ಆಂದೋಲನ ಪುರವಣಿ

ಸಿನಿಮಾಲ್‌ : ವೇದ 50 ದಿನದ ಆನಂದ

ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದ’. ಈ ಚಿತ್ರವನ್ನು ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದು, ಹರ್ಷ ನಿರ್ದೇಶಿಸಿದ್ದಾರೆ. ಚಿತ್ರ ತೆರೆಕಂಡು ಯಶಸ್ವಿಯಾಗಿ ಐವತ್ತು ದಿನಗಳನ್ನು ಪೂರೈಸಿದ ಸಂಭ್ರಮವನ್ನು ನಿರ್ಮಾಪಕಿ ಗೀತಾ ಅವರು ತಮ್ಮಮನೆಯಲ್ಲಿ ಆಚರಿಸಿಕೊಂಡರು. ‘ವೇದ’ ಚಿತ್ರದ ಸಂಭ್ರಮದ ಜೊತೆಗೆ, ಶಿವರಾಜಕುಮಾರ್ ಚಿತ್ರರಂಗಕ್ಕೆ ಕಾಲಿಟ್ಟು 37 ವರ್ಷಗಳನ್ನುಪೂರೈಸಿದ ಸಡಗರವೂ ಸೇರಿಕೊಂಡಿತ್ತು. ಶಿವಣ್ಣ ಅವರ ‘ವೇದ’ ಚಿತ್ರ ಹೆಣ್ಣುಮಕ್ಕಳನ್ನು ಗೌರವಿಸಬೇಕು ಎನ್ನುವ ಸಂದೇಶವಿದ್ದು, ಆದಿತಿ ಸಾಗರ್, ಗಾನವಿ ಲಕ್ಷ್ಮಣ್‌, ಶ್ವೇತಾ ಚೆಂಗಪ್ಪ, ವೀಣಾ ಪೊನ್ನಪ್ಪ, ಉಮಾಶ್ರೀ ಮುಖ್ಯಪಾತ್ರಗಳಲ್ಲಿದ್ದರು. ಚಿತ್ರತಂಡಕ್ಕೆ 50 ದಿನ ಪೂರೈಸಿದ ನೆನಪಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. 1986ರಲ್ಲಿ ತೆರೆಕಂಡ ಶಿವರಾಜಕುಮಾರ್ ಅಭಿನಯದ ಮೊದಲ ಚಿತ್ರ ‘ಆನಂದ್’, ಅವರ ಅಮ್ಮ ಪಾರ್ವತಮ್ಮ ರಾಜಕುಮಾರ್ ನಿರ್ಮಾಣದ ಚಿತ್ರವಾದರೆ, 125ನೇಚಿತ್ರದ ನಿರ್ಮಾಪಕಿ ಪತ್ನಿ ಗೀತಾ ಶಿವರಾಜಕುಮಾರ್. ಇದನ್ನು ಸ್ವತಃ ಶಿವರಾಜಕುಮಾರ್ ನೆನಪಿಸಿಕೊಂಡು, ತಮ್ಮಅಭಿನಯ ಜೀವನಯಾನದಲ್ಲಿ ನೆರವಾದ ಎಲ್ಲರನ್ನೂ ಸ್ಮರಿಸಿಕೊಂಡರು. ಶಿವರಾಜಕುಮಾರ್ ಅಭಿನಯದ ನೂರನೇ ಚಿತ್ರದ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಸಿ, ಅವರ ಚಿತ್ರಗಳಲ್ಲಿ ಕೆಲಸ ಮಾಡಿದ ಸಹಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ಪ್ರದರ್ಶಕರು, ವಿತರಕರು… ಹೀಗೆ ಎಲ್ಲರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು ಗೀತಾ ಶಿವರಾಜಕುಮಾರ್. 125ನೇ ಚಿತ್ರದ 50ನೇ ದಿನ ಸಮಾರಂಭವನ್ನು ತಮ್ಮ ಮನೆಯಲ್ಲಿ ಏರ್ಪಡಿಸಿದ್ದರು.

andolanait

Recent Posts

ವಾಯುಪಡೆ ಅರಣ್ಯಭೂಮಿ ಮರುವಶಕ್ಕೆ ಪ್ರಕ್ರಿಯೆ : ಈಶ್ವರ ಖಂಡ್ರೆ

ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…

43 mins ago

ಪೆಟ್ರೋಲ್‌,ಡೀಸೆಲ್‌ ಬೆಲೆ ಏರಿಕೆ ಆತಂಕದ ನಡುವೆ ಗುಡ್‌ ನ್ಯೂಸ್‌ ನೀಡಿದ ಕೇಂದ್ರ

ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…

1 hour ago

ಇರಾನ್‌ ಮೇಲಿನ ದಾಳಿಗೆ ಮತ್ತೆ 10 ದಿನ ಗಡುವು ವಿಸ್ತರಿಸಿದ ಟ್ರಂಪ್!‌

ವಾಷಿಂಗ್ಟನ್‌ : ಇರಾನ್‌ ಕೋರಿಕೆಯ ಮೇರೆಗೆ ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು 10 ದಿನ ಮುಂದೂಡಿದ್ದೇವೆ ಎಂದು ಅಮೆರಿಕ ಅಧ್ಯಕ್ಷ…

2 hours ago

IPL 2ನೇ ಹಂತದ ವೇಳಾಪಟ್ಟಿ ಬಿಡುಗಡೆ

ಮುಂಬೈ : ಬಿಸಿಸಿಐ ಮಾರ್ಚ್ 26ರ ಗುರುವಾರದಂದು ಬಹುನಿರೀಕ್ಷಿತ 19 ನೇ ಸೀಸನ್ ಐಪಿಎಲ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು ಪ್ರಕಟಿಸಿದೆ.…

2 hours ago

ಮೈಸೂರು ವಿಶ್ವವಿದ್ಯಾಲಯ : 53.76 ಕೋಟಿ ರೂ. ವಿತ್ತೀಯ ಕೊರತೆ ಬಜೆಟ್

ಮೈಸೂರು ವಿವಿಯಲ್ಲಿ ಆರ್ಥಿಕ ಶಿಸ್ತು ಇಲ್ಲ ; ಕೋವಿಡ್ ನಂತರದಲ್ಲಿ ಅನುದಾನದ ಕೊರತೆ : ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮೈಸೂರು :…

2 hours ago

ಓದುಗರ ಪತ್ರ: ವಿ…ರಾಮ ..!

ದೇಶದ ತುಂಬಾ ಇಂದು ಭಕ್ತ ಗಣ ಮಾಡುತ್ತಿದೆ ಜಪ ರಾಮ ರಾಮ... ಆ ಟ್ರಂಪಣ್ಣನೂ ಜಪಿಸುತ್ತಿದ್ದಾರಂತೆ ಯಾವಾಗ ಘೋಷಿಸುತ್ತದೆಯೋ ಇರಾನ್,…

7 hours ago