ಸಾಮಾನ್ಯವಾಗಿ ಪ್ರೇಮಿಗಳ ದಿನದಂದು ಸಿನಿಮಾ ಸಂಬಂಧಪಟ್ಟ ಕಾರ್ಯಕ್ರಮಗಳು ಇದ್ದೇ ಇರುತ್ತವೆ. ಈ ಬಾರಿ ಕೂಡ ಇದ್ದವು. ಲೋಹಿತ್ ಹೆಚ್ ಅವರು ಕುಮಾರ್ ಬಿ. ಅವರಿಗಾಗಿ ನಿರ್ಮಿಸಿರುವ ‘ಮಾಫಿಯಾ’ ಚಿತ್ರದ ಭಿತ್ತಿಪತ್ರ ಬಿಡುಗಡೆ, ನಮಿತಾರಾವ್- ವಿಕ್ರಂಸೂರಿ ಜೋಡಿಯ ‘ಚೌಕಾಬಾರಾ’ ಹಾಡಿನ ಲೋಕಾರ್ಪಣೆ ಇದರಲ್ಲಿ ಸೇರಿದೆ. ‘ಮಾಫಿಯಾ’ ಪ್ರಜ್ವಲ್ ದೇವರಾಜ್ಮತ್ತು ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ ಚಿತ್ರ. ಮಾಫಿಯಾ ಅಂದರೆ ದುರುಳರ, ಅಪರಾಧಿಗಳ ಕೂಟ. ಇವರಿಗೂ ಪ್ರೇಮಿಗಳ ದಿನಕ್ಕೂ ಏನು ಸಂಬಂಧ ಎಂದು ಕೇಳುವಂತಿಲ್ಲ. ಈ ಚಿತ್ರತಂಡ ಪ್ರೇಮಿಗಳ ದಿನಕ್ಕೆ ಶುಭಕೋರಿದೆ. ‘ಮಾಫಿಯಾ’ ಚಿತ್ರಕ್ಕೆ ಎಸ್.ಪಾಂಡಿಕುಮಾರ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಇದ್ದು, ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ ಅವರೊಂದಿಗೆ ದೇವರಾಜ್, ಸಾಧು ಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.
‘ಚೌಕಾಬಾರ’ ಚಿತ್ರವನ್ನು ನಮಿತಾರಾವ್ ತಮ್ಮ ನವಿ ನಿರ್ಮಿತಿ ಲಾಂಛನದಲ್ಲಿ ನಿರ್ಮಿಸಿದರೆ, ವಿಕ್ರಮ್ ಸೂರಿ ನಿರ್ದೇಶಿಸಿದ್ದಾರೆ. ಮಣಿ ಆರ್ ರಾವ್ ಕಾದಂಬರಿ ಆಧರಿಸಿ ಈ ಚಿತ್ರ ತಯಾರಾಗಿದೆ ಎಂದಿದೆ ಚಿತ್ರತಂಡ. ಮುಂದಿನ ತಿಂಗಳು ತೆರೆಕಾಣಲಿರುವ ಈ ಚಿತ್ರ ಅಮೆರಿಕದಲ್ಲೂ ಏಕಕಾಲದಲ್ಲಿ ತೆರೆಗೆ ಬರುವ ಸಾಧ್ಯತೆ ಇದ್ದು, ಏಪ್ರಿಲ್ ನಲ್ಲಿ ದುಬೈ, ಆಸ್ಟ್ರೇಲಿಯಾ ಮುಂತಾದ ಕಡೆ ಬಿಡುಗಡೆ ಮಾಡುವ ಸಿದ್ಧತೆ ನಡೆಯುತ್ತಿದೆಯಂತೆ. ಚಿತ್ರದ ತಾರಾಗಣದಲ್ಲಿ ವಿಹಾನ್ ಪ್ರಭಂಜನ್, ಕಾವ್ಯ ರಮೇಶ್, ಸಂಜಯ್ ಸೂರಿ, ಸುಮಾ ರಾವ್, ಪ್ರಥಮ ಪ್ರಸಾದ್, ಮಧು ಹೆಗಡೆ, ದಮಯಂತಿ ನಾಗರಾಜ್ ಮುಂತಾದವರಿದ್ದಾರೆ. ರವಿರಾಜ್ ಛಾಯಾಗ್ರಹಣ, ಶಶಿಧರ್ ಸಂಕಲನ ಚಿತ್ರಕ್ಕಿದೆ.
ಇದರ ಜೊತೆಯಲ್ಲಿ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ ತಾರಾ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಭಿನ್ನರೀತಿಯಲ್ಲಿ ಪ್ರೇಮಿಗಳ ದಿನ ಆಚರಿಸಿಕೊಂಡಿತು. ಪ್ರೇಮಕತೆಗಳ ಪುಸ್ತಕವನ್ನು ಬಿಡುಗಡೆ ಮಾಡುವುದರ ಮೂಲಕ ತಮ್ಮ ಪ್ರೇಮದ ದಿನಗಳನ್ನು ಮೆಲುಕು ಹಾಕಿದ್ದಾರೆ. ಶಿವಕುಮಾರ ಮಾವಲಿಯವರ ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಕಥಾ ಸಂಕಲನವನ್ನು ಅವರಿಬ್ಬರೂ ಬಿಡುಗಡೆ ಮಾಡಿದ್ದಾರೆ. ಲೇಖಕ ಶಿವಕುಮಾರ ಮಾವಲಿ, ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವಾಲಂಟೈನ್ ದಿನಗಳ ನೆನಪು ಮಾಡಿಕೊಂಡರು.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…