ರಾಜಕುಮಾರ್ ಮೊಮ್ಮಗ, ಪೂರ್ಣಿಮಾ -ರಾಮಕುಮಾರ್ ಮಗ ಧೀರೇನ್ ರಾಮಕುಮಾರ್ ಅಭಿನಯದ ಚೊಚ್ಚಲ ಚಿತ್ರ ಶಿವ ೧೪೩’, ತೆರೆಗೆ ಬರುವ ಮೊದಲೇ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡ, ರಾಷ್ಟ್ರೀಯ ಪ್ರಶಸ್ತಿ ಪಡೆದ ?ಡೊಳ್ಳು’, ಚಾಣಾಕ್ಷ ಎಂಜಿನಿಯರ್ ಒಬ್ಬನ ಕಥಾನಕ ಎನ್ನಲಾದ ?ಕೌಟಿಲ್ಯ’ ಮತ್ತು ಡಿಜಿಟಲ್ ಲೋಕದಲ್ಲಿ ಚಿರಪರಿಚಿತ ಶಬ್ದವೇ ಶೀರ್ಷಿಕೆಯಾದ ?ವಿಕಿಪೀಡಿಯ’ ಈ ವಾರ ತೆರೆಗೆ ಬರುತ್ತಿರುವ ನಾಲ್ಕು ಚಿತ್ರಗಳು.
ರಾಜ್ಕುಮಾರ್ ಅವರ ಮೊಮ್ಮಗ, ರಾಮ್ಕುಮಾರ್ ಮಗ ಧೀರನ್ ರಾಮ್ಕುಮಾರ್ ನಾಯಕನಾಗಿ ಎಂಟ್ರಿ ಕೊಡುತ್ತಿರುವ ಚಿತ್ರ ‘ಶಿವ ೧೪೩’. ಅನಿಲ್ ಕುಮಾರ್ ಆಕ್ಷನ್ ಕಟ್ ಹೇಳಿರುವ ಚಿತ್ರಕ್ಕೆ ಜಯಣ್ಣ ಫಿಲಂಸ್ ಬಂಡವಾಳ ಹೂಡಿದೆ. ಮಾನ್ವಿತಾ ಕಾಮತ್ ನಾಯಕಿಯಾಗಿರುವ ಚಿತ್ರದಲ್ಲಿ ಚಿಕ್ಕಣ್ಣ, ಪುನೀತ್ ರುದ್ರನಾಗ್, ಸಾಧುಕೋಕಿಲ ಇದ್ದಾರೆ. ಅರ್ಜುನ್ ಜನ್ಯ ಸಂಗೀತ, ಶಿವ ಬಿ.ಕೆ.ಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ.
ಸಿನಿಮೋತ್ಸವಗಳಲ್ಲಿ ಪ್ರದರ್ಶನ ಕಂಡು ಮೆಚ್ಚುಗೆ ಗಳಿಸಿರುವ ಚಿತ್ರ ‘ಡೊಳ್ಳು’. ಒಡೆಯರ್ ಮೂವೀಸ್ ಬ್ಯಾನರ್ನಡಿ ಅಪೇಕ್ಷಾ, ಪವನ್ ಒಡೆಯರ್ ದಂಪತಿ ನಿರ್ಮಿಸಿರುವ ಚಿತ್ರವಿದು. ಸಾಗರ್ ಪುರಾಣಿಕ್ ನಿರ್ದೇಶನ, ಶ್ರೀನಿಧಿ ಡಿ.ಎಸ್. ಚಿತ್ರಕಥೆ, ಅನಂತ ಕಾಮತ್ ಎಂ. ಸಂಗೀತ ಸಂೋಂಜನೆ ಚಿತ್ರಕ್ಕಿದೆ. ಕಾರ್ತಿಕ್ ಮಹೇಶ್, ನಿಧಿ ಹೆಗ್ಡೆ, ಬಾಬು ಹಿರಣ್ಣಯ್ಯ, ಚಂದ್ರ ಮಯೂರ್, ಶರಣ್ಯ ಸುರೇಶ್ ಸೇರಿ ಹಲವರ ತಾರಾ ಬಳಗವಿದೆ.
ಪ್ರಭಾಕರ್ ಶೇರಖಾನೆ ನಿರ್ದೇಶನದ ಚಿತ್ರ ‘ಕೌಟಿಲ್ಯ’. ಇದಕ್ಕೆ ಬಂಡವಾಳ ಹೂಡಿರುವುದು ಬಿ.ಎ. ವಿಜೇಂದ್ರ ಮತ್ತು ಸುರೇಖಾ. ‘ಬಿಗ್ ಬಾಸ್’ ನಲ್ಲಿ ಪಾಲ್ಗೊಂಡ ಅರ್ಜುನ್ ರಮೇಶ್ ನಾಯಕರಾಗಿದ್ದು, ಪ್ರಿಯಾಂಕ ಚಿಂಚೊಳಿ ನಾಯಕಿ. ಮಡೆನೂರು ಮನು, ಲಕ್ಷ್ಮೀಶ್ ಭಟ್, ಸುಶ್ಮಿತಾ ಸೋನು, ಹರಿಣಿ ಶ್ರೀಕಾಂತ್, ಜೊತೆಗಿದ್ದಾರೆ. ಕಿರಣ್ ಕೃಷ್ಣಮೂರ್ತಿ ಸಂಗೀತ ಸಂೋಂಜನೆ, ನೌಶಾದ್ ಆಲಂ ಛಾಯಾಗ್ರಹಣ ಚಿತ್ರಕ್ಕಿದೆ.
ರಫ್ ಕಟ್ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ‘ವಿಕಿಪೀಡಿಯ’ ಚಿತ್ರ ತಯಾರಾಗಿದ್ದು, ಸೋಮು ಹೊಯ್ಸಳ ಚಿತ್ರದ ನಿರ್ದೇಶಕರು. ಯಶವಂತ್, ಆಶಿಕಾ ಸೋಮಶೇಖರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಚಿತ್ರದಲ್ಲಿ ರಕ್ಷಿತಾ, ರಾಧಾ ರಾಮಚಂದ್ರ, ಮೈಸೂರು ಶ್ರೀಹರಿ, ಮಂಜುನಾಥ ಹೆಗ್ಡೆ ಜತೆಗಿದ್ದಾರೆ. ರಾಕೇಶ್ ಮತ್ತು ನೀಲಿಮ ಸಂಗೀತ ಸಂೋಂಜನೆ, ಚಿದಾನಂದ್ ಎಚ್.ಕೆ. ಛಾಯಾಗ್ರಹಣ ಇದೆ.
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…