ಆಂದೋಲನ ಪುರವಣಿ

ಸಿನಿಮಾಲ್‌ : ವೇದ 50 ದಿನದ ಆನಂದ

ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದ’. ಈ ಚಿತ್ರವನ್ನು ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದು, ಹರ್ಷ ನಿರ್ದೇಶಿಸಿದ್ದಾರೆ. ಚಿತ್ರ ತೆರೆಕಂಡು ಯಶಸ್ವಿಯಾಗಿ ಐವತ್ತು ದಿನಗಳನ್ನು ಪೂರೈಸಿದ ಸಂಭ್ರಮವನ್ನು ನಿರ್ಮಾಪಕಿ ಗೀತಾ ಅವರು ತಮ್ಮಮನೆಯಲ್ಲಿ ಆಚರಿಸಿಕೊಂಡರು. ‘ವೇದ’ ಚಿತ್ರದ ಸಂಭ್ರಮದ ಜೊತೆಗೆ, ಶಿವರಾಜಕುಮಾರ್ ಚಿತ್ರರಂಗಕ್ಕೆ ಕಾಲಿಟ್ಟು 37 ವರ್ಷಗಳನ್ನುಪೂರೈಸಿದ ಸಡಗರವೂ ಸೇರಿಕೊಂಡಿತ್ತು. ಶಿವಣ್ಣ ಅವರ ‘ವೇದ’ ಚಿತ್ರ ಹೆಣ್ಣುಮಕ್ಕಳನ್ನು ಗೌರವಿಸಬೇಕು ಎನ್ನುವ ಸಂದೇಶವಿದ್ದು, ಆದಿತಿ ಸಾಗರ್, ಗಾನವಿ ಲಕ್ಷ್ಮಣ್‌, ಶ್ವೇತಾ ಚೆಂಗಪ್ಪ, ವೀಣಾ ಪೊನ್ನಪ್ಪ, ಉಮಾಶ್ರೀ ಮುಖ್ಯಪಾತ್ರಗಳಲ್ಲಿದ್ದರು. ಚಿತ್ರತಂಡಕ್ಕೆ 50 ದಿನ ಪೂರೈಸಿದ ನೆನಪಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. 1986ರಲ್ಲಿ ತೆರೆಕಂಡ ಶಿವರಾಜಕುಮಾರ್ ಅಭಿನಯದ ಮೊದಲ ಚಿತ್ರ ‘ಆನಂದ್’, ಅವರ ಅಮ್ಮ ಪಾರ್ವತಮ್ಮ ರಾಜಕುಮಾರ್ ನಿರ್ಮಾಣದ ಚಿತ್ರವಾದರೆ, 125ನೇಚಿತ್ರದ ನಿರ್ಮಾಪಕಿ ಪತ್ನಿ ಗೀತಾ ಶಿವರಾಜಕುಮಾರ್. ಇದನ್ನು ಸ್ವತಃ ಶಿವರಾಜಕುಮಾರ್ ನೆನಪಿಸಿಕೊಂಡು, ತಮ್ಮಅಭಿನಯ ಜೀವನಯಾನದಲ್ಲಿ ನೆರವಾದ ಎಲ್ಲರನ್ನೂ ಸ್ಮರಿಸಿಕೊಂಡರು. ಶಿವರಾಜಕುಮಾರ್ ಅಭಿನಯದ ನೂರನೇ ಚಿತ್ರದ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಸಿ, ಅವರ ಚಿತ್ರಗಳಲ್ಲಿ ಕೆಲಸ ಮಾಡಿದ ಸಹಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ಪ್ರದರ್ಶಕರು, ವಿತರಕರು… ಹೀಗೆ ಎಲ್ಲರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು ಗೀತಾ ಶಿವರಾಜಕುಮಾರ್. 125ನೇ ಚಿತ್ರದ 50ನೇ ದಿನ ಸಮಾರಂಭವನ್ನು ತಮ್ಮ ಮನೆಯಲ್ಲಿ ಏರ್ಪಡಿಸಿದ್ದರು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

4 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago