ಆಂದೋಲನ ಪುರವಣಿ

ಸಿನಿಮಾಲ್‌ : ವೇದ 50 ದಿನದ ಆನಂದ

ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದ’. ಈ ಚಿತ್ರವನ್ನು ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದು, ಹರ್ಷ ನಿರ್ದೇಶಿಸಿದ್ದಾರೆ. ಚಿತ್ರ ತೆರೆಕಂಡು ಯಶಸ್ವಿಯಾಗಿ ಐವತ್ತು ದಿನಗಳನ್ನು ಪೂರೈಸಿದ ಸಂಭ್ರಮವನ್ನು ನಿರ್ಮಾಪಕಿ ಗೀತಾ ಅವರು ತಮ್ಮಮನೆಯಲ್ಲಿ ಆಚರಿಸಿಕೊಂಡರು. ‘ವೇದ’ ಚಿತ್ರದ ಸಂಭ್ರಮದ ಜೊತೆಗೆ, ಶಿವರಾಜಕುಮಾರ್ ಚಿತ್ರರಂಗಕ್ಕೆ ಕಾಲಿಟ್ಟು 37 ವರ್ಷಗಳನ್ನುಪೂರೈಸಿದ ಸಡಗರವೂ ಸೇರಿಕೊಂಡಿತ್ತು. ಶಿವಣ್ಣ ಅವರ ‘ವೇದ’ ಚಿತ್ರ ಹೆಣ್ಣುಮಕ್ಕಳನ್ನು ಗೌರವಿಸಬೇಕು ಎನ್ನುವ ಸಂದೇಶವಿದ್ದು, ಆದಿತಿ ಸಾಗರ್, ಗಾನವಿ ಲಕ್ಷ್ಮಣ್‌, ಶ್ವೇತಾ ಚೆಂಗಪ್ಪ, ವೀಣಾ ಪೊನ್ನಪ್ಪ, ಉಮಾಶ್ರೀ ಮುಖ್ಯಪಾತ್ರಗಳಲ್ಲಿದ್ದರು. ಚಿತ್ರತಂಡಕ್ಕೆ 50 ದಿನ ಪೂರೈಸಿದ ನೆನಪಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. 1986ರಲ್ಲಿ ತೆರೆಕಂಡ ಶಿವರಾಜಕುಮಾರ್ ಅಭಿನಯದ ಮೊದಲ ಚಿತ್ರ ‘ಆನಂದ್’, ಅವರ ಅಮ್ಮ ಪಾರ್ವತಮ್ಮ ರಾಜಕುಮಾರ್ ನಿರ್ಮಾಣದ ಚಿತ್ರವಾದರೆ, 125ನೇಚಿತ್ರದ ನಿರ್ಮಾಪಕಿ ಪತ್ನಿ ಗೀತಾ ಶಿವರಾಜಕುಮಾರ್. ಇದನ್ನು ಸ್ವತಃ ಶಿವರಾಜಕುಮಾರ್ ನೆನಪಿಸಿಕೊಂಡು, ತಮ್ಮಅಭಿನಯ ಜೀವನಯಾನದಲ್ಲಿ ನೆರವಾದ ಎಲ್ಲರನ್ನೂ ಸ್ಮರಿಸಿಕೊಂಡರು. ಶಿವರಾಜಕುಮಾರ್ ಅಭಿನಯದ ನೂರನೇ ಚಿತ್ರದ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಸಿ, ಅವರ ಚಿತ್ರಗಳಲ್ಲಿ ಕೆಲಸ ಮಾಡಿದ ಸಹಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ಪ್ರದರ್ಶಕರು, ವಿತರಕರು… ಹೀಗೆ ಎಲ್ಲರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು ಗೀತಾ ಶಿವರಾಜಕುಮಾರ್. 125ನೇ ಚಿತ್ರದ 50ನೇ ದಿನ ಸಮಾರಂಭವನ್ನು ತಮ್ಮ ಮನೆಯಲ್ಲಿ ಏರ್ಪಡಿಸಿದ್ದರು.

andolanait

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

3 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

3 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

3 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

12 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

13 hours ago