ಆಂದೋಲನ ಪುರವಣಿ

ಸಿನಿಮಾಲ್‌ : ಪ್ರೇಮಿಗಳ ದಿನ ‘ಮಾಫಿಯಾ’ ಭಿತ್ತಿಪತ್ರ, ‘ಚೌಕಾಬಾರಾ’ ಹಾಡು, ಜೊತೆಗೊಂದು ಪುಸ್ತಕ

ಸಾಮಾನ್ಯವಾಗಿ ಪ್ರೇಮಿಗಳ ದಿನದಂದು ಸಿನಿಮಾ ಸಂಬಂಧಪಟ್ಟ ಕಾರ್ಯಕ್ರಮಗಳು ಇದ್ದೇ ಇರುತ್ತವೆ. ಈ ಬಾರಿ ಕೂಡ ಇದ್ದವು. ಲೋಹಿತ್ ಹೆಚ್ ಅವರು ಕುಮಾರ್ ಬಿ. ಅವರಿಗಾಗಿ ನಿರ್ಮಿಸಿರುವ ‘ಮಾಫಿಯಾ’ ಚಿತ್ರದ ಭಿತ್ತಿಪತ್ರ ಬಿಡುಗಡೆ, ನಮಿತಾರಾವ್- ವಿಕ್ರಂಸೂರಿ ಜೋಡಿಯ ‘ಚೌಕಾಬಾರಾ’ ಹಾಡಿನ ಲೋಕಾರ್ಪಣೆ ಇದರಲ್ಲಿ ಸೇರಿದೆ. ‘ಮಾಫಿಯಾ’ ಪ್ರಜ್ವಲ್ ದೇವರಾಜ್‌ಮತ್ತು ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ ಚಿತ್ರ. ಮಾಫಿಯಾ ಅಂದರೆ ದುರುಳರ, ಅಪರಾಧಿಗಳ ಕೂಟ. ಇವರಿಗೂ ಪ್ರೇಮಿಗಳ ದಿನಕ್ಕೂ ಏನು ಸಂಬಂಧ ಎಂದು ಕೇಳುವಂತಿಲ್ಲ. ಈ ಚಿತ್ರತಂಡ ಪ್ರೇಮಿಗಳ ದಿನಕ್ಕೆ ಶುಭಕೋರಿದೆ. ‘ಮಾಫಿಯಾ’ ಚಿತ್ರಕ್ಕೆ ಎಸ್.ಪಾಂಡಿಕುಮಾರ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಇದ್ದು, ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ ಅವರೊಂದಿಗೆ ದೇವರಾಜ್, ಸಾಧು ಕೋಕಿಲ, ಶೈನ್ ಶೆಟ್ಟಿ, ವಿಜಯ್‌ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.
‘ಚೌಕಾಬಾರ’ ಚಿತ್ರವನ್ನು ನಮಿತಾರಾವ್ ತಮ್ಮ ನವಿ ನಿರ್ಮಿತಿ ಲಾಂಛನದಲ್ಲಿ ನಿರ್ಮಿಸಿದರೆ, ವಿಕ್ರಮ್ ಸೂರಿ ನಿರ್ದೇಶಿಸಿದ್ದಾರೆ. ಮಣಿ ಆರ್ ರಾವ್ ಕಾದಂಬರಿ ಆಧರಿಸಿ ಈ ಚಿತ್ರ ತಯಾರಾಗಿದೆ ಎಂದಿದೆ ಚಿತ್ರತಂಡ. ಮುಂದಿನ ತಿಂಗಳು ತೆರೆಕಾಣಲಿರುವ ಈ ಚಿತ್ರ ಅಮೆರಿಕದಲ್ಲೂ ಏಕಕಾಲದಲ್ಲಿ ತೆರೆಗೆ ಬರುವ ಸಾಧ್ಯತೆ ಇದ್ದು, ಏಪ್ರಿಲ್ ನಲ್ಲಿ ದುಬೈ, ಆಸ್ಟ್ರೇಲಿಯಾ ಮುಂತಾದ ಕಡೆ ಬಿಡುಗಡೆ ಮಾಡುವ ಸಿದ್ಧತೆ ನಡೆಯುತ್ತಿದೆಯಂತೆ. ಚಿತ್ರದ ತಾರಾಗಣದಲ್ಲಿ ವಿಹಾನ್ ಪ್ರಭಂಜನ್, ಕಾವ್ಯ ರಮೇಶ್, ಸಂಜಯ್‌ ಸೂರಿ, ಸುಮಾ ರಾವ್, ಪ್ರಥಮ ಪ್ರಸಾದ್, ಮಧು ಹೆಗಡೆ, ದಮಯಂತಿ ನಾಗರಾಜ್ ಮುಂತಾದವರಿದ್ದಾರೆ. ರವಿರಾಜ್ ಛಾಯಾಗ್ರಹಣ, ಶಶಿಧರ್ ಸಂಕಲನ ಚಿತ್ರಕ್ಕಿದೆ.
ಇದರ ಜೊತೆಯಲ್ಲಿ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ ತಾರಾ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಭಿನ್ನರೀತಿಯಲ್ಲಿ ಪ್ರೇಮಿಗಳ ದಿನ ಆಚರಿಸಿಕೊಂಡಿತು. ಪ್ರೇಮಕತೆಗಳ ಪುಸ್ತಕವನ್ನು ಬಿಡುಗಡೆ ಮಾಡುವುದರ ಮೂಲಕ ತಮ್ಮ ಪ್ರೇಮದ ದಿನಗಳನ್ನು ಮೆಲುಕು ಹಾಕಿದ್ದಾರೆ. ಶಿವಕುಮಾರ ಮಾವಲಿಯವರ ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಕಥಾ ಸಂಕಲನವನ್ನು ಅವರಿಬ್ಬರೂ ಬಿಡುಗಡೆ ಮಾಡಿದ್ದಾರೆ. ಲೇಖಕ ಶಿವಕುಮಾರ ಮಾವಲಿ, ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವಾಲಂಟೈನ್ ದಿನಗಳ ನೆನಪು ಮಾಡಿಕೊಂಡರು.

andolanait

Recent Posts

ಓದುಗರ ಪತ್ರ: ಕಾವೇ..ರಿ

ಕಾವೇ..ರಿ ಕನ್ನಡ ನಾಡಿನ ಜೀವನದಿ, ಸದಾ ಹರಿಯುವಳು ಜುಳು ಜುಳು ಕಾವೇರಿ ತಮಿಳು ನಾಡಿನ ತಗಾದೆಯಿಂದಾಗಿ ಆಗಾಗ ಆಗುವಳು ಕಾವೇ..ರಿ…

5 hours ago

ಓದುಗರ ಪತ್ರ: ಸಿಜೆಪಿ ಯಾವುದೇ ಪಕ್ಷದ ಬಾಲಂಗೋಚಿಯಾಗದಿರಲಿ

ಪರೀಕ್ಷೆಗಳ ಅಕ್ರಮ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟುಹಿಡಿದು ಕಾಕ್ರೋಚ್ ಜನತಾ ಪಕ್ಷ ನಡೆಸಿದ ಚಳವಳಿ ತನ್ನ…

5 hours ago

ಓದುಗರ ಪತ್ರ: ದಸರೆಯಲ್ಲಿ ಕಂಬಳದ ವ್ಯಾಮೋಹವೇಕೇ?

ವಿಶ್ವವಿಖ್ಯಾತ ಮೈಸೂರು ದಸರೆಗೆ ತನ್ನದೇ ಆದ ಇತಿಹಾಸವಿದೆ. ಇತ್ತೀಚಿನ ವರ್ಷಗಳಲ್ಲಿ ಸಮುದಾಯಗಳಿಗೆ ಅನುಕೂಲವಾಗುವಂತಹ ಇಲ್ಲವೆ ಸ್ಪೂರ್ತಿ ನೀಡುವಂತಹ ಕಾರ್ಯಕ್ರಮಗಳು ಸೇರ್ಪಡೆಯಾಗುತ್ತಿವೆ.…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗದ ಕಾಯಕಲ್ಪವೂ, ಅವರಿವರ ಭಾವವೂ

ಎಲ್ಲ ಕಡೆ ಈಗ ಕನ್ನಡ ಚಿತ್ರರಂಗವನ್ನು ಉಳಿಸುವ ಚರ್ಚೆಗಳು. ಏಕಪರದೆಯ ಚಿತ್ರಮಂದಿರಗಳು ಮುಚ್ಚದ ಹಾಗೆ ಮಾಡಲು ಏನು ಮಾಡಬೇಕು, ಜನರನ್ನು…

5 hours ago

ಮಳೆಗಾಲದ ಸಾಂಕ್ರಾಮಿಕ ರೋಗಗಳ ಆತಂಕ

ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ೨೯ ಡೆಂಗ್ಯು ಪ್ರಕರಣಗಳು ದೃಢ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ   ಮಡಿಕೇರಿ:…

5 hours ago