ಸಾಮಾನ್ಯವಾಗಿ ಪ್ರೇಮಿಗಳ ದಿನದಂದು ಸಿನಿಮಾ ಸಂಬಂಧಪಟ್ಟ ಕಾರ್ಯಕ್ರಮಗಳು ಇದ್ದೇ ಇರುತ್ತವೆ. ಈ ಬಾರಿ ಕೂಡ ಇದ್ದವು. ಲೋಹಿತ್ ಹೆಚ್ ಅವರು ಕುಮಾರ್ ಬಿ. ಅವರಿಗಾಗಿ ನಿರ್ಮಿಸಿರುವ ‘ಮಾಫಿಯಾ’ ಚಿತ್ರದ ಭಿತ್ತಿಪತ್ರ ಬಿಡುಗಡೆ, ನಮಿತಾರಾವ್- ವಿಕ್ರಂಸೂರಿ ಜೋಡಿಯ ‘ಚೌಕಾಬಾರಾ’ ಹಾಡಿನ ಲೋಕಾರ್ಪಣೆ ಇದರಲ್ಲಿ ಸೇರಿದೆ. ‘ಮಾಫಿಯಾ’ ಪ್ರಜ್ವಲ್ ದೇವರಾಜ್ಮತ್ತು ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ ಚಿತ್ರ. ಮಾಫಿಯಾ ಅಂದರೆ ದುರುಳರ, ಅಪರಾಧಿಗಳ ಕೂಟ. ಇವರಿಗೂ ಪ್ರೇಮಿಗಳ ದಿನಕ್ಕೂ ಏನು ಸಂಬಂಧ ಎಂದು ಕೇಳುವಂತಿಲ್ಲ. ಈ ಚಿತ್ರತಂಡ ಪ್ರೇಮಿಗಳ ದಿನಕ್ಕೆ ಶುಭಕೋರಿದೆ. ‘ಮಾಫಿಯಾ’ ಚಿತ್ರಕ್ಕೆ ಎಸ್.ಪಾಂಡಿಕುಮಾರ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಇದ್ದು, ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ ಅವರೊಂದಿಗೆ ದೇವರಾಜ್, ಸಾಧು ಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.
‘ಚೌಕಾಬಾರ’ ಚಿತ್ರವನ್ನು ನಮಿತಾರಾವ್ ತಮ್ಮ ನವಿ ನಿರ್ಮಿತಿ ಲಾಂಛನದಲ್ಲಿ ನಿರ್ಮಿಸಿದರೆ, ವಿಕ್ರಮ್ ಸೂರಿ ನಿರ್ದೇಶಿಸಿದ್ದಾರೆ. ಮಣಿ ಆರ್ ರಾವ್ ಕಾದಂಬರಿ ಆಧರಿಸಿ ಈ ಚಿತ್ರ ತಯಾರಾಗಿದೆ ಎಂದಿದೆ ಚಿತ್ರತಂಡ. ಮುಂದಿನ ತಿಂಗಳು ತೆರೆಕಾಣಲಿರುವ ಈ ಚಿತ್ರ ಅಮೆರಿಕದಲ್ಲೂ ಏಕಕಾಲದಲ್ಲಿ ತೆರೆಗೆ ಬರುವ ಸಾಧ್ಯತೆ ಇದ್ದು, ಏಪ್ರಿಲ್ ನಲ್ಲಿ ದುಬೈ, ಆಸ್ಟ್ರೇಲಿಯಾ ಮುಂತಾದ ಕಡೆ ಬಿಡುಗಡೆ ಮಾಡುವ ಸಿದ್ಧತೆ ನಡೆಯುತ್ತಿದೆಯಂತೆ. ಚಿತ್ರದ ತಾರಾಗಣದಲ್ಲಿ ವಿಹಾನ್ ಪ್ರಭಂಜನ್, ಕಾವ್ಯ ರಮೇಶ್, ಸಂಜಯ್ ಸೂರಿ, ಸುಮಾ ರಾವ್, ಪ್ರಥಮ ಪ್ರಸಾದ್, ಮಧು ಹೆಗಡೆ, ದಮಯಂತಿ ನಾಗರಾಜ್ ಮುಂತಾದವರಿದ್ದಾರೆ. ರವಿರಾಜ್ ಛಾಯಾಗ್ರಹಣ, ಶಶಿಧರ್ ಸಂಕಲನ ಚಿತ್ರಕ್ಕಿದೆ.
ಇದರ ಜೊತೆಯಲ್ಲಿ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ ತಾರಾ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಭಿನ್ನರೀತಿಯಲ್ಲಿ ಪ್ರೇಮಿಗಳ ದಿನ ಆಚರಿಸಿಕೊಂಡಿತು. ಪ್ರೇಮಕತೆಗಳ ಪುಸ್ತಕವನ್ನು ಬಿಡುಗಡೆ ಮಾಡುವುದರ ಮೂಲಕ ತಮ್ಮ ಪ್ರೇಮದ ದಿನಗಳನ್ನು ಮೆಲುಕು ಹಾಕಿದ್ದಾರೆ. ಶಿವಕುಮಾರ ಮಾವಲಿಯವರ ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಕಥಾ ಸಂಕಲನವನ್ನು ಅವರಿಬ್ಬರೂ ಬಿಡುಗಡೆ ಮಾಡಿದ್ದಾರೆ. ಲೇಖಕ ಶಿವಕುಮಾರ ಮಾವಲಿ, ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವಾಲಂಟೈನ್ ದಿನಗಳ ನೆನಪು ಮಾಡಿಕೊಂಡರು.
ಬೆಂಗಳೂರು: ನಾಳೆ ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ರಾಜ್ಯ ಬಜೆಟ್ ಮಂಡನೆಯ…
ಹನೂರು: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವನ್ಯಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಕೊಳ್ಳೇಗಾಲ…
ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಈ…
ಮಂಡ್ಯ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣದ ಮಹತ್ವವನ್ನು ರೈತರಿಗೆ ಪರಿಚಯಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಮಂಡ್ಯ ವತಿಯಿಂದ “ಕೃಷಿ ಯಂತ್ರೋಪಕರಣ…
ಮಂಡ್ಯ: ಹಳೆಯ ಬೀದಿ ದೀಪಗಳನ್ನು ಎಲ್ಇಡಿ ದೀಪಗಳಾಗ ಬದಲಾಯಿಸುವುದು ಶಕ್ತಿ ಉಳಿತಾಯ, ಕಡಿಮೆ ನಿರ್ವಹಣಾ ವೆಚ್ಚ ಮತ್ತು ದೀರ್ಘಾವಧಿಯ ಬಾಳಿಕೆಗೆ…