ಮುಂದಿನ ವಾರ ಸುದೀಪ್ ಮುಖ್ಯಭೂಮಿಕೆಯ, ಬಹುನಿರೀಕ್ಷೆಯ ಚಿತ್ರ ‘ವಿಕ್ರಾಂತ್ ರೋಣ’ ಬಿಡುಗಡೆ ಇರುವ ಕಾರಣ ಈ ವಾರ ಎರಡು ಚಿತ್ರಗಳು ಚಿತ್ರಮಂದಿರಗಳಲ್ಲಿ, ಒಂದು ಒಟಿಟಿ ತಾಣದಲ್ಲಿ ಪ್ರದರ್ಶನ ಕಾಣುತ್ತಿವೆ. ಅವು ‘ಶ್ರೀರಂಗ’, ‘ಮಾರಾಯ’ ಮತ್ತು ಒಟಿಟಿಯಲ್ಲಿ ಪ್ರಸಾರವಾಗಲಿರುವ ‘ನೋಡಿ ಸ್ವಾಮಿ ಇವನು ಇರೋದೆ ಹೀಗೆ?’.
ರುತು ಕ್ರಿಯೇಷನ್ ಸಂಸ್ಥೆಯ ಮೂಲಕ ಸುಮಾ ಸಿ.ಆರ್.ನಿರ್ಮಿಸಿರುವ ಚಿತ್ರ ‘ಶ್ರೀರಂಗ’. ಬಿ.ಎಂ. ದಿಲೀಪ್ ಸಹನಿರ್ಮಾಪಕರಾಗಿರುವ ಈ ಚಿತ್ರದ ರಚನೆ, ನಿರ್ದೇಶನದ ಜೊತೆ ಪ್ರಮುಖ ಪಾತ್ರವನ್ನು ನಿರ್ವಹಿಸಿರುವವರು ವೆಂಕಟ್ ಭಾರದ್ವಾಜ್. ಮುಖ್ಯಭೂಮಿಕೆಯಲ್ಲಿ ಶಿನವ್ ಜೊತೆಗೆ, ರಚನಾ ರಾಯ್, ರೂಪ ರಾಯಪ್ಪ, ವಂದನಾ ಶೆಟ್ಟಿ, ಗುರುರಾಜ್ ಹೊಸಕೋಟೆ, ಯಮುನಾ ಶ್ರೀನಿಧಿ, ಸಾಗರ್ ಜಯರಾಮ್, ಚಿಪ್ಸ್ ಬಾಬು, ಗಿರೀಶ್, ಮಣಿ ಮಾರನ್, ಮಾಸ್ಟರ್ ಚಿರಾಯು ಚಕ್ರವರ್ತಿ, ತ್ರಿಧಾರ ಲಕ್ಷ್ಮಣ್, ಪುಷ್ಕಲ್ ಪ್ರೀತ್, ರಜತ್ ರಿತಿಕ್, ಐಶಾನಿ ಇದ್ದಾರೆ. ಮಿಥುನ್ ಛಾಯಾಗ್ರಹಣ, ಚಂದನ್ ಸಂಕಲನ, ಶಂಕರ್ ರಾಮನ್ ಸಂಭಾಷಣೆ, ಸಮೀರ್ ಕುಲಕರ್ಣಿ ಸಂಗೀತ ಸಂಯೋಜನೆ ಇದೆ.
ಶ್ರೀ ಹೊನ್ನಾದೇವಿ ಗಂಗಾಧೇಶ್ವರ ಪ್ರೊಡಕ್ಷನ್ ಲಾಂಛನದಲ್ಲಿ ಎನ್.ಜಿ.ಸುಜಾತಾ ನಂದನ್ ನಿರ್ಮಿಸಿರುವ ಚಿತ್ರ ‘ಮಾರಾಯ’. ಈ ಚಿತ್ರದ ರಚನೆ, ನಿರ್ದೇಶನ ಉದಯ್ ಪ್ರೇಮ್ ಅವರದು. ವಿನು ಮನಸು ಸಂಗೀತ ಸಂಯೋಜನೆ, ಉದಯಾನಂದ ಬರ್ಕೆ ಛಾಯಾಗ್ರಹಣ, ಶಿವಕುಮಾರ್ ಎ. ಸಂಕಲನ, ಚಂದ್ರು ಬಂಡೆ ಸಾಹಸ ನಿರ್ದೇಶನ ಇರುವ ಈ ಚಿತ್ರದ ತಾರಾಗಣದಲ್ಲಿ ದಿವಾಕರ ಶರ್ಮ, ದಿನೇಶ್ ಕುಮಾರ್, ವಿನಯ ಪ್ರಸಾದ್, ಜೆಕೆ, ಚಿಲ್ಲರ್ ಮಂಜು, ಡಿಂಗ್ರಿ ನಾಗರಾಜ್, ಶ್ರೇಯಾ ಶ್ರೀನಿವಾಸ್, ಬಸು ಮುಂತಾದವರು ಇದ್ದಾರೆ. ರಾಜೇಶ್ ಕೃಷ್ಣನ್ ಚಿತ್ರದ ಶೀರ್ಷಿಕೆ ಗೀತೆ ಹಾಡಿದ್ದಾರೆ.
ಅಮ್ರೇಜ್ ಸೂರ್ಯವಂಶಿ ನಿರ್ಮಿಸಿರುವ ಚಿತ್ರ ‘ನೋಡಿ ಸ್ವಾಮಿ ಇವನು ಇರೋದೇ ಹೀಗೆ?’. ‘ಆಪರೇಷನ್ ಅಲಮೇಲಮ್ಮ’,‘ಕವಲು ದಾರಿ’ ಚಿತ್ರಗಳ ಮೂಲಕ ಹೆಸರಾದ ನಟ ರಿಷಿ ಕೇಂದ್ರ ಪಾತ್ರದಲ್ಲಿರುವ ಈ ಚಿತ್ರವನ್ನು ಇಸ್ಲಾಹುದ್ದೀನ್ ಎನ್.ಎಸ್. ಬರೆದು ನಿರ್ದೇಶಿಸಿದ್ದಾರೆ.
ರಿಶಿ ಅವರೊಂದಿಗೆ ಧನ್ಯ ಬಾಲಕೃಷ್ಣ, ಗ್ರೀಷ್ಮಾ ಶ್ರೀಧರ್, ಅಪೂರ್ವ ಎಸ್ ಭಾರಧ್ವಜ್, ಭವಾನಿ ಪ್ರಕಾಶ್, ನಾಗಭೂಷಣ, ಮಹದೇವ್ ಪ್ರಸಾದ್ ಮುಂತಾದವರಿದ್ದಾರೆ. ವಿಷ್ಣು ಪ್ರಸಾದ್ ಪಿ, ದುಲೀಪ್ ಕುಮಾರ್ ಎಂ.ಎಸ್ ಛಾಯಾಗ್ರಹಣ, ಪ್ರಸನ್ನ ಸಿವರಾಮನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…