ಆಂದೋಲನ ಪುರವಣಿ

ಸಿನಿಮಾಲ್‌ : ವೇದ 50 ದಿನದ ಆನಂದ

ಶಿವರಾಜಕುಮಾರ್ ಅಭಿನಯದ 125ನೇ ಚಿತ್ರ ‘ವೇದ’. ಈ ಚಿತ್ರವನ್ನು ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದು, ಹರ್ಷ ನಿರ್ದೇಶಿಸಿದ್ದಾರೆ. ಚಿತ್ರ ತೆರೆಕಂಡು ಯಶಸ್ವಿಯಾಗಿ ಐವತ್ತು ದಿನಗಳನ್ನು ಪೂರೈಸಿದ ಸಂಭ್ರಮವನ್ನು ನಿರ್ಮಾಪಕಿ ಗೀತಾ ಅವರು ತಮ್ಮಮನೆಯಲ್ಲಿ ಆಚರಿಸಿಕೊಂಡರು. ‘ವೇದ’ ಚಿತ್ರದ ಸಂಭ್ರಮದ ಜೊತೆಗೆ, ಶಿವರಾಜಕುಮಾರ್ ಚಿತ್ರರಂಗಕ್ಕೆ ಕಾಲಿಟ್ಟು 37 ವರ್ಷಗಳನ್ನುಪೂರೈಸಿದ ಸಡಗರವೂ ಸೇರಿಕೊಂಡಿತ್ತು. ಶಿವಣ್ಣ ಅವರ ‘ವೇದ’ ಚಿತ್ರ ಹೆಣ್ಣುಮಕ್ಕಳನ್ನು ಗೌರವಿಸಬೇಕು ಎನ್ನುವ ಸಂದೇಶವಿದ್ದು, ಆದಿತಿ ಸಾಗರ್, ಗಾನವಿ ಲಕ್ಷ್ಮಣ್‌, ಶ್ವೇತಾ ಚೆಂಗಪ್ಪ, ವೀಣಾ ಪೊನ್ನಪ್ಪ, ಉಮಾಶ್ರೀ ಮುಖ್ಯಪಾತ್ರಗಳಲ್ಲಿದ್ದರು. ಚಿತ್ರತಂಡಕ್ಕೆ 50 ದಿನ ಪೂರೈಸಿದ ನೆನಪಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು. 1986ರಲ್ಲಿ ತೆರೆಕಂಡ ಶಿವರಾಜಕುಮಾರ್ ಅಭಿನಯದ ಮೊದಲ ಚಿತ್ರ ‘ಆನಂದ್’, ಅವರ ಅಮ್ಮ ಪಾರ್ವತಮ್ಮ ರಾಜಕುಮಾರ್ ನಿರ್ಮಾಣದ ಚಿತ್ರವಾದರೆ, 125ನೇಚಿತ್ರದ ನಿರ್ಮಾಪಕಿ ಪತ್ನಿ ಗೀತಾ ಶಿವರಾಜಕುಮಾರ್. ಇದನ್ನು ಸ್ವತಃ ಶಿವರಾಜಕುಮಾರ್ ನೆನಪಿಸಿಕೊಂಡು, ತಮ್ಮಅಭಿನಯ ಜೀವನಯಾನದಲ್ಲಿ ನೆರವಾದ ಎಲ್ಲರನ್ನೂ ಸ್ಮರಿಸಿಕೊಂಡರು. ಶಿವರಾಜಕುಮಾರ್ ಅಭಿನಯದ ನೂರನೇ ಚಿತ್ರದ ಸಂದರ್ಭದಲ್ಲಿ ಅರಮನೆ ಆವರಣದಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಸಿ, ಅವರ ಚಿತ್ರಗಳಲ್ಲಿ ಕೆಲಸ ಮಾಡಿದ ಸಹಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ಪ್ರದರ್ಶಕರು, ವಿತರಕರು… ಹೀಗೆ ಎಲ್ಲರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು ಗೀತಾ ಶಿವರಾಜಕುಮಾರ್. 125ನೇ ಚಿತ್ರದ 50ನೇ ದಿನ ಸಮಾರಂಭವನ್ನು ತಮ್ಮ ಮನೆಯಲ್ಲಿ ಏರ್ಪಡಿಸಿದ್ದರು.

andolanait

Recent Posts

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

1 hour ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

1 hour ago

ಓದುಗರ ಪತ್ರ: ತಮಿಳುನಾಡು ಮುಖ್ಯಮಂತ್ರಿ ನಡೆ ಶ್ಲಾಘನೀಯ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಚಿತ್ರನಟ ಜೋಸೆಫ್ ವಿಜಯ್ ಅವರು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಒಂದೇ ರಸ್ತೆಯಲ್ಲಿ…

1 hour ago

ಪ್ರಾಕೃತಿಕ ವಿಕೋಪ ಎದುರಿಸಲು ಪೊಲೀಸ್ ಇಲಾಖೆ ಸಜ್ಜು

ನವೀನ್ ಡಿಸೋಜ ವಿಪತ್ತು ರಕ್ಷಣಾ ಕಾರ್ಯಾಚರಣೆಯ ಅಣಕು ಪ್ರದರ್ಶನ; ಸಂತ್ರಸ್ತರನ್ನು ರಕ್ಷಿಸುವ ವಿಧಾನ, ದೋಣಿ ಮೋಟಾರ್‌ಗಳನ್ನು ಚಾಲನೆ ಮಾಡುವ ಬಗ್ಗೆ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಬಾಪೂಜಿ ಮತ್ತು ವಾಜಪೇಯಿ ದಾರಿ ಬೇರೆಯಾಗಿದ್ದರೂ ನೈತಿಕತೆಗೆ ಮಾದರಿಯಾಗಿದ್ದರು ರಾಜೀವ ಹೆಗಡೆ ಗಾಂಧೀಜಿ ಕ್ವಿಟ್ ಇಂಡಿಯಾ ಚಳವಳಿ ಆರಂಭಿ ಸಿದಾಗ…

4 hours ago

ಗಾಂಧಿ ಅಭಿಯಾನ ಅರಿವಿನ ಯಾನ

ಸುಧಾರಣೆ ನೆಪದಲ್ಲಿ ಎಚ್ಚರ ತಪ್ಪಿದೆ.  ಪ್ರೌಢಶಾಲೆಯಲ್ಲಿ ನನಗೆ ಆಪ್ತ ಸ್ನೇಹಿತರು ಬಹಳ ಕಡಿಮೆಯಿದ್ದರು. ಅಲ್ಲಿ ಬೇರೆ ಬೇರೆ ಕಾಲದಲ್ಲಿ ನನಗೆ…

4 hours ago