ ಚಿತ್ರ ‘ಮಾರಾಯ’. ಈ ಚಿತ್ರದ ರಚನೆ, ನಿರ್ದೇಶನ ಉದಯ್ ಪ್ರೇಮ್ ಅವರದು. ವಿನು ಮನಸು ಸಂಗೀತ ಸಂಯೋಜನೆ, ಉದಯಾನಂದ ಬರ್ಕೆ ಛಾಯಾಗ್ರಹಣ, ಶಿವಕುಮಾರ್ ಎ. ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಇರುವ ಈ ಚಿತ್ರದ ತಾರಾಗಣದಲ್ಲಿ ದಿವಾಕರ ಶರ್ಮ, ದಿನೇಶ್ ಕುಮಾರ್, ವಿನಯ ಪ್ರಸಾದ್, ಜೆಕೆ, ಚಿಲ್ಲರ್ ಮಂಜು, ಡಿಂಗ್ರಿ ನಾಗರಾಜ್, ಶ್ರೇಯಾ ಶ್ರೀನಿವಾಸ್, ಬಸು ಮುಂತಾದವರು ಇದ್ದಾರೆ. ರಾಜೇಶ್ ಕೃಷ್ಣನ್ ಚಿತ್ರದ ಶೀರ್ಷಿಕೆ ಗೀತೆ ಹಾಡಿದ್ದಾರೆ.

‘ನೋಡಿ ಸ್ವಾಮಿ ಇವನು ಇರೋದೆ ಹೀಗೆ’

ಅಮ್ರೇಜ್ ಸೂರ್ಯವಂಶಿ ನಿರ್ಮಿಸಿರುವ ಚಿತ್ರ ‘ನೋಡಿ ಸ್ವಾಮಿ ಇವನು ಇರೋದೇ ಹೀಗೆ?’. ‘ಆಪರೇಷನ್ ಅಲಮೇಲಮ್ಮ’,‘ಕವಲು ದಾರಿ’ ಚಿತ್ರಗಳ ಮೂಲಕ ಹೆಸರಾದ ನಟ ರಿಷಿ ಕೇಂದ್ರ ಪಾತ್ರದಲ್ಲಿರುವ ಈ ಚಿತ್ರವನ್ನು ಇಸ್ಲಾಹುದ್ದೀನ್ ಎನ್.ಎಸ್. ಬರೆದು ನಿರ್ದೇಶಿಸಿದ್ದಾರೆ.

ರಿಶಿ ಅವರೊಂದಿಗೆ ಧನ್ಯ ಬಾಲಕೃಷ್ಣ, ಗ್ರೀಷ್ಮಾ ಶ್ರೀಧರ್, ಅಪೂರ್ವ ಎಸ್ ಭಾರಧ್ವಜ್, ಭವಾನಿ ಪ್ರಕಾಶ್, ನಾಗಭೂಷಣ, ಮಹದೇವ್ ಪ್ರಸಾದ್ ಮುಂತಾದವರಿದ್ದಾರೆ. ವಿಷ್ಣು ಪ್ರಸಾದ್ ಪಿ, ದುಲೀಪ್ ಕುಮಾರ್ ಎಂ.ಎಸ್ ಛಾಯಾಗ್ರಹಣ, ಪ್ರಸನ್ನ ಸಿವರಾಮನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

andolana

Recent Posts

ಗ್ರಾಮೀಣ ಭಾಗದಲ್ಲಿ ಚಳಿಗೆ ತತ್ತರಿಸಿದ ಜನರು

ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ  ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…

23 seconds ago

ಒಂದೇ ವರ್ಷದಲ್ಲಿ ಕಿತ್ತು ಬಂದ ರಸ್ತೆಯ ಜಲ್ಲಿ ಕಲ್ಲು!

ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…

4 mins ago

ನಿರಂತರ ಹುಲಿ, ಚಿರತೆಗಳ ಹಾವಳಿ; ಕಂಗಾಲಾದ ರೈತರು

ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…

8 mins ago

ಹುಣಸೆ, ಹಲಸು ಮತ್ತು ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…

12 hours ago

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…

13 hours ago