ಆಂದೋಲನ ಪುರವಣಿ

ಸಿನಿಮಾಲ್‌ : ಪ್ರೇಮಿಗಳ ದಿನ ‘ಮಾಫಿಯಾ’ ಭಿತ್ತಿಪತ್ರ, ‘ಚೌಕಾಬಾರಾ’ ಹಾಡು, ಜೊತೆಗೊಂದು ಪುಸ್ತಕ

ಸಾಮಾನ್ಯವಾಗಿ ಪ್ರೇಮಿಗಳ ದಿನದಂದು ಸಿನಿಮಾ ಸಂಬಂಧಪಟ್ಟ ಕಾರ್ಯಕ್ರಮಗಳು ಇದ್ದೇ ಇರುತ್ತವೆ. ಈ ಬಾರಿ ಕೂಡ ಇದ್ದವು. ಲೋಹಿತ್ ಹೆಚ್ ಅವರು ಕುಮಾರ್ ಬಿ. ಅವರಿಗಾಗಿ ನಿರ್ಮಿಸಿರುವ ‘ಮಾಫಿಯಾ’ ಚಿತ್ರದ ಭಿತ್ತಿಪತ್ರ ಬಿಡುಗಡೆ, ನಮಿತಾರಾವ್- ವಿಕ್ರಂಸೂರಿ ಜೋಡಿಯ ‘ಚೌಕಾಬಾರಾ’ ಹಾಡಿನ ಲೋಕಾರ್ಪಣೆ ಇದರಲ್ಲಿ ಸೇರಿದೆ. ‘ಮಾಫಿಯಾ’ ಪ್ರಜ್ವಲ್ ದೇವರಾಜ್‌ಮತ್ತು ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ ಚಿತ್ರ. ಮಾಫಿಯಾ ಅಂದರೆ ದುರುಳರ, ಅಪರಾಧಿಗಳ ಕೂಟ. ಇವರಿಗೂ ಪ್ರೇಮಿಗಳ ದಿನಕ್ಕೂ ಏನು ಸಂಬಂಧ ಎಂದು ಕೇಳುವಂತಿಲ್ಲ. ಈ ಚಿತ್ರತಂಡ ಪ್ರೇಮಿಗಳ ದಿನಕ್ಕೆ ಶುಭಕೋರಿದೆ. ‘ಮಾಫಿಯಾ’ ಚಿತ್ರಕ್ಕೆ ಎಸ್.ಪಾಂಡಿಕುಮಾರ್ ಛಾಯಾಗ್ರಹಣ, ಅನೂಪ್ ಸೀಳಿನ್ ಸಂಗೀತ ಸಂಯೋಜನೆ ಇದ್ದು, ತಾರಾಬಳಗದಲ್ಲಿ ಪ್ರಜ್ವಲ್ ದೇವರಾಜ್, ಅದಿತಿ ಪ್ರಭುದೇವ ಅವರೊಂದಿಗೆ ದೇವರಾಜ್, ಸಾಧು ಕೋಕಿಲ, ಶೈನ್ ಶೆಟ್ಟಿ, ವಿಜಯ್‌ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ.
‘ಚೌಕಾಬಾರ’ ಚಿತ್ರವನ್ನು ನಮಿತಾರಾವ್ ತಮ್ಮ ನವಿ ನಿರ್ಮಿತಿ ಲಾಂಛನದಲ್ಲಿ ನಿರ್ಮಿಸಿದರೆ, ವಿಕ್ರಮ್ ಸೂರಿ ನಿರ್ದೇಶಿಸಿದ್ದಾರೆ. ಮಣಿ ಆರ್ ರಾವ್ ಕಾದಂಬರಿ ಆಧರಿಸಿ ಈ ಚಿತ್ರ ತಯಾರಾಗಿದೆ ಎಂದಿದೆ ಚಿತ್ರತಂಡ. ಮುಂದಿನ ತಿಂಗಳು ತೆರೆಕಾಣಲಿರುವ ಈ ಚಿತ್ರ ಅಮೆರಿಕದಲ್ಲೂ ಏಕಕಾಲದಲ್ಲಿ ತೆರೆಗೆ ಬರುವ ಸಾಧ್ಯತೆ ಇದ್ದು, ಏಪ್ರಿಲ್ ನಲ್ಲಿ ದುಬೈ, ಆಸ್ಟ್ರೇಲಿಯಾ ಮುಂತಾದ ಕಡೆ ಬಿಡುಗಡೆ ಮಾಡುವ ಸಿದ್ಧತೆ ನಡೆಯುತ್ತಿದೆಯಂತೆ. ಚಿತ್ರದ ತಾರಾಗಣದಲ್ಲಿ ವಿಹಾನ್ ಪ್ರಭಂಜನ್, ಕಾವ್ಯ ರಮೇಶ್, ಸಂಜಯ್‌ ಸೂರಿ, ಸುಮಾ ರಾವ್, ಪ್ರಥಮ ಪ್ರಸಾದ್, ಮಧು ಹೆಗಡೆ, ದಮಯಂತಿ ನಾಗರಾಜ್ ಮುಂತಾದವರಿದ್ದಾರೆ. ರವಿರಾಜ್ ಛಾಯಾಗ್ರಹಣ, ಶಶಿಧರ್ ಸಂಕಲನ ಚಿತ್ರಕ್ಕಿದೆ.
ಇದರ ಜೊತೆಯಲ್ಲಿ ಇತ್ತೀಚೆಗೆ ದಾಂಪತ್ಯ ಜೀವನಕ್ಕೆ ಕಾಲಿಟ ತಾರಾ ಜೋಡಿ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಭಿನ್ನರೀತಿಯಲ್ಲಿ ಪ್ರೇಮಿಗಳ ದಿನ ಆಚರಿಸಿಕೊಂಡಿತು. ಪ್ರೇಮಕತೆಗಳ ಪುಸ್ತಕವನ್ನು ಬಿಡುಗಡೆ ಮಾಡುವುದರ ಮೂಲಕ ತಮ್ಮ ಪ್ರೇಮದ ದಿನಗಳನ್ನು ಮೆಲುಕು ಹಾಕಿದ್ದಾರೆ. ಶಿವಕುಮಾರ ಮಾವಲಿಯವರ ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಕಥಾ ಸಂಕಲನವನ್ನು ಅವರಿಬ್ಬರೂ ಬಿಡುಗಡೆ ಮಾಡಿದ್ದಾರೆ. ಲೇಖಕ ಶಿವಕುಮಾರ ಮಾವಲಿ, ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವಾಲಂಟೈನ್ ದಿನಗಳ ನೆನಪು ಮಾಡಿಕೊಂಡರು.

andolanait

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

16 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

19 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

21 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

21 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

21 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

21 hours ago